ಆ್ಯಪ್ನಗರ

ದುರ್ಗದಹಳ್ಳಿ ಹಲಗಡಕ ರಸ್ತೆ ದುರಸ್ತಿಗೆ ಆಗ್ರಹ

ದುರ್ಗದಹಳ್ಳಿಯಿಂದ ಹಲಗಡಕಕ್ಕೆ ಸಾಗುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ದುರಸ್ತಿ ಮಾಡುವಂತೆ ದುರ್ಗದಹಳ್ಳಿ, ಹಲಗಡಕ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Vijaya Karnataka 18 Jun 2019, 5:00 am
ಕೊಟ್ಟಿಗೆಹಾರ: ದುರ್ಗದಹಳ್ಳಿಯಿಂದ ಹಲಗಡಕಕ್ಕೆ ಸಾಗುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ದುರಸ್ತಿ ಮಾಡುವಂತೆ ದುರ್ಗದಹಳ್ಳಿ, ಹಲಗಡಕ ಗ್ರಾಮಸ್ಥರು ಆಗ್ರಹಿಸಿದ್ದಾರೆ.
Vijaya Karnataka Web CKM-16KTG2


ರಸ್ತೆ ಇಬ್ಬದಿಯಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ರಸ್ತೆಯಲ್ಲೆ ಹರಿಯುತ್ತಿದೆ. ಕೆಲವೆಡೆ ರಸ್ತೆ ಪೂರ್ತಿ ನೀರು ನಿಲ್ಲುತ್ತಿದ್ದು ಜನರು ಸಂಚರಿಸುವುದೆ ದುಸ್ತರವಾಗಿದೆ. ವಾಹನ ಸವಾರರು ಕೂಡ ಈ ರಸ್ತೆಯಲ್ಲಿ ಹರಸಾಹಸ ಪಟ್ಟು ಸಂಚರಿಸಬೇಕಾಗಿದೆ. ರಸ್ತೆಯ ಅವ್ಯವಸ್ಥೆಯಿಂದಾಗಿ ಈ ಮಾರ್ಗವಾಗಿ ಬಾಡಿಗೆ ವಾಹನಗಳು ಬರಲು ಹಿಂದೇಟು ಹಾಕುತ್ತಿದ್ದು, ಗ್ರಾಮಸ್ಥರು ದುಪ್ಪಟ್ಟು ಬಾಡಿಗೆ ನೀಡುವಂತಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ಬಾರಿ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳು, ಅಧಿಕಾರಿಗಳು ಕೇವಲ ಭರವಸೆಗಷ್ಟೆ ಸೀಮಿತವಾಗಿದ್ದು, ಕೂಡಲೇ ರಸ್ತೆ ದುರಸ್ತಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ