ಆ್ಯಪ್ನಗರ

ಶೃಂಗೇರಿಯಲ್ಲಿ ಚುಂಚೋತ್ಸವಕ್ಕೆ ಚಾಲನೆ

ಶ್ರೀ ಆದಿಚುಂಚನಗಿರಿ ಶಾಖಾ ಮಠದ ಆವರಣದಲ್ಲಿ ಏರ್ಪಡಿಸಿರುವ ಮೂರು ದಿನದ ಚುಂಚೋತ್ಸವ 2019ಕ್ಕೆ ಭಾನುವಾರ ಸಂಜೆ ಮಂಗಳೂರು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಿದರು.

Vijaya Karnataka 7 Jan 2019, 5:00 am
ಶೃಂಗೇರಿ : ಶ್ರೀ ಆದಿಚುಂಚನಗಿರಿ ಶಾಖಾ ಮಠದ ಆವರಣದಲ್ಲಿ ಏರ್ಪಡಿಸಿರುವ ಮೂರು ದಿನದ ಚುಂಚೋತ್ಸವ 2019ಕ್ಕೆ ಭಾನುವಾರ ಸಂಜೆ ಮಂಗಳೂರು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಿದರು.
Vijaya Karnataka Web CKM-6SRI4


ಶ್ರೀ ಗುಣನಾಥ ಸ್ವಾಮೀಜಿ ಹಾಜರಿದ್ದರು. ಉತ್ಸವಕ್ಕೆ ಮಠದ ಆವರಣದಲ್ಲಿ ಪೂರ್ವ ಸಿದ್ಧತೆಗಳು ಭರದಿಂದ ಸಾಗಿದೆ. ಬೆಳಗ್ಗೆಯಿಂದಲೇ ವಿವಿಧ ಕಾರ್ಯಕ್ರಮ ನಡೆಯಲಿದೆ. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳ 75 ನೇ ಜಯಂತಿ ಅಮೃತ ಮಹೋತ್ಸವದ ಅಂಗವಾಗಿ ಸಂಸ್ಥೆಯಲ್ಲಿ 12ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಜ್ಞಾನ ವಿಜ್ಞಾನ ಅಧ್ಯನ ಕೇಂದ್ರವನ್ನು ಮಹಾಸಂಸ್ಥಾನದ ಡಾ. ಶ್ರೀನಿರ್ಮಲಾನಂದ ಸ್ವಾಮೀಜಿ ಉದ್ಘಾಟಿಸಲಿದ್ದು,ಜ..7 ರಂದು ಬೆಳಗ್ಗೆ ಸಾಮೂಹಿಕ ಸತ್ಯನಾರಾಯಣ ವ್ರತ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳ ಪ್ರಾಣ ಪ್ರತಿಷ್ಠಾಪನೆ,ತುಂಗಾ ನದಿಯಲ್ಲಿ ಗಂಗಾ ಪೂಜೆ,ಚಂಡಿಕಾ ಪೂಜೆ ಸ್ವಾಮೀಜಿಗಳ ಆಶೀರ್ವಚನ ನಡೆಯಲಿದೆ.

ಸಂಜೆ ನಡೆಯುವ ಚುಂಚೋತ್ಸವ ಹಾಗೂ ಬಿಎಡ್‌ ಮತ್ತು ಪಿಯು ಕಾಲೇಜಿನ ದಶಮಾನೋತ್ಸವ ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಸಂಸದೆ ಶೋಭಾ ಕರಂದ್ಲಾಜೆ ವಹಿಸುವರು. ತುಮಕೂರು ಕ್ಷೇತ್ರದ ಸಂಸದ ಮುದ್ದೇಹನುಮೇಗೌಡ,ಶಾಸಕ ಟಿ.ಡಿ.ರಾಜೇಗೌಡ,ವಿಧಾನ ಪರಿಷತ್‌ ಉಪ ಸಭಾಪತಿ ಎಸ್‌.ಎಲ್‌.ಧರ್ಮೇಗೌಡ,ಸದಸ್ಯ ಎಸ್‌.ಎಲ್‌.ಭೋಜೇಗೌಡ,ಮಾಜಿ ಶಾಸಕ ಡಿ.ಎನ್‌.ಜೀವರಾಜ್‌,ಕುವೆಂಪು ವಿವಿ ಉಪಕುಲಪತಿ ಜೋಗನ್‌ಶಂಕರ್‌,ಜಿಲ್ಲಾ ನ್ಯಾಯಾಧೀಶ ಡಾ.ಚಂದ್ರಶೇಖರಶೆಟ್ಟಿ,ಜಿಲ್ಲಾಧಿಕಾರಿ ಡಾ.ಎಂ.ಕೆ. ಶ್ರೀರಂಗಯ್ಯ,ಇಸ್ರೋ ಮಾಜಿ ಅಧ್ಯಕ್ಷ ಕಿರಣ್‌ಕುಮಾರ್‌ ಭಾಗವಹಿಸುವರು. ಯುವ ವಿಜ್ಞಾನಿ ಎನ್‌.ಎಂ.ಪ್ರತಾಪ್‌ ಅವರನ್ನು ಗೌರವಿಸಲಾಗುವುದು.ಜಾಲ್ಮರ ಸುಬ್ರಾವ್‌ ರಚಿಸಿದ ಗುರು ಚರಿತ್ರೆ ಕಥಾ ಕೀರ್ತನೆ ಮಾಲಿಕೆ ಬಿಡುಗಡೆಗೊಳಿಸಲಾಗುತ್ತದೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ