ಆ್ಯಪ್ನಗರ

ಶೃಂಗೇರಿ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಆರೋಪಿಗಳಿಬ್ಬರಿಗೆ ಗಲ್ಲು ಶಿಕ್ಷೆ

2016ರ ಫೆಬ್ರವರಿ 16ರಂದು ಕಾಲೇಜಿಗೆ ಹೋಗಿದ್ದ ಸ್ವಾತಿ (ಹೆಸರು ಬದಲಿಸಲಾಗಿದೆ) ಮನಗೆ ವಾಪಸಾಗುತ್ತಿದ್ದ ವೇಳೆ ಸಂತೋಷ್‌, ಪ್ರದೀಪ್‌ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಅತ್ಯಾಚಾರ ಎಸಗಿ ಕೊಲೆ ಮಾಡಿ ಹಾಳು ಬಾವಿಗೆ ಎಸೆದಿದ್ದರು.

Vijaya Karnataka Web 18 Jan 2020, 2:29 pm
Vijaya Karnataka Web ಆರೋಪಿಗಳು
ಆರೋಪಿಗಳು
ಚಿಕ್ಕಮಗಳೂರು: ಶೃಂಗೇರಿ ವಿದ್ಯಾರ್ಥಿನಿ ಸ್ವಾತಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರಿಗೆ ಗಲ್ಲು ಶಿಕ್ಷೆ ವಿಧಿಸಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.

ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಉಮೇಶ್‌ ಎಂ ಅಡಿಗ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದರು.

ಸಂತೋಷ್‌, ಪ್ರದೀಪ್‌ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ಪ್ರಕಟಿಸಲಾಗಿದೆ.

ಘಟನೆ ಹಿನ್ನೆಲೆ

2016ರ ಫೆಬ್ರವರಿ 16ರಂದು ಕಾಲೇಜಿಗೆ ಹೋಗಿದ್ದ ಸ್ವಾತಿ (ಹೆಸರು ಬದಲಿಸಲಾಗಿದೆ) ಮನಗೆ ವಾಪಸಾಗುತ್ತಿದ್ದ ವೇಳೆ ಸಂತೋಷ್‌, ಪ್ರದೀಪ್‌ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಅತ್ಯಾಚಾರ ಎಸಗಿ ಕೊಲೆ ಮಾಡಿ ಹಾಳು ಬಾವಿಗೆ ಎಸೆದಿದ್ದರು.

ಕಳೆದ ನಾಲ್ಕು ವರ್ಷಗಳಿಂದ ಸತತ ವಿಚಾರಣೆ ಪೂರ್ಣಗೊಂಡ ಬಳಿಕ ಶನಿವಾರ (ಜನವರಿ 18, 2020ರಂದು) ತೀರ್ಪ ಪ್ರಕಟಗೊಂಡಿದೆ. ಚಿಕ್ಕಮಗಳೂರು ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ