ಆ್ಯಪ್ನಗರ

ನದಿಗೆ ಬಿದ್ದು ಸಾವು: ತೇಲಿಬಂತು ಮೃತದೇಹ

ಕಳಸ ಸಮೀಪದ ಅಂಬಾತೀರ್ಥದಲ್ಲಿ ಸೆಲ್ಫಿ ತೆಗೆಯಲು ಹೋಗಿ ನದಿಗೆ ಬಿದ್ದು ಎಂಜಿನಿಯರ್‌ವೊಬ್ಬರು ಮೃತಪಟ್ಟಿದ್ದು, 15 ದಿನಗಳ ಬಳಿಕ ಮೃತದೇಹ ಪತ್ತೆಯಾಗಿದೆ.

Vijaya Karnataka Web 9 Aug 2018, 11:27 am
ಚಿಕ್ಕಮಗಳೂರು: ಕಳಸ ಸಮೀಪದ ಅಂಬಾತೀರ್ಥದಲ್ಲಿ ಸೆಲ್ಫಿ ತೆಗೆಯಲು ಹೋಗಿ ನದಿಗೆ ಬಿದ್ದು ಎಂಜಿನಿಯರ್‌ವೊಬ್ಬರು ಮೃತಪಟ್ಟಿದ್ದು,
Vijaya Karnataka Web death.

15 ದಿನಗಳ ಬಳಿಕ ಮೃತದೇಹ ಪತ್ತೆಯಾಗಿದೆ.

ಕಿರಣ್ ಮೃತಪಟ್ಟವರು. ಬಂಡೆಯ ಮೇಲೆ ನಿಂತು ಸೆಲ್ಫಿ ತೆಗೆಯುವಾಗ ಕಾಲು ಜಾರಿ ನದಿಗೆ ಬಿದ್ದಿದ್ದರು. ಮೃತದೇಹವು ಮಾಗುಂಡಿ ಸಮೀಪದ ಭದ್ರಾ ನದಿಯಲ್ಲಿ ಪತ್ತೆಯಾಗಿದೆ. ಧಾರಾಕಾರ ಮಳೆ‌ಯಾದ‌ ಹಿನ್ನಲೆಯಲ್ಲಿ ಮೃತದೇಹ ನದಿಯಲ್ಲಿ ‌ತೇಲಿಬಂದಿದೆ.

ಕಿರಣ್‌ ಮಂಗಳೂರು ಸಮೀಪದ ತುಂಬೆ ಗ್ರಾಮದ ನಿವಾಸಿ ಕಿರಣ್ ಕೋಟ್ಯಾನ್ ಮಂಗಳೂರಿನಿಂದ ಸ್ನೇಹಿತರ ಜತೆ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದರು. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ