ಆ್ಯಪ್ನಗರ

ಚಿಕ್ಕಮಗಳೂರು: ಡಿಸೆಂಬರ್‌ನಲ್ಲಿ ನಡೆಯುವ ಗ್ರಾಮ ಪಂ. ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ 4 ಗ್ರಾಮದ ಜನರು, ಕಾರಣವೇನು?

ಗ್ರಾಮ ಪಂಚಾಯತ್‌ ಚುನಾವಣೆಗೆ ಯಾರಾದರೂ ನಾಮಪತ್ರ ಸಲ್ಲಿಸಿದರೆ ಅವರಿಗೆ ಹಾರ ಹಾಕಿ ಅಂತವರ ಮನೆ ಮುಂದೆ ಧರಣಿ ಕೂರುವುದಾಗಿ ಮಲೆನಾಡಿಗರು ಎಚ್ಚರಿಕೆ ನೀಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದು ಈ ಬಗ್ಗೆ ಬ್ಯಾನರ್‌ ಹಾಕಿದ್ದಾರೆ.

Vijaya Karnataka 2 Dec 2020, 11:36 am
ಚಿಕ್ಕಮಗಳೂರು: ಡಿಸೆಂಬರ್‌ ತಿಂಗಳಲ್ಲಿ ನಡೆಯುವ ಗ್ರಾಮ ಪಂಚಾಯತ್‌ ಚುನಾವಣೆ ಬಹಿಷ್ಕರಿಸಲು ಮಲೆನಾಡಿಗರು ಮುಂದಾಗಿದ್ದಾರೆ. ಗ್ರಾಮ ಪಂಚಾಯತ್‌ ಚುನಾವಣೆಗೆ ಯಾರಾದರೂ ನಾಮಪತ್ರ ಸಲ್ಲಿಸಿದರೆ ಅವರಿಗೆ ಹಾರ ಹಾಕಿ ಅಂತವರ ಮನೆ ಮುಂದೆ ಧರಣಿ ಕೂರುವುದಾಗಿ ಮಲೆನಾಡಿಗರು ಎಚ್ಚರಿಕೆ ನೀಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದು ಈ ಬಗ್ಗೆ ಬ್ಯಾನರ್‌ ಹಾಕಿದ್ದಾರೆ.
Vijaya Karnataka Web chikkamagaluru


ಆನ್‌ಲೈನ್‌ ಸೇರಿದಂತೆ ಯಾವುದೇ ವಿಧದಲ್ಲೂ ಯಾರೂ ಕೂಡ ನಾಮಪತ್ರ ಸಲ್ಲಿಸಬಾರದು ಎಂದು ಖಾಂಡ್ಯ ನಾಗರೀಕ ಹಿತರಕ್ಷಣಾ ವೇದಿಕೆ ಹಾಗೂ ಸರ್ವಜನಿಕರು ಸೂಚಿಸಿದ್ದಾರೆ. ಕಡವಂತಿ, ಹುಯಿಗೆರೆ, ದೇವದಾನ, ಬಿದರೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಬ್ಯಾನರ್‌ ಹಾಕಲಾಗಿದೆ. ಜನರು ಸಮಸ್ಯೆಯಲ್ಲಿದ್ದರು ಸರಕಾರ ತಿರುಗಿ ನೋಡಿತ್ತಿಲ್ಲ ಎನ್ನುವ ಕಾರಣಕ್ಕೆ ಚುನಾವಣೆ ಬಹಿಷ್ಕರಿಸಿ ತಕ್ಕ ಪಾಠ ಕಲಿಸಲು ಇದೀಗ ಸಾರ್ವಜನಿಕರು ಮುಂದಾಗಿದ್ದಾರೆ.

ಹುಲಿ ಯೋಜನೆ, ಬಫರ್ ಝೋನ್‌, ಕಸ್ತೂರಿ ರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯದ ತೂಗುಗತ್ತಿ ತೂಗುತ್ತಿ ಮಲೆನಾಡಿನ ಜನರ ಮೇಲಿದೆ. ಸರ್ಕಾರದ ಈ ಯೋಜನೆಗಳಿಂದ ಜಿಲ್ಲೆಯ ಮಲೆನಾಡು ಭಾಗದ ನೂರಾರು ಗ್ರಾಮಗಳೇ ಕಣ್ಮರೆಯಾಗಲಿವೆ. ಈ ಕಾರಣಕ್ಕೆ ಮಲೆನಾಡಿಗರು ಚುನಾವಣಾ ಬಹಿಷ್ಕಾರಕ್ಕೆ ಸಿದ್ಧತೆ ನಡೆಸಿದ್ದಾರೆ.

ಶ್ರೀ ಕೃಷ್ಣನ ತಂತ್ರವನ್ನೆಲ್ಲ ಬಳಸಿ ಗ್ರಾಮ ಪಂಚಾಯತ್‌ ಚುನಾವಣೆ ಗೆಲ್ಲಿ ; ಕೆಎಸ್‌ ಈಶ್ವರಪ್ಪ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ