ಆ್ಯಪ್ನಗರ

ಗರ್ಭಿಣಿಯರಿಗೆ ಇಲಾಖೆಯಿಂದ ಸೀಮಂತ

ತಾಲೂಕಿನ ದೊಡ್ಡಕುರುಬರಹಳ್ಳಿ ಸಮುದಾಯ ಭವನದಲ್ಲಿಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಪೋಷಣಾ ಮಾಸಾಚರಣೆಯಲ್ಲಿಗರ್ಭಿಣಿಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸೀಮಂತ ಕಾರ್ಯಕ್ರಮ ನೆರವೇರಿಸಲಾಯಿತು.

Vijaya Karnataka 27 Sep 2019, 5:00 am
ಚಿಕ್ಕಮಗಳೂರು: ತಾಲೂಕಿನ ದೊಡ್ಡಕುರುಬರಹಳ್ಳಿ ಸಮುದಾಯ ಭವನದಲ್ಲಿಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಪೋಷಣಾ ಮಾಸಾಚರಣೆಯಲ್ಲಿಗರ್ಭಿಣಿಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸೀಮಂತ ಕಾರ್ಯಕ್ರಮ ನೆರವೇರಿಸಲಾಯಿತು.
Vijaya Karnataka Web 26SHIVUP7_35


ಸುತ್ತಮುತ್ತಲ ಗ್ರಾಮದ ಏಳೆಂಟು ಗರ್ಭಿಣಿಯರಿಗೆ ಇಲಾಖೆಯ ಮಹಿಳಾ ಅಧಿಕಾರಿಗಳು ಬಳೆ, ರವಿಕೆಖಣ, ಹಣ್ಣು, ಹೂವು ಉಡಿತುಂಬಿ ಹಾರೈಸಿದರು. ಇದಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿತಾ.ಪಂ.ಅಧ್ಯಕ್ಷ ಜಯಣ್ಣ ಮಾತನಾಡಿ, ಮಹಿಳೆಯರು ತರಕಾರಿ, ಹಣ್ಣು ಮತ್ತಿತರೆ ಪೌಷ್ಟಿಕ ಆಹಾರ ಸೇವಿಸಬೇಕು. ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸದೆ ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಉತ್ತಮ ಆರೋಗ್ಯ ಹೊಂದಲು ಪೌಷ್ಟಿಕಾಂಶದ ಆಹಾರವನ್ನು ಮನೆಯಲ್ಲಿಯೆ ತಯಾರಿಸಿ ಸೇವಿಸಬೇಕು. ಪ್ರತಿ ವರ್ಷ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದರು.

ಜಿಲ್ಲಾಆರೋಗ್ಯ ಶಿಕ್ಷಣಾಧಿಕಾರಿ ಜಲಜಾಕ್ಷಿ ಮಾತನಾಡಿ, ಮಹಿಳೆಯರು ಮತ್ತು ಗರ್ಭಿಣಿಯರ ಅನುಕೂಲಕ್ಕಾಗಿ ಸರಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ರಾಷ್ಟ್ರೀಯ ಪೋಷಣಾ ಮಾಸಾಚರಣೆ ಹಮ್ಮಿಕೊಂಡಿದೆ. ಆರೋಗ್ಯ ಸಮಸ್ಯೆಯಿಂದ ಯಾವುದೆ ಗರ್ಭಿಣಿ, ತಾಯಂದಿರು ಮತ್ತು ಶಿಶು ಮರಣ ಆಗದಂತೆ ವಿಶೇಷ ಕಾರ್ಯಕ್ರಮ ಹಾಕಿಕೊಂಡಿದೆ. ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ವಸಂತಕುಮಾರಿ ಮಾತನಾಡಿ, ಮಾತೃಪೂರ್ಣ ಯೋಜನೆಯಲ್ಲಿಗರ್ಭಿಣಿಯರಿಗೆ ಪ್ರತಿ ದಿನ ಅಂಗನವಾಡಿ ಕೇಂದ್ರದಲ್ಲಿಮಧ್ಯಾಹ್ನ ಪೌಷ್ಟಿಕ ಆಹಾರ ನೀಡಲಾಗುತ್ತಿದೆ ಎಂದರು. ಈ ಸಂದರ್ಭ ಡಾ.ಹೇಮಲತಾ, ಡಾ.ಮನೋಜ್‌, ಮಂಜುನಾಥ್‌, ರಾಜಮ್ಮ, ಮೇಲ್ವಿಚಾರಕರಾದ ಮಂಜುಳ, ಶಾರದ, ಶ್ವೇತ ಹಾಜರಿದ್ದರು. ಸುನಂದಾ ಸ್ವಾಗತಿಸಿ, ಭಾಗ್ಯ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ