ಆ್ಯಪ್ನಗರ

ಹಿರೇಕೊಳಲೆ ಕೆರೆಗೆ ಬಾಗಿನ ಅರ್ಪಣೆ

ಮನುಷ್ಯನಿಗೆ ಉಪಕೃತವಾಗುವ ಪ್ರಕೃತಿಯನ್ನು ನೆನೆಯುವುದು, ಕೃತಜ್ಞತೆಯಿಂದ ನಡೆದುಕೊಳ್ಳುವುದು ನಮ್ಮ ಸಂಸ್ಕೃತಿಯಾಗಬೇಕು ಎಂದು ಶಾಸಕ ಸಿ.ಟಿ.ರವಿ ಹೇಳಿದರು.

Vijaya Karnataka 11 Aug 2019, 5:00 am
ಚಿಕ್ಕಮಗಳೂರು : ಮನುಷ್ಯನಿಗೆ ಉಪಕೃತವಾಗುವ ಪ್ರಕೃತಿಯನ್ನು ನೆನೆಯುವುದು, ಕೃತಜ್ಞತೆಯಿಂದ ನಡೆದುಕೊಳ್ಳುವುದು ನಮ್ಮ ಸಂಸ್ಕೃತಿಯಾಗಬೇಕು ಎಂದು ಶಾಸಕ ಸಿ.ಟಿ.ರವಿ ಹೇಳಿದರು.
Vijaya Karnataka Web CKM-10shivup2


ನಗರದ ಹಲವು ಬಡಾವಣೆಗಳಿಗೆ ಕುಡಿವ ನೀರು ಪೂರೈಸುವ ಹಿರೇಕೊಳಲೆಕೆರೆ ತುಂಬಿ ಕೋಡಿಬಿದ್ದ ಹಿನ್ನೆಲೆಯಲ್ಲಿ ಶನಿವಾರ ಬಾಗಿನ ಸಮರ್ಪಣೆ ಮಾಡಿ ಮಾತನಾಡಿದರು.

ಹಿರೇಕೊಳಲೆ ಕೆರೆ ಕೋಡಿ ಬಿದ್ದಿರುವುದು ಸಂತಸ ನೀಡಿದೆ. ಮಳೆಯಿಂದ ಅನೇಕ ಸಮಸ್ಯೆಗಳಾಗಿವೆ. ರಾಜ್ಯದಲ್ಲಿ ಬಹುತೇಕ ಡ್ಯಾಂಗಳು ಭರ್ತಿಯಾಗಿವೆ. ಜಿಲ್ಲೆಯಲ್ಲಿರುವ ಎಲ್ಲ ಕೆರೆಕಟ್ಟೆಗಳು ಭರ್ತಿಯಾಗಿ ಬಾಗಿನ ಅರ್ಪಿಸುವಂತಾಗಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.

ಕೊಡಗು ಜಿಲ್ಲೆಯಲ್ಲಿ 21 ಕಡೆ ಪುನರ್ವಸತಿ ಶಿಬಿರ ತೆರೆಯಲಾಗಿದೆ. ನದಿ ಪ್ರದೇಶಗಳ ಬಳಿ ವಾಸಿಸುವ ಜನರ ಬದುಕು ಕಷ್ಟಕರವಾಗಿದೆ. ನಮ್ಮ ಜಿಲ್ಲೆಯಲ್ಲೂ ಮೂಡಿಗೆರೆ, ಕೊಟ್ಟಿಗೆಹಾರ, ಹಿರೇಬೈಲು, ಕಳಸ, ಜಯಪುರ, ಬಾಳೆಹೊನ್ನೂರು ಕಡೆಗಳಲ್ಲಿ ಮಳೆಯಿಂದ ಹಲವು ತೊಂದರೆಗಳಾಗಿದ್ದು, ಅದನ್ನು ಎದುರಿಸಲು ಜಿಲ್ಲಾಡಳಿತದ ಮೂಲಕ ಸರಕಾರ ಕ್ರಮ ಕೈಗೊಂಡಿದೆ ಎಂದರು.

ಪ್ರವಾಹ ಪರಿಸ್ಥಿತಿ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಭದ್ರಾ, ಹೇಮಾವತಿ ನದಿಪಾತ್ರದಲ್ಲಿ ಜಲಾವೃತವಾಗಿರುವ ಗ್ರಾಮಗಳ ಜನರನ್ನು ಸ್ಥಳಾಂತರಿಸಲು ಬೋಟ್‌ಗಳ ವ್ಯವಸ್ಥೆ ಮಾಡಲಾಗಿದೆ. ಅಗತ್ಯವಿದ್ದರೆ ಹೆಲಿಕಾಪ್ಟರ್‌ ವ್ಯವಸ್ಥೆ ಕಲ್ಪಿಸಲು ಕೋರಲಾಗಿದೆ. ಜಿಲ್ಲೆಯಲ್ಲಿ ಆಗುತ್ತಿರುವ ಪರಿಸ್ಥಿತಿಯ ಕ್ಷಣ ಕ್ಷಣದ ಮಾಹಿತಿ ಪಡೆದು ಸರಕಾರಕ್ಕೆ ತಿಳಿಸುವ ಕೆಲಸ ಮಾಡಲಾಗಿದೆ. ಅಗತ್ಯವಿದ್ದರೆ ಮುಖ್ಯಮಂತ್ರಿಯೂ ಜಿಲ್ಲೆಗೆ ಭೇಟಿ ನೀಡುವರು ಎಂದು ಹೇಳಿದರು.

ನಗರಸಭೆ ಮಾಜಿ ಸದಸ್ಯರಾದ ಎಚ್‌.ಡಿ.ತಮ್ಮಯ್ಯ, ಟಿ.ರಾಜಶೇಖರ್‌, ಪುಷ್ಪರಾಜ್‌, ನಗರಸಭೆ ಆಯುಕ್ತರ ಪರಮೇಶ್‌, ಎಇಇ ಲೋಕೇಶ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ