ಆ್ಯಪ್ನಗರ

ಕಾಲೇಜು ಶಿಕ್ಷಣ ಪ್ರಬುದ್ಧತೆಯ ಸಂಕೇತ

ಶಾಲಾ ವಾರ್ಷಿಕೋತ್ಸವವು ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆ ಅನಾವರಣಕ್ಕೆ ಉತ್ತಮ ವೇದಿಕೆ ಎಂದು ಅಭಿನವ ವಿದ್ಯಾತೀರ್ಥ ಪ್ರೌಢಶಾಲೆಯ ಮುಖ್ಯ ಶಿಕ್ಷ ಕ ಟಿ.ಆರ್‌.ಕೃಷ್ಣಮೂರ್ತಿ ಹೇಳಿದರು.

Vijaya Karnataka 27 Dec 2018, 5:00 am
ಶೃಂಗೇರಿ : ಶಾಲಾ ವಾರ್ಷಿಕೋತ್ಸವವು ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆ ಅನಾವರಣಕ್ಕೆ ಉತ್ತಮ ವೇದಿಕೆ ಎಂದು ಅಭಿನವ ವಿದ್ಯಾತೀರ್ಥ ಪ್ರೌಢಶಾಲೆಯ ಮುಖ್ಯ ಶಿಕ್ಷ ಕ ಟಿ.ಆರ್‌.ಕೃಷ್ಣಮೂರ್ತಿ ಹೇಳಿದರು.
Vijaya Karnataka Web CKM-26SRI1


ಪಟ್ಟಣಕ್ಕೆ ಸಮೀಪದ ವಿದ್ಯಾನಗರದ ಸ.ಪ.ಪೂ. ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.

ಶಿಕ್ಷ ಣ ಕೇವಲ ಅಂಕ ಗಳಿಕೆಯ ಸಾಧನವಲ್ಲ, ಶಿಕ್ಷಕರಿಂದ ಪಡೆಯುವ ಜ್ಞಾನ. ಕಾಲೇಜಿನ ಶಿಕ್ಷ ಣ ಪ್ರಬುದ್ಧತೆಗೆ ಸಾಕ್ಷಿಯಾಗಿದ್ದು, ವಿದ್ಯಾರ್ಥಿಗಳು ಪಾಶ್ಚಾತ್ಯ ಸಂಸ್ಕೃತಿಗೆ ಅವಲಂಬನೆ ಹೆಚ್ಚುತ್ತಿರುವುದು ವಿಷಾದನೀಯ. ನಮ್ಮ ದೇಶದ ಶ್ರೇಷ್ಠ ಗ್ರಂಥಗಳಾದ ಮಹಾಭಾರತ, ರಾಮಾಯಣ ಕೇವಲ ವೃದ್ಯಾಪ್ಯದಲ್ಲಿ ಓದುವ ಗ್ರಂಥಗಳೆಂದು ಭಾವಿಸದೆ, ವಿದ್ಯಾರ್ಥಿ ದಿಸೆಯಲ್ಲೂ ಅವುಗಳನ್ನು ಓದಬೇಕು. ಹೊಸ ವಷಾರ್ಚರಣೆ ಹೆಸರಿನಲ್ಲಿ ಮೋಜು, ಮಸ್ತಿ ಆಚರಿಸುವ ಯುವಕರು ಹಲವಾರು ಸಂಕಷ್ಟಕ್ಕೆ ಸಿಲುಕುತ್ತಾರೆ. ವಿವೇಕಾನಂದ, ರಾಮಕೃಷ್ಣ ಪರಮಹಂಸ, ಶಂಕರಚಾರ್ಯರು ಯುವಜನತೆಗೆ ಆದರ್ಶಪ್ರಾಯರು.ಎಂದರು.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಉಮೇಶ್‌ ಪುದುವಾಳ್‌ ಅಧ್ಯಕ್ಷ ತೆ ವಹಿಸಿ ಮಾತನಾಡಿ, ಕಾಲೇಜಿಗೆ ಅಗತ್ಯವಾಗಿದ್ದ ಎರಡು ಕೊಠಡಿ ನಿರ್ಮಾಣಗೊಂಡಿದ್ದು, ಶಾಸಕರು ಹೆಚ್ಚಿನ ಅನುದಾನ ನೀಡಿರುವುದರಿಂದ ಕಾಲೇಜಿನ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.

ಈ ಸಂದರ್ಭ ಕಾಲೇಜಿನಿಂದ ವರ್ಗಾವಣೆಗೊಂಡ .ಡಿ.ಉಮೇಶ್‌ ಅವರನ್ನು ಗೌರವಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆ ವಿಜೇತರಿಗೆ ಬಹುಮಾನ ನೀಡಲಾಯಿತು.

ಕಾಲೇಜು ಆಡಳಿತ ಮಂಡಳಿಯ ಸದಸ್ಯರಾದ ಸುಬ್ರಹ್ಮಣ್ಯ, ಕೆ.ಎಲ್‌.ಗೋಪಾಲಕೃಷ್ಣ, ಪ್ರಾಂಶುಪಾಲ ನಾಗರಾಜ್‌, ಶಿಕ್ಷ ಕ ಶಂಕರಭಟ್‌ ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ