ಆ್ಯಪ್ನಗರ

ತೆಂಗಿನ ಕಾಯಿ ಚೂರು ಗಂಟಲಲ್ಲಿ ಸಿಲುಕಿ ಶಿಕ್ಷಕಿ ಸಾವು

ಚಿಕ್ಕಮಗಳೂರಿನಲ್ಲಿ ಗಂಟಲಿನಲ್ಲಿ ತೆಂಗಿನ ಕಾಯಿ ಚೂರು ಸಿಲುಕಿ ಶಿಕ್ಷಕಿಯೊಬ್ಬರು ಮೃತಪಟ್ಟಿದ್ದಾರೆ.

Vijaya Karnataka Web 10 Feb 2018, 2:41 pm
ಚಿಕ್ಕಮಗಳೂರು: ಗಂಟಲಿನಲ್ಲಿ ತೆಂಗಿನ ಕಾಯಿ ಚೂರು ಸಿಲುಕಿ ಶಿಕ್ಷಕಿಯೊಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ನಗರದ ಸಂಜೀವಿನಿ ಶಾಲೆಯ ಶಿಕ್ಷಕಿ ನವ್ಯಶ್ರೀ( 28) ಮೃತಪಟ್ಟವರು.
Vijaya Karnataka Web coconut stuck in throat and teacher died
ತೆಂಗಿನ ಕಾಯಿ ಚೂರು ಗಂಟಲಲ್ಲಿ ಸಿಲುಕಿ ಶಿಕ್ಷಕಿ ಸಾವು


ಇವರು ಹಿರೇಮಗಳೂರು ನಿವಾಸಿ. ಶಾಲೆಯ ಪಕ್ಕದಲ್ಲಿರುವ ಸಾಲಮರದಮ್ಮ ದೇವಾಲಯದಲ್ಲಿ ಪೂಜೆ ಮುಗಿಸಿ ತೆಂಗಿನ ಕಾಯಿ ತಿನ್ನುವಾಗ ಗಂಟಲಿನಲ್ಲಿ ಕಾಯಿ ಚೂರು ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ನಗರದ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದ್ದು,ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ