ಆ್ಯಪ್ನಗರ

ಭ್ರಷ್ಟಾಚಾರದ ಬಗ್ಗೆ ಡಿಕೆಶಿ ಮಾತನಾಡೋದು, ಭೂತದ ಬಾಯಲ್ಲಿ ಭಗವದ್ಗೀತೆಗೂ ವ್ಯತ್ಯಾಸವಿಲ್ಲ- ಸಿಟಿ ರವಿ ಟಾಂಗ್‌

ಕೊರೊನಾ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದ್ದಕ್ಕೆ ಆಧಾರ ಇದ್ದರೆ ಸಿದ್ದರಾಮಯ್ಯ ಕಂಪ್ಲೆಂಟ್ ಕೊಡಲಿ. ಆಧಾರ ಇದ್ದರೆ ನ್ಯಾಯಾಲಯ ಮತ್ತು ಲೋಕಾಯುಕ್ತಕ್ಕೆ ಸಲ್ಲಿಸಲಿ. ಸುಮ್ಮನೆ ಪ್ರಶ್ನೆ ಮಾಡುವುದು ತಪ್ಪು ಎಂದು ಸಿಟಿ ರವಿ ಹೇಳಿದ್ದಾರೆ.

Vijaya Karnataka 1 Aug 2020, 3:11 pm
ಚಿಕ್ಕಮಗಳೂರು: ಭ್ರಷ್ಟಾಚಾರದ ಬಗ್ಗೆ ಡಿ.ಕೆ. ಶಿವಕುಮಾರ್‌ ಮಾತನಾಡುವುದಕ್ಕೂ, ಭೂತದ ಬಾಯಲ್ಲಿ ಭಗವದ್ಗೀತೆ ನುಡಿಯುವುದಕ್ಕೂ ವ್ಯತ್ಯಾಸವಿಲ್ಲ ಎಂದು ಸಚಿವ ಸಿ.ಟಿ. ರವಿ ವ್ಯಂಗ್ಯವಾಡಿದ್ದಾರೆ.
Vijaya Karnataka Web ct ravi 1


ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ತನ್ನನ್ನ ನೇಣಿಗೆ ಏರಿಸಲಿ ಎಂದಿದ್ದಾರೆ. ಅವರು ಪ್ರಾಮಾಣಿಕರೇ ಎಂಬುದನ್ನು ಆತ್ಮಸಾಕ್ಷಿಗೆ ಪ್ರಶ್ನೆ ಮಾಡಿಕೊಳ್ಳಲಿ. ಕಾಂಗ್ರೆಸಿಗೆ ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲ. ಅವರ ಪಕ್ಷದಲ್ಲಿ ಇಂಟರ್ನಲ್ ಕಾಂಪಿಟೇಷನ್ ನಡೆಯುತ್ತಿರಬಹುದು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ನಡುವೆ ಪ್ರಚಾರಕ್ಕಾಗಿ ಕಾಂಪಿಟೇಷನ್ ನಡೆಯುತ್ತಿದೆ ಎಂದು ಹೇಳಿದರು.

ಭ್ರಷ್ಟಾಚಾರದ ಬಗ್ಗೆ ಸಿದ್ದರಾಮಯ್ಯ ಮಾತನಾಡುತ್ತಾರೆ. ರಿ ಡ್ಯೂವ್ ಎಂಬ ಹೊಸ ಪರಿಭಾಷೆಯನ್ನ ಯಾರು ಹುಟ್ಟಿಹಾಕಿದ್ದು ಸಿದ್ದರಾಮಯ್ಯನವರೇ? ಡಿನೋಟಿಫೈನಲ್ಲಿ ರಿ ಡ್ಯೂವ್ ಹುಟ್ಟು ಹಾಕಿ, 600 ಎಕರೆ ಡಿನೋಟಿಫೈ ಮಾಡಿದ್ರು. ಇದಕ್ಕೆ ಉತ್ತರ ಸಿಗಲೇ ಇಲ್ಲ. ಉತ್ತರ ಹೇಳಬೇಕಾದವರು ಇವತ್ತು ಪ್ರಶ್ನೆ ಕೇಳ್ತಿದ್ದಾರೆ. ಕೋವಿಡ್ ವಿಚಾರದಲ್ಲಿ ಭ್ರಷ್ಟಾಚಾರದ ಆಲೋಚನೆಯೇ ತಪ್ಪು. ಆಧಾರ ಇದ್ದರೆ ಸಿದ್ದರಾಮಯ್ಯ ಕಂಪ್ಲೆಂಟ್ ಕೊಡಲಿ. ಆಧಾರ ಇದ್ದರೆ ನ್ಯಾಯಾಲಯ ಮತ್ತು ಲೋಕಾಯುಕ್ತಕ್ಕೆ ಸಲ್ಲಿಸಲಿ. ಸುಮ್ಮನೆ ಪ್ರಶ್ನೆ ಮಾಡುವುದು ತಪ್ಪು. ಎಲುಬು ಇಲ್ಲದ ನಾಲಿಗೆ ಏನು ಬೇಕಾದರೂ ಮಾತನಾಡುತ್ತದೆ ಎಂಬುದು ಸಿದ್ದರಾಮಯ್ಯನವರಿಗೆ ಅನ್ವಯ ಆಗಬಾರದು. ಅವರು ಮುಖ್ಯಮಂತ್ರಿ ಯಾಗಿದ್ದವರು ಎಂದು ಹೇಳಿದರು.

ಸಿ.ಪಿ.ಯೋಗೇಶ್ವರ್‌ಗೆ ಇದೇ ವೇಳೆ ಚಿಕ್ಕಮಗಳೂರಿಗೆ ಬರುವಂತೆ ಸಿ.ಟಿ.ರವಿ ಆಹ್ವಾನ ನೀಡಿದರು. "ಬನ್ನಿ ನಮ್ಮ ಜಿಲ್ಲೆ ನಿಮಗೆ ಮಾದರಿ. ಪಂಚಾಯಿತಿಯಿಂದ ಪಾರ್ಲಿಮೆಂಟ್‌ವರೆಗೂ ಬಿಜೆಪಿಯೇ ಇದೆ. ನೀವು ರಾಮನಗರದಲ್ಲಿ ಅದೇ ರೀತಿ ಬಿಜೆಪಿ ಕಟ್ಟಿ. ಆಗ ನಿಮ್ಮ ಜಿಲ್ಲೆಯೂ ಮಾದರಿ ಜಿಲ್ಲೆಯಾಗುತ್ತದೆ," ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ