ಆ್ಯಪ್ನಗರ

ಸಂವಿಧಾನ ಸರ್ವ ಜನರ ಹಿತಬಯಸುತ್ತದೆ

ಶೋಷಿತ ಸಮಾಜವನ್ನು ಮೇಲೆತ್ತಲು ಶ್ರಮಿಸದ ರಾಜಕೀಯ ಪಕ್ಷಗಳು ಚುನಾವಣೆ ಸಂದರ್ಭ ಡಾ.ಬಿ.ಆರ್‌.ಅಂಬೇಡ್ಕರ್‌ ಹೆಸರು ಬಳಸಿಕೊಂಡು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವುದು ಈ ದೇಶದ ದುರಂತ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಕೆ.ಸಿ.ವಸಂತಕುಮಾರ್‌ ಹೇಳಿದರು.

Vijaya Karnataka 29 Apr 2019, 5:00 am
ಚಿಕ್ಕಮಗಳೂರು: ಶೋಷಿತ ಸಮಾಜವನ್ನು ಮೇಲೆತ್ತಲು ಶ್ರಮಿಸದ ರಾಜಕೀಯ ಪಕ್ಷಗಳು ಚುನಾವಣೆ ಸಂದರ್ಭ ಡಾ.ಬಿ.ಆರ್‌.ಅಂಬೇಡ್ಕರ್‌ ಹೆಸರು ಬಳಸಿಕೊಂಡು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವುದು ಈ ದೇಶದ ದುರಂತ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಕೆ.ಸಿ.ವಸಂತಕುಮಾರ್‌ ಹೇಳಿದರು.
Vijaya Karnataka Web CKM-28rudrap2


ಅಂಬೇಡ್ಕರ್‌ ರಸ್ತೆಯ ಡಿಎಸ್‌ಎಸ್‌ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವಪೀಳಿಗೆ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ, ಶೋಷಿತರ ಪರವಾಗಿ ಶ್ರಮಿಸಿದವರ ವಿಚಾರ ಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದನ್ನು ಬಿಟ್ಟು ಟಿವಿಯಲ್ಲಿ ಬರುವ ಭವಿಷ್ಯ,ಧಾರಾವಾಹಿಗಳಿಂದ ಮೂಢನಂಬಿಕೆಗಳಿಗೆ ಒಳಗಾಗುತ್ತಿದ್ದಾರೆ ಎಂದರು.

ನಗರ ಪೊಲೀಸ್‌ ವೃತ್ತ ನಿರೀಕ್ಷ ಕ ನಿರಂಜನ್‌ಕುಮಾರ್‌ ಮಾತನಾಡಿ, ಪ್ರಪಂಚದಲ್ಲಿಯೆ ಬಲಿಷ್ಠ ಸಂವಿಧಾನ ನೀಡಿದ ಅಂಬೇಡ್ಕರ್‌ ಎಲ್ಲರಿಗೂ ಆದರ್ಶಪ್ರಾಯ. ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌ ಜಗತ್ತು ಕಂಡ ದೊಡ್ಡ ಜ್ಞಾನಿ. ಅವರು ದೇಶಕ್ಕೆ ಕೊಟ್ಟಿರುವ ಸಂವಿಧಾನ ಸರ್ವಜನರ ಹಿತ ಬಯಸುತ್ತದೆ ಎಂದರು.

ಜಿಲ್ಲಾ ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಹಿರಿಗಯ್ಯ ಮಾತನಾಡಿ, ದೇವರಿದ್ದಾನೊ, ಇಲ್ಲವೊ ಗೊತ್ತಿಲ್ಲ ಆದರೆ, ಸಂವಿಧಾನದ ಮೂಲಕ ಸಮಾನತೆಯನ್ನು ಎತ್ತಿಹಿಡಿದಿರುವ ಅಂಬೇಡ್ಕರ್‌ ಎಲ್ಲರ ದೇವರಂತೆ ಕಾಣುತ್ತಾರೆ ಎಂದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಚಂದ್ರಪ್ಪ ಮಾತನಾಡಿ, ಶಿಕ್ಷ ಣ ಒಂದರಿಂದಲೆ ಅಸಮಾನತೆ ಹೋಗಲಾಡಿಸಲು ಸಾಧ್ಯ ಎಂದು ಅಂಬೇಡ್ಕರ್‌ ಬಲವಾಗಿ ನಂಬಿದ್ದರು. ಶಿಕ್ಷ ಣ ಸಂಘಟನೆ ಮತ್ತು ಹೋರಾಟದಿಂದ ನಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯಎಂದು ತಿಳಿ ಹೇಳಿದ್ದಾರೆ ಎಂದರು. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ವಿ.ಧರ್ಮೇಶ್‌, ವಕೀಲ ಎಚ್‌.ಇ.ದೊಡ್ಡಯ್ಯ, ಯೋಗೀಶ್‌, ನಾಗರಾಜ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ