ಆ್ಯಪ್ನಗರ

ದತ್ತ ಜಯಂತಿ: ಗಡಿಭಾಗದಲ್ಲಿ ಕಟ್ಟೆಚ್ಚರ

ಜಿಲ್ಲಾಕೇಂದ್ರ ಚಿಕ್ಕಮಗಳೂರಿನಲ್ಲಿ ಡಿ.21ರಂದು ದತ್ತ ಜಯಂತಿ ಅಂಗವಾಗಿ ಜಿಲ್ಲೆ ಮತ್ತು ತಾಲೂಕು ಗಡಿಭಾಗದಲ್ಲಿ ಸೂಕ್ತ ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಮೂಡಿಗೆರೆ ಪೋಲಿಸ್‌ ವೃತ್ತ ನಿರೀಕ್ಷ ಕ ಎಂ.ಜಗದೀಶ್‌ ತಿಳಿಸಿದ್ದಾರೆ.

Vijaya Karnataka 21 Dec 2018, 5:00 am
ಕೊಟ್ಟಿಗೆಹಾರ: ಜಿಲ್ಲಾಕೇಂದ್ರ ಚಿಕ್ಕಮಗಳೂರಿನಲ್ಲಿ ಡಿ.21ರಂದು ದತ್ತ ಜಯಂತಿ ಅಂಗವಾಗಿ ಜಿಲ್ಲೆ ಮತ್ತು ತಾಲೂಕು ಗಡಿಭಾಗದಲ್ಲಿ ಸೂಕ್ತ ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಮೂಡಿಗೆರೆ ಪೋಲಿಸ್‌ ವೃತ್ತ ನಿರೀಕ್ಷ ಕ ಎಂ.ಜಗದೀಶ್‌ ತಿಳಿಸಿದ್ದಾರೆ.
Vijaya Karnataka Web datta jayanti tigt security around the border
ದತ್ತ ಜಯಂತಿ: ಗಡಿಭಾಗದಲ್ಲಿ ಕಟ್ಟೆಚ್ಚರ


ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮೂಡಿಗೆರೆ ತಾಲೂಕಿನ ಗಡಿ ಭಾಗಗಳಾದ ಜನ್ನಾಪುರ, ಬಿಳುಗುಳ, ಕೊಟ್ಟಿಗೆಹಾರ ಭಾಗಗಳಲ್ಲಿ ಪೋಲಿಸ್‌ ನಾಕಾ ಬಂದಿ ಹಾಕಲಾಗಿದೆ. ಹೆಚ್ಚುವರಿ ಪೋಲಿಸರ ನೇಮಕ ಮಾಡಲಾಗಿದೆ. ಆಯಾ ಗ್ರಾಮ ಪಂಚಾಯಿತಿ ಪಿಡಿಒಗಳಿಗೂ ಚೆಕ್‌ಪೋಸ್ಟ್‌ಗಳಲ್ಲಿ ನಿಯೋಜಿಸಲಾಗಿದೆ. ಡಿ.22ರಂದು ಚಿಕ್ಕಮಗಳೂರು ಸೇರಿದಂತೆ ಮೂಡಿಗೆರೆ ಮಾರ್ಗದ ಕೆ.ಎಂ.ರಸ್ತೆಯ ಎಲ್ಲ ಅಂಗಡಿ ಮುಂಗಟ್ಟುಗಳು ಮುಂಜಾಗರೂಕತೆಯ ಹಿನ್ನೆಲೆಯಲ್ಲಿ ಮುಚ್ಚಲಿವೆ ಎಂದರು.

ನಂತರ ಮಾತನಾಡಿದ ಅವರು ಕೊಟ್ಟಿಗೆಹಾರ ಪ್ರವಾಸಿ ತಾಣವಾಗಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲಿಸ್‌ ಬಂದೋಬಸ್ತ್‌ ಮಾಡಲಾಗಿದೆ. ಧಾರ್ಮಿಕ ಸ್ಥಳಗಳಿಗೂ ಪೋಲಿಸ್‌ ಭದ್ರತೆ ನೀಡಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲೂ ಗಡಿ ಭಾಗದಿಂದ ಬರುವ ವಾಹನಗಳ ಮಾಹಿತಿ ಕಲೆ ಹಾಕಿ ತಪಾಸಣೆ ಮಾಡಿ ಬಿಡಲಾಗುತ್ತಿದೆ. ಮುನ್ನಚ್ಚರಿಕೆಯ ಕ್ರಮವಾಗಿ ಡಿ. 22ರಂದು ಕೊಟ್ಟಿಗೆಹಾರ ಪ್ರವಾಸಿಗರ ಕೇಂದ್ರ ಬಿಂದುವಾಗಿರುವುದರಿಂದ ಅಂಗಡಿಮುಂಗಟ್ಟುಗಳನ್ನು ಬೆಳಿಗ್ಗೆಯಿಂದ ಸಂಜೆವರೆಗೂ ಮುಚ್ಚಲು ಆದೇಶಿಸಲಾಗಿದೆ. ಗಡಿ ಭಾಗದಿಂದ ಬರುವ ಮತ್ತು ಹೋಗುವ ದತ್ತಮಾಲಾಧಾರಿಗಳಿಗೆ ಯಾವುದೆ ತೊಂದರೆಯಾಗದಂತೆ ಸೂಕ್ತ ಭದ್ರತೆ ಒದಗಿಸಲಾಗುತ್ತದೆ. ದತ್ತ ಜಯಂತಿ ಪ್ರಯುಕ್ತ ಪಶ್ಚಿಮ ವಲಯದ ಐಜಿ ಅರುಣ್‌ ಚಕ್ರವರ್ತಿ ಅವರು ಗುರುವಾರ ಮಂಗಳೂರಿನಿಂದ ಕೊಟ್ಟಿಗೆಹಾರ ಮಾರ್ಗವಾಗಿ ಚಿಕ್ಕಮಗಳೂರಿಗೆ ಆಗಮಿಸಿ ಸೂಕ್ತ ಬಂದೋಬಸ್ತ್‌ಗಾಗಿ ಪೂರ್ವ ಸಿದ್ದತೆಯ ಸಭೆಯಲ್ಲಿ ಭಾಗವಹಿಸಿದ್ದಾರೆ. ದತ್ತ ಜಯಂತಿ ಮುಗಿಯುವವರೆಗೂ ಅವರು ನಗರದಲ್ಲಿ ತಂಗಲಿದ್ದಾರೆ ಎಂದರು.

ಕೊಟ್ಟಿಗೆಹಾರ ಚೆಕ್‌ ಪೋಸ್ಟ್‌ನಲ್ಲಿ ಬಾಳೂರು ಪಿಎಸೈ ಮಲ್ಲಿಕಾರ್ಜುನ್‌ ಉಸ್ತುವಾರಿ ವಹಿಸಲಿದ್ದು, ಅವರೊಂದಿಗೆ ವಿವಿಧ ಅಧಿಕಾರಿಗಳು, ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಗಳಿರುವ ಒಂದು ಡಿಆರ್‌ ವಾಹನ ಹಾಗೂ ಸಿಬ್ಬಂದಿ ನಿಯೋಜಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ