ಆ್ಯಪ್ನಗರ

ಸ್ವತಂತ್ರ ಭಾರತದ ರೂವಾರಿ ಕಾಂಗ್ರೆಸ್‌

ಬ್ರಿಟಿಷರ ವಿರುದ್ಧ ಭಾರತೀಯರನ್ನು ಸಂಘಟಿಸಿ ಹೋರಾಟ ಮಾಡಿ ರಾಷ್ಟ್ರಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟದ್ದು ಕಾಂಗ್ರೆಸ್‌ ಪಕ್ಷ ಎಂದು ತರೀಕೆರೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗುಳ್ಳದಮನೆ ರಾಮಚಂದ್ರಪ್ಪ ಹೇಳಿದರು.

Vijaya Karnataka 1 Jan 2019, 5:00 am
ತರೀಕೆರೆ : ಬ್ರಿಟಿಷರ ವಿರುದ್ಧ ಭಾರತೀಯರನ್ನು ಸಂಘಟಿಸಿ ಹೋರಾಟ ಮಾಡಿ ರಾಷ್ಟ್ರಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟದ್ದು ಕಾಂಗ್ರೆಸ್‌ ಪಕ್ಷ ಎಂದು ತರೀಕೆರೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗುಳ್ಳದಮನೆ ರಾಮಚಂದ್ರಪ್ಪ ಹೇಳಿದರು.
Vijaya Karnataka Web CKM-31TKR1


ಪಟ್ಟಣದ ಪಕ್ಷ ದ ಕಚೇರಿಯಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್‌ ಪಕ್ಷ 133 ವರ್ಷ ಪೂರೈಸಿ 134ನೇ ವರ್ಷಕ್ಕೆ ಕಾಲಿಟ್ಟಿದೆ. ರಾಷ್ಟ್ರದಲ್ಲಿ ಬ್ರಿಟಿಷರ ಆಡಳಿತದ ವಿರುದ್ಧ ಹೋರಾಟ ಮಾಡಲು ಜನರನ್ನು ಸಂಘಟಿಸಿ ಹುರಿದುಂಬಿಸಿದಾಗ ಬ್ರಿಟಿಷರು ಅದನ್ನು ದಮನ ಮಾಡಲು ಪ್ರಯತ್ನಿಸಿದರು. ಆದರೂ ಪಕ್ಷ ದ ಮುಖಂಡರು ಎದೆಗುಂದದೆ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಬ್ರಿಟಿಷರ ವಿರುದ್ಧ ಹೋರಾಡಿದರು. ಮಹಾತ್ಮಾ ಗಾಂಧಿ, ಜವಹರಲಾಲ್‌ನೆಹರು, ಲಾಲ್‌ ಬಹದ್ದೂರ್‌ ಶಾಸ್ತ್ರಿ, ಇಂದಿರಾ ಗಾಂಧಿ, ಸೋನಿಯ ಗಾಂಧಿ, ರಾಹುಲ್‌ಗಾಂಧಿ ನೇತೃತ್ವದಲ್ಲಿ ರಾಜಕೀಯ ವರ್ಷವಾಗಿ ರೂಪುಗೊಂಡು ನ್ಯಾಯಯುತ ಆಡಳಿತ ನೀಡುತ್ತಾ ಬಂದಿದೆ ಎಂದರು.

ಮುಖಂಡ ಟಿ.ವಿ.ಶಿವಶಂಕರಪ್ಪ ಮಾತನಾಡಿ, ದೇಶದ ಅಭಿವೃದ್ಧಿಗೆ ಕಾಂಗ್ರೆಸ್‌ ಪಕ್ಷ ದ ನಿರ್ಧಾರಗಳೇ ಕಾರಣ. ಇಂದಿರಾಗಾಂಧಿಯವರು ತೆಗೆದುಕೊಂಡ ಉತ್ತಮ ನಿರ್ಣಯಗಳು ಈಗಲೂ ಜನಮಾನಸದಲ್ಲಿದ್ದು, ಬಡವರ ಆಶಾಕಿರಣವಾಗಿವೆ ಎಂದರು.

ಪುರಸಭೆ ಮಾಜಿ ಅಧ್ಯಕ್ಷ ಟಿ.ಎಸ್‌.ಪ್ರಕಾಶ್‌ವರ್ಮಾ ಮಾತನಾಡಿ, ಸುದೀರ್ಘ ಇತಿಹಾಸ ಇರುವ ಕಾಂಗ್ರೆಸ್‌ ಪಕ್ಷ ವನ್ನು ಅತ್ಯಂತ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಹಲವು ಹಿರಿಯ ಮುಖಂಡರ, ದಿಗ್ಗಜರ ಶ್ರಮ ಇದ್ದು, ಅವರ ಮಾರ್ಗದರ್ಶನದಲ್ಲಿ ನಾವು ನಡೆಯಬೇಕಿದೆ ಎಂದರು.

ಟಿ.ಈ. ಈರಣ್ಣ, ಹೇಮಲತಾ, ಮನ್ಸೂರ್‌ ಅಹಮದ್‌ ಸೇರಿದಂತೆ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ