ಆ್ಯಪ್ನಗರ

ಕಟ್ಟಡ ಮಾಲೀಕರ ಪರಿಹಾರಕ್ಕೆ ಸಿಎಂ ಸೂಚನೆ

ನಗರದ ಐ.ಜಿ ರಸ್ತೆ ಮತ್ತು ಕೆ.ಎಂ. ರಸ್ತೆ ವಿಸ್ತರಣೆ ವೇಳೆ ಆಕ್ರಮಿಸಿಕೊಂಡಿದ್ದ ತಮ್ಮ ನಿವೇಶನಗಳಿಗೆ ಪರಿಹಾರ ನೀಡುವಂತೆ ಕಟ್ಟಡ ಮಾಲೀಕರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

Vijaya Karnataka 21 Jun 2019, 5:00 am
ಚಿಕ್ಕಮಗಳೂರು: ನಗರದ ಐ.ಜಿ ರಸ್ತೆ ಮತ್ತು ಕೆ.ಎಂ. ರಸ್ತೆ ವಿಸ್ತರಣೆ ವೇಳೆ ಆಕ್ರಮಿಸಿಕೊಂಡಿದ್ದ ತಮ್ಮ ನಿವೇಶನಗಳಿಗೆ ಪರಿಹಾರ ನೀಡುವಂತೆ ಕಟ್ಟಡ ಮಾಲೀಕರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
Vijaya Karnataka Web cm notice to compensation of the building owner
ಕಟ್ಟಡ ಮಾಲೀಕರ ಪರಿಹಾರಕ್ಕೆ ಸಿಎಂ ಸೂಚನೆ


ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ ಅವರ ನೇತೃತ್ವದಲ್ಲಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ಕಟ್ಟಡ ಮಾಲೀಕರು ಈ ಬಗ್ಗೆ ಮನವಿ ಸಲ್ಲಿಸಿದರು.ಐ.ಜಿ ರಸ್ತೆ ಮತ್ತು ಕೆ.ಎಂ.ರಸ್ತೆ ಅಗಲೀಕರಣದ ವೇಳೆ ಭೂಮಿ ಕಳೆದು ಕೊಳ್ಳುವ ಕಟ್ಟಡಗಳ ಮಾಲೀಕರಿಗೆ ಅಂದಿನ ಜಿಲ್ಲಾಧಿಕಾರಿಗಳು ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದರು. ಆದರೆ, ವಿಸ್ತರಣೆ ನಂತರ 10 ವರ್ಷ ಕಳೆದರೂ ಈವರೆಗೂ ತಮಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ದೂರಿದರು.

ಕಟ್ಟಡ ಮಾಲೀಕರಿಗೆ ಪರಿಹಾರ ನೀಡುವಂತೆ ರಾಜ್ಯ ಉಚ್ಚನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾಗಿದ್ದರೂ ಜಿಲ್ಲಾಡಳಿತ ಸ್ಪಂದಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಮಾಲೀಕರು ಆದಷ್ಟು ಶೀಘ್ರ ಪರಿಹಾರ ನೀಡುವಂತೆ ಆಗ್ರಹಿಸಿದರು.

ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪರಿಹಾರದ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಹಣಕಾಸು ಇಲಾಖೆ ಕಾರ್ಯದರ್ಶಿಗೆ ಸೂಚಿಸಿದರು. ಐ.ಜಿ.ರಸ್ತೆ ಮತ್ತು ಕೆ.ಎಂ.ರಸ್ತೆ ಕಟ್ಟಡ ಮಾಲೀಕರ ಸಂಘದ ಉಪಾಧ್ಯಕ್ಷ ನವೀದ್‌, ಕಾರ್ಯದರ್ಶಿ ಜಗದೀಶಾಚಾರ್‌, ಸಹಕಾರ್ಯದರ್ಶಿ ಸುಧೀರ್‌, ಕಟ್ಟಡ ಮಾಲೀಕರಾದ ಅರವಿಂದ್‌, ಪ್ರಶಾಂತ್‌, ಉಮಾಶಂಕರ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ