ಆ್ಯಪ್ನಗರ

ವಿವಾಹಕ್ಕೆ ಪೋಷಕರ ವಿರೋಧ: ವಿಷ ಸೇವಿಸಿ ಪ್ರೇಮಿಗಳ ಆತ್ಮಹತ್ಯೆ

ಮನೆಯಲ್ಲಿ ಮದುವೆಗೆ ಒಪ್ಪಲಿಲ್ಲ ಎಂಬ ಕಾರಣಕ್ಕೆ ಮನನೊಂದು ಪ್ರೇಮಿಗಳು ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ

Vijaya Karnataka Web 2 Oct 2019, 11:34 am
ಚಿಕ್ಕಮಗಳೂರು: ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದಿದೆ.
Vijaya Karnataka Web suicide


ನೂತನ್ (25) ಅಪೂರ್ವ (22) ಸಾವಿಗೆ ಶರಣಾದ ಪ್ರೇಮಿಗಳು.

ನೂತನ್ ಹಾಗೂ ಅಪೂರ್ವ ಪರಸ್ಪರ ಪ್ರೀತಿಸುತ್ತಿದ್ದು, ಇವರ ವಿವಾಹಕ್ಕೆ ಪೋಷಕರ ವಿರೋಧವಿತ್ತು. ಹೀಗಾಗಿ ಮನನೊಂದಿದ್ದ ಅವರು ಮದುವೆ ಮಾಡಿಕೊಂಡು ಬಳಿಕ ವಿಷ ಸೇವಿಸಿದ್ದರು. ಇವರಿಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ, ಇಂದು (ಬುಧವಾರ) ಇಬ್ಬರೂ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಮೂಡಿಗೆರಿ ಪಟ್ಟಣದ ಗೋಣಿಬೀಡು ಹಾಗೂ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ