ಆ್ಯಪ್ನಗರ

ಆರೋಗ್ಯ ಕವಚ ವಾಹನದಲ್ಲೇ ಹೆರಿಗೆ

ಹೆರಿಗೆಗಾಗಿ ಆಸ್ಪತ್ರೆಗೆ ಹೋಗುತ್ತಿದ್ದಾಗ ಮಾರ್ಗಮಧ್ಯೆ 108 ವಾಹನದಲ್ಲಿಯೇ ಹೆರಿಗೆಯಾಗಿರುವ ಘಟನೆ ಬುಧವಾರ ನಡೆದಿದೆ.

Vijaya Karnataka 5 Dec 2019, 5:00 am
ತರೀಕೆರೆ : ಹೆರಿಗೆಗಾಗಿ ಆಸ್ಪತ್ರೆಗೆ ಹೋಗುತ್ತಿದ್ದಾಗ ಮಾರ್ಗಮಧ್ಯೆ 108 ವಾಹನದಲ್ಲಿಯೇ ಹೆರಿಗೆಯಾಗಿರುವ ಘಟನೆ ಬುಧವಾರ ನಡೆದಿದೆ.
Vijaya Karnataka Web 4SID1_35


ಅಜ್ಜಂಪುರ ತಾಲೂಕು ಹಿರೇನಲ್ಲೂರು ಕಾವಲು ಗ್ರಾಮದ ನಿವಾಸಿ ಸುಧಾ ಅವರಿಗೆ ವಾಹನದಲ್ಲಿಯೇ ಹೆರಿಗೆಯಾಗಿದೆ. ಹೆರಿಗೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ಮಹಿಳೆ ರಕ್ತ ಹೀನತೆಯಿಂದ ಬಳಲುತ್ತಿದ್ದ ಕಾರಣ ವೈದ್ಯರ ಸಲಹೆಯಂತೆ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಬುಧವಾರ ಬೆಳಗ್ಗೆ ಸುಮಾರು 8 ಗಂಟೆಯ ಸಮಯದಲ್ಲಿಭದ್ರಾವತಿ ಬೈಪಾಸ್‌ ರಸ್ತೆಯ ಬಳಿ ಗಂಡು ಮಗುವಿಗೆ ಮಹಿಳೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. 108 ಆಂಬ್ಯುಲೆನ್ಸ್‌ನ ಶುಶ್ರೂಷಕ ಸಿದ್ದು, ಚಾಲಕ ಸಂತೋಷ್‌ ಅವರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ