ಡಿ.10 ರಿಂದ ಮೂರು ದಿನ ಕಾರ್ಯಕ್ರಮ
ಪೊಲೀಸ್ ಇಲಾಖೆಯಿಂದ ಬಂದೋಬಸ್್ತ
ಗಣ್ಯರಿಗೆ, ಸ್ವಯಂ ಸೇವಕರಿಗೆ ಗುರುತಿನ ಚೀಟಿ
ಅಗತ್ಯವಿರುವೆಡೆ ಬ್ಯಾರಿಕೇಡ್ ಹಾಕಿ
ಕುಡಿವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ
ಚಿಕ್ಕಮಗಳೂರು: ದತ್ತಜಯಂತಿ ಕಾರ್ಯಕ್ರಮ ಡಿ.10 ರಿಂದ ಮೂರು ದಿನ ನಡೆಯಲಿದ್ದು,ಬರುವ ಭಕ್ತರಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿಗೌತಮ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಮಂಗಳವಾರ ಏರ್ಪಡಿಸಿದ್ದ ದತ್ತಜಯಂತಿ ಪೂರ್ವಭಾವಿ ಸಭೆಯಲ್ಲಿಅವರು ಮಾತನಾಡಿದರು. ಡಿ.10 ರಂದು ಅನುಸೂಯ ಜಯಂತಿ, 12 ರಂದು ದತ್ತ ಜಯಂತಿ ನಡೆಯಲಿದೆ. ಅಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಂದೋಬಸ್್ತ ಮಾಡುವ ಜತೆಗೆ ಗಣ್ಯರಿಗೆ, ಸ್ವಯಂ ಸೇವಕರಿಗೆ ಗುರುತಿನ ಚೀಟಿ ನೀಡಬೇಕು ಎಂದರು.
ಗಾಳಿಕೆರೆ ಮತ್ತು ಮಾಣಿಕ್ಯಧಾರ ರಸ್ತೆಗಳನ್ನು ದುರಸ್ತಿಪಡಿಸಿ ಸೂಚನಾ ಫಲಕ ಅಳವಡಿಸುವುದು ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜವಾಬ್ದಾರಿ. ರಸ್ತೆ ಪಕ್ಕದಲ್ಲಿನ ಗಿಡಗಂಟಿಗಳನ್ನು ತೆಗೆಯಬೇಕು. ಅಗತ್ಯವಿರುವ ಕಡೆ ಬ್ಯಾರಿಕೇಡ್ ಹಾಕುವುದು ಹಾಗೂ ತಾತ್ಕಾಲಿಕ ಶೌಚಾಯಲಯ ನಿರ್ಮಿಸಲು ನಿರ್ಮಿತಿ ಕೇಂದ್ರಕ್ಕೆ ಜವಾಬ್ದಾರಿ ವಹಿಸಿದ ಅವರು, ಹೊನ್ನಮ್ಮನಹಳ್ಳದ ಬಳಿಯ ಸ್ನಾನಘಟ್ಟವನ್ನು ದುರಸ್ತಿಪಡಿಸಿ ಸ್ವಚ್ಚಗೊಳಿಸುವಂತೆ ಅತ್ತಿಗುಂಡಿ ಗ್ರಾ.ಪಂ.ಪಿಡಿಒ ಗೆ ಸೂಚಿಸಿದರು.ದತ್ತಜಯಂತಿ ನಡೆಯುವ 3 ದಿನ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ, ತಾತ್ಕಾಲಿಕ ಆಸ್ಪತ್ರೆ ತೆರೆದು ಅಗತ್ಯ ಔಷಧಿ, ಆಂಬುಲೆನ್ಸ್ನೊಂದಿಗೆ ವೈದ್ಯಾಧಿಕಾರಿ ನಿಯೋಜಿಸುವಂತೆ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.
ಭಕ್ತರ ಅಗತ್ಯಕ್ಕೆ ತಕ್ಕಂತೆ ಮಿನಿ ಬಸ್ ಸೌಲಭ್ಯ ಒದಗಿಸುವಂತೆ ಕೆಎಸ್ಆರ್ಟಿಸಿ ಮತ್ತು ಆರ್ಟಿಒ ಗೆ ತಿಳಿಸಿದ ಅವರು ಮುನ್ನೆಚ್ಚರಿಕಾ ಕ್ರಮವಾಗಿ 2 ಕ್ರೇನ್ಗಳನ್ನು ಸ್ಥಳದಲ್ಲಿಇರಿಸುವಂತೆ ಸೂಚಿಸಿದರು.
ಕುಡಿವ ನೀರಿಗೆ ಸಮಸ್ಯೆಯಾಗದಂತೆ ನೀರಿನ ಟ್ಯಾಂಕರ್ ಒದಗಿಸಬೇಕು. ನಗರ ಹಾಗೂ ಇತರೆ ಸ್ಥಳಗಳಲ್ಲಿಅಲಂಕಾರ ಮಾಡಲು ನಗರಸಭೆ ಆಯುಕ್ತರಿಗೆ ಸೂಚಿಸಿದ ಅವರು, ಬಿಎಸ್ಎನ್ಎಲ್ ಸಂಪರ್ಕ ವ್ಯವಸ್ಥೆ ಸಮಪರ್ಕವಾಗಿ ಕಲ್ಪಿಸಬೇಕು ಎಂದರು.ಅಪರ ಜಿಲ್ಲಾಧಿಕಾರಿ ಡಾ.ಕುಮಾರ್, ತರೀಕೆರೆ ಉಪವಿಭಾಗಾಧಿಕಾರಿ ರೂಪ, ತಹಸೀಲ್ದಾರ್ ನಂದಕುಮಾರ್, ನಗರಸಭೆ ಆಯುಕ್ತ ಪರಮೇಶಿ, ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.
-----------------
ಚಿಕ್ಕಮಗಳೂರು ಪ್ರವಾಸಿ ತಾಣವಾಗಿದ್ದು, ಪ್ರತಿನಿತ್ಯ ಪ್ರವಾಸಿಗರು ಆಗಮಿಸುತ್ತಿರುತ್ತಾರೆ. ಆದರೆ,ದತ್ತ ಜಯಂತಿ ಕಾರ್ಯಕ್ರಮದ ಡಿಸೆಂಬರ್ 10, 11 ಮತ್ತು 12 ರಂದು ದತ್ತಪೀಠಕ್ಕೆ ಆಗಮಿಸುವ ಪ್ರವಾಸಿಗರನ್ನು ನಿರ್ಬಂಧಿಸಲಾಗುವುದು.
-ಡಾ.ಬಗಾದಿಗೌತಮ್ ಜಿಲ್ಲಾಧಿಕಾರಿ
---------------------------
ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೆ ಕಾರ್ಯಕ್ರಮ ಶಾಂತಿಯುತವಾಗಿ ನಡೆಯಲು ಎಲ್ಲರ ಸಹಕಾರ ಅತೀ ಮುಖ್ಯ. ಶಾಂತಿಯುತವಾಗಿ ಕಾರ್ಯಕ್ರಮ ನಡೆಯಲು ಅಗತ್ಯ ಪೊಲೀಸ್ ಬಂದೋಬಸ್್ತ ವ್ಯವಸ್ಥೆ ಮಾಡಲಾಗುವುದು.
-ಹರೀಶ್ ಪಾಂಡೆ ,ಭದ್ರತಾ ವ್ಯವಸ್ಥೆ ಬಗ್ಗೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ
ಪೊಲೀಸ್ ಇಲಾಖೆಯಿಂದ ಬಂದೋಬಸ್್ತ
ಗಣ್ಯರಿಗೆ, ಸ್ವಯಂ ಸೇವಕರಿಗೆ ಗುರುತಿನ ಚೀಟಿ
ಅಗತ್ಯವಿರುವೆಡೆ ಬ್ಯಾರಿಕೇಡ್ ಹಾಕಿ
ಕುಡಿವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ
ಚಿಕ್ಕಮಗಳೂರು: ದತ್ತಜಯಂತಿ ಕಾರ್ಯಕ್ರಮ ಡಿ.10 ರಿಂದ ಮೂರು ದಿನ ನಡೆಯಲಿದ್ದು,ಬರುವ ಭಕ್ತರಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿಗೌತಮ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಮಂಗಳವಾರ ಏರ್ಪಡಿಸಿದ್ದ ದತ್ತಜಯಂತಿ ಪೂರ್ವಭಾವಿ ಸಭೆಯಲ್ಲಿಅವರು ಮಾತನಾಡಿದರು. ಡಿ.10 ರಂದು ಅನುಸೂಯ ಜಯಂತಿ, 12 ರಂದು ದತ್ತ ಜಯಂತಿ ನಡೆಯಲಿದೆ. ಅಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಂದೋಬಸ್್ತ ಮಾಡುವ ಜತೆಗೆ ಗಣ್ಯರಿಗೆ, ಸ್ವಯಂ ಸೇವಕರಿಗೆ ಗುರುತಿನ ಚೀಟಿ ನೀಡಬೇಕು ಎಂದರು.
ಗಾಳಿಕೆರೆ ಮತ್ತು ಮಾಣಿಕ್ಯಧಾರ ರಸ್ತೆಗಳನ್ನು ದುರಸ್ತಿಪಡಿಸಿ ಸೂಚನಾ ಫಲಕ ಅಳವಡಿಸುವುದು ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜವಾಬ್ದಾರಿ. ರಸ್ತೆ ಪಕ್ಕದಲ್ಲಿನ ಗಿಡಗಂಟಿಗಳನ್ನು ತೆಗೆಯಬೇಕು. ಅಗತ್ಯವಿರುವ ಕಡೆ ಬ್ಯಾರಿಕೇಡ್ ಹಾಕುವುದು ಹಾಗೂ ತಾತ್ಕಾಲಿಕ ಶೌಚಾಯಲಯ ನಿರ್ಮಿಸಲು ನಿರ್ಮಿತಿ ಕೇಂದ್ರಕ್ಕೆ ಜವಾಬ್ದಾರಿ ವಹಿಸಿದ ಅವರು, ಹೊನ್ನಮ್ಮನಹಳ್ಳದ ಬಳಿಯ ಸ್ನಾನಘಟ್ಟವನ್ನು ದುರಸ್ತಿಪಡಿಸಿ ಸ್ವಚ್ಚಗೊಳಿಸುವಂತೆ ಅತ್ತಿಗುಂಡಿ ಗ್ರಾ.ಪಂ.ಪಿಡಿಒ ಗೆ ಸೂಚಿಸಿದರು.ದತ್ತಜಯಂತಿ ನಡೆಯುವ 3 ದಿನ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ, ತಾತ್ಕಾಲಿಕ ಆಸ್ಪತ್ರೆ ತೆರೆದು ಅಗತ್ಯ ಔಷಧಿ, ಆಂಬುಲೆನ್ಸ್ನೊಂದಿಗೆ ವೈದ್ಯಾಧಿಕಾರಿ ನಿಯೋಜಿಸುವಂತೆ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.
ಭಕ್ತರ ಅಗತ್ಯಕ್ಕೆ ತಕ್ಕಂತೆ ಮಿನಿ ಬಸ್ ಸೌಲಭ್ಯ ಒದಗಿಸುವಂತೆ ಕೆಎಸ್ಆರ್ಟಿಸಿ ಮತ್ತು ಆರ್ಟಿಒ ಗೆ ತಿಳಿಸಿದ ಅವರು ಮುನ್ನೆಚ್ಚರಿಕಾ ಕ್ರಮವಾಗಿ 2 ಕ್ರೇನ್ಗಳನ್ನು ಸ್ಥಳದಲ್ಲಿಇರಿಸುವಂತೆ ಸೂಚಿಸಿದರು.
ಕುಡಿವ ನೀರಿಗೆ ಸಮಸ್ಯೆಯಾಗದಂತೆ ನೀರಿನ ಟ್ಯಾಂಕರ್ ಒದಗಿಸಬೇಕು. ನಗರ ಹಾಗೂ ಇತರೆ ಸ್ಥಳಗಳಲ್ಲಿಅಲಂಕಾರ ಮಾಡಲು ನಗರಸಭೆ ಆಯುಕ್ತರಿಗೆ ಸೂಚಿಸಿದ ಅವರು, ಬಿಎಸ್ಎನ್ಎಲ್ ಸಂಪರ್ಕ ವ್ಯವಸ್ಥೆ ಸಮಪರ್ಕವಾಗಿ ಕಲ್ಪಿಸಬೇಕು ಎಂದರು.ಅಪರ ಜಿಲ್ಲಾಧಿಕಾರಿ ಡಾ.ಕುಮಾರ್, ತರೀಕೆರೆ ಉಪವಿಭಾಗಾಧಿಕಾರಿ ರೂಪ, ತಹಸೀಲ್ದಾರ್ ನಂದಕುಮಾರ್, ನಗರಸಭೆ ಆಯುಕ್ತ ಪರಮೇಶಿ, ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.
-----------------
ಚಿಕ್ಕಮಗಳೂರು ಪ್ರವಾಸಿ ತಾಣವಾಗಿದ್ದು, ಪ್ರತಿನಿತ್ಯ ಪ್ರವಾಸಿಗರು ಆಗಮಿಸುತ್ತಿರುತ್ತಾರೆ. ಆದರೆ,ದತ್ತ ಜಯಂತಿ ಕಾರ್ಯಕ್ರಮದ ಡಿಸೆಂಬರ್ 10, 11 ಮತ್ತು 12 ರಂದು ದತ್ತಪೀಠಕ್ಕೆ ಆಗಮಿಸುವ ಪ್ರವಾಸಿಗರನ್ನು ನಿರ್ಬಂಧಿಸಲಾಗುವುದು.
-ಡಾ.ಬಗಾದಿಗೌತಮ್ ಜಿಲ್ಲಾಧಿಕಾರಿ
---------------------------
ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೆ ಕಾರ್ಯಕ್ರಮ ಶಾಂತಿಯುತವಾಗಿ ನಡೆಯಲು ಎಲ್ಲರ ಸಹಕಾರ ಅತೀ ಮುಖ್ಯ. ಶಾಂತಿಯುತವಾಗಿ ಕಾರ್ಯಕ್ರಮ ನಡೆಯಲು ಅಗತ್ಯ ಪೊಲೀಸ್ ಬಂದೋಬಸ್್ತ ವ್ಯವಸ್ಥೆ ಮಾಡಲಾಗುವುದು.
-ಹರೀಶ್ ಪಾಂಡೆ ,ಭದ್ರತಾ ವ್ಯವಸ್ಥೆ ಬಗ್ಗೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ