ಆ್ಯಪ್ನಗರ

ಅಭಿವೃದ್ಧಿ ಕಾಮಗಾರಿ ನಿಂತರೂ ಪರವಾಗಿಲ್ಲ, ನಿರಾಶ್ರಿತರಿಗೆ ಸೂರು: ಯಡಿಯೂರಪ್ಪ ಭರವಸೆ

ಭೀಕರ ನೆರೆಯಿಂದ ಮನೆ-ಮಠ ಕಳೆದುಕೊಂಡ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡುವುದೇ ನಮ್ಮ ಮೊದಲ ಅದ್ಯತೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Vijaya Karnataka Web 27 Aug 2019, 5:34 pm
ಚಿಕ್ಕಮಗಳೂರು: ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿ ನಿಂತರೂ ಪರವಾಗಿಲ್ಲ. ನಿರ್ಗತಿಕರಿಗೆ ಸೂರು ಕಲ್ಪಿಸುವುದಕ್ಕೆ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಪ್ರವಾಹ ಪೀಡಿತ ಮಲೆಮನೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದ ನೆರವಿನೊಂದಿಗೆ ಅಭಿವೃದ್ಧಿ ಕಾರ್ಯಕ್ಕೆ ಎಷ್ಟು ಹಣ ಬೇಕಾದರೂ ಕೊಡಲು ಸಿದ್ಧ ಎಂದು ಹೇಳಿದರು.

ನೆರೆ ಕುರಿತು ಅಧಿವೇಶನ ಕರೆಯುವಂತೆ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅಧಿವೇಶನ ಕರೆಯುವುದಕ್ಕೆ ಯಾವುದೇ ಅಭ್ಯಂತರವಿಲ್ಲ. ಶೀಘ್ರದಲ್ಲಿಯೇ ಅಧಿವೇಶನ ಕರೆದು ಚರ್ಚೆ ಮಾಡುತ್ತೇನೆಂದು ತಿಳಿಸಿದರು.

ಖಾತೆ ಹಂಚಿಕೆ ಪ್ರಶ್ನೆಗೆ ಗರಂ

ಖಾತೆ ಹಂಚಿಕೆ ಸಂಬಂಧ ಪಕ್ಷದಲ್ಲಿ ಅಸಮಾಧಾನ ಉಂಟಾಗಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಗರಂ ಆದ ಸಿಎಂ, 'ನಾನು ಬಂದಿರುವುದು ನೆರೆ ವೀಕ್ಷಣೆಗೆ. ಖಾತೆ ವಿಚಾರಕ್ಕೆ ಅಲ್ಲ' ಎಂದು ಸಿಡಿಮಿಡಿಗೊಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ