ಆ್ಯಪ್ನಗರ

ಸಿಪಿಐ ಕಚೇರಿ ದ್ವಂಸ, ಕಾರ್ಯಕರ್ತರ ಆಕ್ರೋಶ

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಸಿಪಿಐ ಕಚೇರಿ ದ್ವಂಸ ಮಾಡಿರುವ ಕಿಡಿಗೇಡಿಗಳ ಕೃತ್ಯ ಖಂಡಿಸಿ ನಗರದಲ್ಲಿ ಸಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Vijaya Karnataka 5 Jan 2019, 5:00 am
ಚಿಕ್ಕಮಗಳೂರು : ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಸಿಪಿಐ ಕಚೇರಿ ದ್ವಂಸ ಮಾಡಿರುವ ಕಿಡಿಗೇಡಿಗಳ ಕೃತ್ಯ ಖಂಡಿಸಿ ನಗರದಲ್ಲಿ ಸಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Vijaya Karnataka Web ckm-4rudrap7


ನಗರದ ಆಜಾದ್‌ ಪಾರ್ಕಿನಲ್ಲಿ ಶುಕ್ರವಾರ ಸಮಾವೇಶಗೊಂಡ ಹಲವಾರು ಸಿಪಿಐ ಕಾರ್ಯಕರ್ತರು ಪಕ್ಷದ ಪರವಾಗಿ ಘೋಷಣೆ ಕೂಗಿ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿದರು.

ಈ ಸಂದರ್ಭ ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್‌.ಎಂ.ರೇಣುಕಾರಾಧ್ಯ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲು ಎಲ್ಲರಿಗೂ ಮುಕ್ತ ಅವಕಾಶವಿದೆ. ಸ್ವಾತಂತ್ರ್ಯವಿದೆ.ಆದರೆ, ಅಭಿಪ್ರಾಯವನ್ನು ಅರಗಿಸಿಕೊಳ್ಳದ ಮೂಲಭೂತವಾದಿಗಳು ಸಿಪಿಐ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಬೀಡಿಕಾರ್ಮಿಕರು ಮತ್ತು ಕೂಲಿ ಕಾರ್ಮಿಕರು ಕೈಯಿಂದ ಹಣ ಸಂಗ್ರಹಿಸಿ ಸಿಪಿಐ ಕಚೇರಿ ಅಲ್ಲಿ ತೆರೆದಿದ್ದರು. ಧೈರ್ಯವಿಲ್ಲದ ಕಿಡಿಗೇಡಿಗಳು ಮಧ್ಯರಾತ್ರಿಯಲ್ಲಿ ಪೆಟ್ರೋಲ್‌ ಹಾಕಿ ಸುಟ್ಟಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಿಪಿಐ ಮುಖಂಡ ಬಿ.ಅಮ್ಜದ್‌ ಮಾತನಾಡಿ, ಅಯ್ಯಪ್ಪಸ್ವಾಮಿ ದೇವಾಲಯ ವಿಷಯ ಸಂಬಂಧ ಸುಪ್ರಿಂ ಕೋರ್ಟ್‌ ನೀಡಿರುವ ತೀರ್ಪನ್ನು ಎಲ್ಲರು ಗೌರವಿಸಬೇಕು. ಇಲ್ಲದಿದ್ದರೆ ಬಹಳ ಅನಾಹುತ ನಡೆದುಹೋಗುತ್ತದೆ. ಅಲ್ಲಿನ ಸರಕಾರ ಸುಪ್ರೀಂ ಕೋರ್ಟ್‌ ತೀರ್ಪನ್ನು ಅನುಷ್ಠಾನ ಮಾಡಲು ಬದ್ದವಾಗಿದೆ. ಇದನ್ನು ಸಹಿಸಲಾರದೆ ಕಿಡಿಗೇಡಿಗಳು ಸಿಪಿಐ ಕಚೇರಿಗೆ ಬೆಂಕಿ ಹಾಕಿದ್ದಾರೆ ಎಂದು ಆರೋಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ