ಆ್ಯಪ್ನಗರ

ಪಕ್ಷ ಬಯಸಿದರೆ ಹಾಸನದಿಂದ ಸ್ಪರ್ಧೆ: ಸಿ.ಟಿ.ರವಿ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಬಯಸಿದಲ್ಲಿ ಹಾಸನದಿಂದ ಸ್ಪರ್ಧೆ ಮಾಡುವುದಾಗಿ ಶಾಸಕ ಸಿ.ಟಿ.ರವಿ ಹೇಳಿದರು.

Vijaya Karnataka 27 Feb 2019, 5:00 am
ಸಖರಾಯಪಟ್ಟಣ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಬಯಸಿದಲ್ಲಿ ಹಾಸನದಿಂದ ಸ್ಪರ್ಧೆ ಮಾಡುವುದಾಗಿ ಶಾಸಕ ಸಿ.ಟಿ.ರವಿ ಹೇಳಿದರು.
Vijaya Karnataka Web competition from hassan if party wants ct ravi
ಪಕ್ಷ ಬಯಸಿದರೆ ಹಾಸನದಿಂದ ಸ್ಪರ್ಧೆ: ಸಿ.ಟಿ.ರವಿ


ಪಟ್ಟಣದಲ್ಲಿ ಜಿಲ್ಲಾಡಳಿತ ಸೋಮವಾರ ಆಯೋಜಿಸಿದ್ದ ಜನಸಂಪರ್ಕ ಸಭೆ ಮುಗಿದ ನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ. ಅಲ್ಲದೆ ಬೇರೆ ರಾಜ್ಯದಲ್ಲಿ ಸ್ಪರ್ಧಿಸಿ ಎಂದರೆ ಅದಕ್ಕೂ ನಾನು ಸಿದ್ಧ ಎಂದರು.

ನನ್ನ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್‌ ಕೊಟ್ಟರೂ ಗೆಲ್ಲಿಸಿ ಕಳುಹಿಸುವುದು ನಮ್ಮ ಜವಾಬ್ದಾರಿ. ಆದಷ್ಟು ಸ್ಥಳೀಯರಿಗೆ ಟಿಕೆಟ್‌ ಸಿಗಲಿ ಎಂಬುದು ಎಲ್ಲರ ಆಶಯ. ಈ ಬಾರಿ 400 ಸೀಟುಗಳನ್ನು ಪಡೆಯುವ ಮೂಲಕ ಎಲ್ಲ ಪ್ರತಿಪಕ್ಷ ಗಳಿಗೂ ಜನರು ಪಾಠ ಕಲಿಸುತ್ತಾರೆ. ಮತ್ತೊಮ್ಮೆ ಮೋದಿ ಪ್ರಧಾನಿಯಾಗುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ಪಾಕಿಸ್ತಾನದ ಮೇಲೆ ಪ್ರತೀಕಾರ ತೀರಿಸಿದ ನಮ್ಮ ಸೈನಿಕರಿಗೆ ನನ್ನ ಸಲಾಮ್‌. ಮುಂದೆ ನಮ್ಮ ತಂಟೆಗೆ ಯಾರೇ ಬಂದರೂ ತಕ್ಕ ಪಾಠ ಕಲಿಸುತ್ತೇವೆ. ಉಘ್ರಗಾಮಿಗಳಿಗೆ ನೆಲೆ ಕೊಡುವ ಯಾವುದೇ ದೇಶವಾಗಲಿ, ಒಳಗಿರುವ ಮತ್ತು ಹೊರಗಿರುವ ಉಘ್ರಗಾಮಿಗಳನ್ನು ಮಟ್ಟಹಾಕುತ್ತದೆ. ಭಾರತೀಯರಿಗೆ ಈ ಪ್ರತೀಕಾರದ ಧಾಳಿ ಸಂತೋಷವನ್ನುಂಟು ಮಾಡಿದೆ. ಇದಕ್ಕೆ ಕಾರಣರಾದ ಪ್ರಧಾನಿ ಮೋದಿ ಹಾಗೂ ಸರಕಾರಕ್ಕೆ ಧನ್ಯವಾದಗಳು. ಮುಂದೆಯೂ ಸಹ ಪ್ರಧಾನಿ ಆಗಿ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲಿ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ