ಆ್ಯಪ್ನಗರ

18 ತಿಂಗಳಲ್ಲಿ ಗೊಂಧಿ ನೀರಾವರಿ ಯೋಜನೆ ಕಾಮಗಾರಿ ಪೂರ್ಣ ; ಸಿಟಿ ರವಿ ಭರವಸೆ

ಜಿಲ್ಲೆಯ ಬಯಲುಸೀಮೆ ಪ್ರದೇಶಗಳ 197 ಕೆರೆಗಳಿಗೆ ಭದ್ರೆಯಿಂದ ನೀರು ಹರಿಸಬೇಕು ಎಂಬುದು ಈ ಭಾಗದ ಬಹುದಿನದ ಕನಸಾಗಿದೆ. ಕೆರೆಗಳಿಗೆ ನೀರು ತುಂಬಿಸುವ 1281.8 ಕೋಟಿ ರೂ.ನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ ದೊರಕಿದ್ದು, ಈ ಕಾಮಗಾರಿಯನ್ನು 18 ತಿಂಗಳಲ್ಲಿ ಪೂರ್ಣಗೊಳಿಸಿ ತಾಲೂಕಿನ ವಿವಿಧ ಕೆರೆಗಳಿಗೆ ನೀರು ಹರಿಸಲಾಗುವುದು ಎಂದು ಸಿ.ಟಿ.ರವಿ ಭರವಸೆ ನೀಡಿದರು.

Vijaya Karnataka Web 17 Nov 2020, 7:25 am
ಚಿಕ್ಕಮಗಳೂರು: ಗೊಂಧಿ ನೀರಾವರಿ ಯೋಜನೆ ಕಾಮಗಾರಿಯನ್ನು 18 ತಿಂಗಳಲ್ಲಿ ಪೂರ್ಣಗೊಳಿಸಿ ತಾಲೂಕಿನ ವಿವಿಧ ಕೆರೆಗಳಿಗೆ ನೀರು ಹರಿಸಲಾಗುವುದು ಎಂದು ಶಾಸಕ ಸಿ.ಟಿ.ರವಿ ಭರವಸೆ ನೀಡಿದರು.
Vijaya Karnataka Web CT Ravi


ಗೊಂಧಿ ನೀರಾವರಿಗೆ ಯೋಜನೆಗೆ ಅನುಮೋದನೆ ದೊರೆತಿರುವ ಹಿನ್ನೆಲೆಯಲ್ಲಿ ಲಕ್ಯಾ ಹೋಬಳಿ ಗ್ರಾಮಸ್ಥರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಜಿಲ್ಲೆಯ ಬಯಲುಸೀಮೆ ಪ್ರದೇಶಗಳ 197 ಕೆರೆಗಳಿಗೆ ಭದ್ರೆಯಿಂದ ನೀರು ಹರಿಸಬೇಕು ಎಂಬುದು ಈ ಭಾಗದ ಬಹುದಿನದ ಕನಸಾಗಿದೆ. ಕೆರೆಗಳಿಗೆ ನೀರು ತುಂಬಿಸುವ 1281.8 ಕೋಟಿ ರೂ.ನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ ದೊರಕಿದೆ ಎಂದರು.

ಪ್ರವಾಸಿ ತಾಣಗಳಲ್ಲಿ ಚೇತರಿಕೆಯತ್ತ ಹೋಟೆಲ್ ಉದ್ಯಮ: ಮೆರೆಯಾಗುತ್ತಿದೆ ಕೊರೊನಾ ಭೀತಿ..!

ತಾಲೂಕು ಲಕ್ಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾದರಸನ ಕೆರೆ ಹಾಗೂ ದಾಸರಹಳ್ಳಿ ಕೆರೆಗೆ ಬೈರಾಪುರ ಪಿಕಪ್‌ನಿಂದ ನೀರು ಒದಗಿಸುವ ಯೋಜನೆಗೆ ಟೆಂಡರ್‌ ಕರೆಯಲಾಗಿದೆ. ನವೆಂಬರ್‌ 27ರಂದು ಟೆಂಡರ್‌ ಪ್ರಕ್ರಿಯೆ ಮುಗಿಯಲಿದ್ದು ಮುಂದಿನ 18 ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಿ ಈ ಭಾಗದ ಜನರಿಗೆ ಅನುಕೂಲ ಮಾಡಿ ಕೊಡುವುದಾಗಿ ಭರವಸೆ ನೀಡಿದರು.

197 ಕೆರೆ ತುಂಬಿಸುವ 1282 ಕೋಟಿ ರೂ. ವೆಚ್ಚದ ಚಿಕ್ಕಮಗಳೂರು ಗೋಂದಿ ನೀರಾವರಿ ಯೋಜನೆಗೆ ಸಂ

ನೀರಾವರಿ ಸಮಿತಿ ಅಧ್ಯಕ್ಷ ಎಲ್‌.ಆರ್‌. ಈಶ್ವರಪ್ಪ ಮಾತನಾಡಿ ಬಯಲು ಸೀಮೆ ಜನರಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಯೋಜನೆಗೆ ಸಿ.ಟಿ ರವಿ ಅವರು ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಸಚಿವ ಸಂಪುಟದಲ್ಲಿ ಅನುಮೋದನೆ ದೊರಕಿಸಿ ಕೊಟ್ಟಿರುವುದು ಈ ಭಾಗದ ರೈತರಿಗೆ ಹರ್ಷದಾಯಕ ವಿಷಯ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ