ಚಿಕ್ಕಮಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಡಿ.ಕೆ.ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಹೈಕಮಾಂಡ್ನ್ನು ಆಗ್ರಹಿಸಲು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಸಮಾನಮನಸ್ಕರ ಸಭೆ ನಿರ್ಣಯ ಕೈಗೊಂಡಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಡಿ.ಕೆ.ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಅತ್ಯಗತ್ಯ. ಡಿಕೆಶಿ ಗಟ್ಟಿತನ ಇರುವ ನಾಯಕ. ಪಕ್ಷ ಮತ್ತು ಕಾರ್ಯಕರ್ತರ ಹಿತರಕ್ಷಣೆಗಾಗಿ ಅವರು ದುಡಿಯುತ್ತಿದ್ದು, ಅಂತಹ ವ್ಯಕ್ತಿಯನ್ನು ಯಾವುದೇ ಕಾರಣಕ್ಕೂ ಮೂಲೆಗುಂಪು ಮಾಡಬಾರದು. ಡಿಕೆಶಿ ಪರ ಎಲ್ಲರೂ ಹೋರಾಟ ಮಾಡಬೇಕು ಎಂದು ಬಹುತೇಕ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.
ಪಕ್ಷ ಸಂಕಷ್ಟಕ್ಕೀಡಾದ ಎಲ್ಲ ಸಂದರ್ಭಗಳಲ್ಲಿ ಮುನ್ನುಗ್ಗಿ ರಕ್ಷಿಸುವ ಡಿಕೆಶಿ ಅವರನ್ನು ಮೂಲೆಗುಂಪು ಮಾಡಲಾಗುತ್ತಿದೆ. ಮೈತ್ರಿ ಸರಕಾರದಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ಜೆಡಿಎಸ್ಗೆ ನೀಡಿರುವ ಬಗ್ಗೆಯೂ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ ಮಾತನಾಡಿ, ಕೆಪಿಸಿಸಿ ಸಾರಥ್ಯವನ್ನು ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದರೆ ರಾಜ್ಯದಲ್ಲಿ ಪಕ್ಷವನ್ನು ಸದೃಢವಾಗಿ ಬೆಳೆಸಲು ಸಾಧ್ಯವಾಗುತ್ತದೆ. ಪಕ್ಷವನ್ನು ಕಟ್ಟಿ ಬೆಳೆಸುವ ಜತೆಗೆ ಸದಾಕಾಲ ಅದನ್ನು ರಕ್ಷಿಸುವ ನಾಯಕರ ಪರ ಎಲ್ಲರೂ ನಿಲ್ಲಬೇಕು ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಟರಾಜ್ ಮಾತನಾಡಿ, ಡಿಕೆಶಿ ಅವರಿಗೆ ಅಧ್ಯಕ್ಷ ಸ್ಥಾನ ನೀಡಿದರೆ ಮಾತ್ರ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ. ಸಚಿವ ಸ್ಥಾನದ ಜತೆಗೆ ಕೆಪಿಸಿಸಿ ಸಾರಥ್ಯವನ್ನೂ ಡಿಕೆಶಿಗೆ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಗಂಗಾಧರಗೌಡ ಮಾತನಾಡಿ, ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಶಕ್ತಿ ಕ್ಷೀಣಿಸುತ್ತಿದೆ. ರಾಜ್ಯದಲ್ಲೂ ಅದೇ ಪರಿಸ್ಥಿತಿ ಇದ್ದು, ಪಕ್ಷದ ಹಿತದೃಷ್ಟಿಯಿಂದ ಡಿಕೆಶಿಗೆ ಸಾರಥ್ಯ ನೀಡಬೇಕು. ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಗಮನಕ್ಕೂ ತರಬೇಕು ಎಂದು ಸಲಹೆ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮಹಮದ್ ಮಾತನಾಡಿದರು. ಜಿಲ್ಲಾ ಪ್ರಚಾರ ಸಮಿತಿ ಸದಸ್ಯ ಜಯಶೀಲ, ಮುಖಂಡರಾದ ಎಚ್.ಎನ್.ಮಹೇಶ್, ಸೋಮೇಶ್, ಕೃಷ್ಣೇಗೌಡ, ಬಿ.ಎಸ್.ಜಯರಾಂ, ಎಸ್.ಪೇಟೆ ಸತೀಶ್, ನಗರಸಭೆ ಸದಸ್ಯ ಬದ್ರು, ಪವನ್, ಯಶೋಧ ಹಾಜರಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಡಿ.ಕೆ.ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಅತ್ಯಗತ್ಯ. ಡಿಕೆಶಿ ಗಟ್ಟಿತನ ಇರುವ ನಾಯಕ. ಪಕ್ಷ ಮತ್ತು ಕಾರ್ಯಕರ್ತರ ಹಿತರಕ್ಷಣೆಗಾಗಿ ಅವರು ದುಡಿಯುತ್ತಿದ್ದು, ಅಂತಹ ವ್ಯಕ್ತಿಯನ್ನು ಯಾವುದೇ ಕಾರಣಕ್ಕೂ ಮೂಲೆಗುಂಪು ಮಾಡಬಾರದು. ಡಿಕೆಶಿ ಪರ ಎಲ್ಲರೂ ಹೋರಾಟ ಮಾಡಬೇಕು ಎಂದು ಬಹುತೇಕ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.
ಪಕ್ಷ ಸಂಕಷ್ಟಕ್ಕೀಡಾದ ಎಲ್ಲ ಸಂದರ್ಭಗಳಲ್ಲಿ ಮುನ್ನುಗ್ಗಿ ರಕ್ಷಿಸುವ ಡಿಕೆಶಿ ಅವರನ್ನು ಮೂಲೆಗುಂಪು ಮಾಡಲಾಗುತ್ತಿದೆ. ಮೈತ್ರಿ ಸರಕಾರದಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ಜೆಡಿಎಸ್ಗೆ ನೀಡಿರುವ ಬಗ್ಗೆಯೂ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ ಮಾತನಾಡಿ, ಕೆಪಿಸಿಸಿ ಸಾರಥ್ಯವನ್ನು ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದರೆ ರಾಜ್ಯದಲ್ಲಿ ಪಕ್ಷವನ್ನು ಸದೃಢವಾಗಿ ಬೆಳೆಸಲು ಸಾಧ್ಯವಾಗುತ್ತದೆ. ಪಕ್ಷವನ್ನು ಕಟ್ಟಿ ಬೆಳೆಸುವ ಜತೆಗೆ ಸದಾಕಾಲ ಅದನ್ನು ರಕ್ಷಿಸುವ ನಾಯಕರ ಪರ ಎಲ್ಲರೂ ನಿಲ್ಲಬೇಕು ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಟರಾಜ್ ಮಾತನಾಡಿ, ಡಿಕೆಶಿ ಅವರಿಗೆ ಅಧ್ಯಕ್ಷ ಸ್ಥಾನ ನೀಡಿದರೆ ಮಾತ್ರ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ. ಸಚಿವ ಸ್ಥಾನದ ಜತೆಗೆ ಕೆಪಿಸಿಸಿ ಸಾರಥ್ಯವನ್ನೂ ಡಿಕೆಶಿಗೆ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಗಂಗಾಧರಗೌಡ ಮಾತನಾಡಿ, ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಶಕ್ತಿ ಕ್ಷೀಣಿಸುತ್ತಿದೆ. ರಾಜ್ಯದಲ್ಲೂ ಅದೇ ಪರಿಸ್ಥಿತಿ ಇದ್ದು, ಪಕ್ಷದ ಹಿತದೃಷ್ಟಿಯಿಂದ ಡಿಕೆಶಿಗೆ ಸಾರಥ್ಯ ನೀಡಬೇಕು. ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಗಮನಕ್ಕೂ ತರಬೇಕು ಎಂದು ಸಲಹೆ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮಹಮದ್ ಮಾತನಾಡಿದರು. ಜಿಲ್ಲಾ ಪ್ರಚಾರ ಸಮಿತಿ ಸದಸ್ಯ ಜಯಶೀಲ, ಮುಖಂಡರಾದ ಎಚ್.ಎನ್.ಮಹೇಶ್, ಸೋಮೇಶ್, ಕೃಷ್ಣೇಗೌಡ, ಬಿ.ಎಸ್.ಜಯರಾಂ, ಎಸ್.ಪೇಟೆ ಸತೀಶ್, ನಗರಸಭೆ ಸದಸ್ಯ ಬದ್ರು, ಪವನ್, ಯಶೋಧ ಹಾಜರಿದ್ದರು.