ಆ್ಯಪ್ನಗರ

ಕಾಡುಹಂದಿ ತಿವಿದು ವ್ಯಕ್ತಿ ಸಾವು?

ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಕಾಡುಹಂದಿ ದಾಳಿ ಮಾಡಿರಬಹುದು ಎಂದು ಊಹಿಸಲಾಗಿದೆ. ಶುಕ್ರವಾರ ಘಟನೆ ನಡೆದಿದ್ದು, ಶನಿವಾರ ಮೃತದೇಹ ಪತ್ತೆಯಾಗಿದೆ.

Vijaya Karnataka 7 Jul 2019, 5:00 am
ಚಿಕ್ಕಮಗಳೂರು: ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಕಾಡುಹಂದಿ ದಾಳಿ ಮಾಡಿರಬಹುದು ಎಂದು ಊಹಿಸಲಾಗಿದೆ. ಶುಕ್ರವಾರ ಘಟನೆ ನಡೆದಿದ್ದು, ಶನಿವಾರ ಮೃತದೇಹ ಪತ್ತೆಯಾಗಿದೆ.
Vijaya Karnataka Web death of a man who swallowed a wild boar
ಕಾಡುಹಂದಿ ತಿವಿದು ವ್ಯಕ್ತಿ ಸಾವು?


ಮಲ್ಲೇನಹಳ್ಳಿಯ ಕೆಂಚಪ್ಪ (55) ಮೃತಪಟ್ಟವರು. ಶುಕ್ರವಾರ ದನ ಹೊಡೆದುಕೊಂಡು ಹೋಗಿದ್ದವರು ಮನೆಗೆ ವಾಪಸ್ಸಾಗಿರಲಿಲ್ಲ. ಶನಿವಾರ ಬೆಳಗ್ಗೆ ಸ್ಥಳೀಯರಿಗೆ ಮೃತದೇಹ ಕಂಡುಬಂದಿದ್ದು, ದೇಹದಲ್ಲಿ ಗಾಯದ ಗುರುತುಗಳು ಕಂಡುಬಂದಿವೆ.

ಯಾವುದೋ ಕಾಡುಪ್ರಾಣಿ ದಾಳಿ ಮಾಡಿದಂತೆ ಗುರುತುಗಳಿದ್ದು, ಕಾಡುಹಂದಿ ತಿವಿತದಿಂದ ಮೃತಪಟ್ಟಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಗ್ರಾಮಾಂತರ ಪೊಲೀಸ್‌ ಠಾಣೆ ಪಿಎಸೈ ಗವಿರಾಜ್‌, ವಲಯ ಅರಣ್ಯಾಧಿಕಾರಿ ಎಸ್‌.ಎಲ್‌.ಶಿಲ್ಪ ಮತ್ತು ಸಿಬ್ಬಂದಿ ಭೇಟಿ ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ