ಚಿಕ್ಕಮಗಳೂರು: ವಿದ್ಯಾರ್ಥಿಗಳು ಮೊಬೈಲ್ ದಾಸರಾಗದೆ ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಪಂಚಾಯಿತಿ ಅಧ್ಯಕ್ಷೆ ಸಜಾತಕೃಷ್ಣಪ್ಪ ಹೇಳಿದರು.
ನಗರದ ಜಿಲ್ಲಾಶತಮಾನೋತ್ಸವ ಕ್ರೀಡಾಂಗಣದಲ್ಲಿಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿಬುಧವಾರ ಏರ್ಪಡಿಸಿದ್ದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚೆಗೆ ಮಕ್ಕಳು ಮೊಬೈಲ್ಗೆ ದಾಸರಾಗಿ ಕ್ರೀಡೆಗಳಲ್ಲಿಭಾಗವಹಿಸುವ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಮೊಬೈಲ್ನಿಂದ ಆಗುವ ಅಪಾಯಗಳನ್ನು ಅರಿತು ಕ್ರೀಡೆಗಳಲ್ಲಿತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಿಂತಾ ಅನಿಲ್ ಕುಮಾರ್ ಮಾತನಾಡಿ, ದಸರಾ ಕ್ರೀಡಾಕೂಟವನ್ನು ಪ್ರತಿ ಬಾರಿ ತಾಲೂಕು ಮಟ್ಟದಿಂದ ಆಯೋಜಿಸುತ್ತಿದ್ದು, ಅತಿವೃಷ್ಟಿಯ ಕಾರಣಕ್ಕೆ ನೇರವಾಗಿ ಜಿಲ್ಲಾಮಟ್ಟದಲ್ಲಿಆಯೋಜಿಸಿದೆ. ನಾಡ ಹಬ್ಬ ದಸರಾ ಪ್ರಯುಕ್ತ ನಡೆಯುತ್ತಿರುವ ಈ ಕ್ರೀಡಾಕೂಟ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ನೀಡುತ್ತದೆ ಎಂದರು.
ಜಿಲ್ಲಾಪಂಚಾಯಿತಿ ಸದಸ್ಯ ರವೀಂದ್ರ ಬೆಳವಾಡಿ ಮಾತನಾಡಿ, ಪುಸ್ತಕ ವಿದ್ಯೆ ಬುದ್ದಿಯನ್ನು ನೀಡಿದರೆ ಪುಸ್ತಕೇತರ ಚಟುವಟಿಕೆಗಳು ದೈಹಿಕ ಶಕ್ತಿಯನ್ನು ನೀಡುತ್ತದೆ. ಶಕ್ತಿ ಮತ್ತು ಬುದ್ದಿಯ ಸಮ್ಮಿಲನದಿಂದ ಭವಿಷ್ಯದಲ್ಲಿಉತ್ತಮ ಭಾರತದ ನಿರ್ಮಾಣ ಸಾಧ್ಯ ಎಂದರು.
ತಾಲೂಕು ಪಂಚಾಯಿತಿ ಅಧ್ಯಕ್ಷ ಜಯಣ್ಣ ನೆಟ್ಟೆಕೆರೆಹಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದೆ ಗುರು, ಮುಂದೆ ಗುರಿ ಇದ್ದಾಗ ಮಾತ್ರ ಅಸಾಧ್ಯವಾದುದ್ದನ್ನು ಸಾಧಿಸಬಹುದು ಎಂದು ಹೇಳಿದರು.
ಜಿಲ್ಲಾಪಂಚಾಯಿತಿ ಸದಸ್ಯರಾದ ಕವಿತಾಲಿಂಗರಾಜು, ಸೋಮಶೇಖರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಎಚ್.ಪಿ ಮಂಜುಳಾ, ಜಿಲ್ಲಾವಾಲಿಬಾಲ್ ತರಬೇತುದಾರರಾದ ಸಿ.ಎಸ್.ವಿನುತಾ, ಚಿಕ್ಕಮಗಳೂರು ಅಥ್ಲೆಟಿಕ್ ಸಂಸ್ಥೆ ಕಾರ್ಯದರ್ಶಿ ಮಂಜುನಾಥ್, ಗಿರೀಶ್ ಮತ್ತಿತರರು ಹಾಜರಿದ್ದರು
ನಗರದ ಜಿಲ್ಲಾಶತಮಾನೋತ್ಸವ ಕ್ರೀಡಾಂಗಣದಲ್ಲಿಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿಬುಧವಾರ ಏರ್ಪಡಿಸಿದ್ದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚೆಗೆ ಮಕ್ಕಳು ಮೊಬೈಲ್ಗೆ ದಾಸರಾಗಿ ಕ್ರೀಡೆಗಳಲ್ಲಿಭಾಗವಹಿಸುವ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಮೊಬೈಲ್ನಿಂದ ಆಗುವ ಅಪಾಯಗಳನ್ನು ಅರಿತು ಕ್ರೀಡೆಗಳಲ್ಲಿತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಿಂತಾ ಅನಿಲ್ ಕುಮಾರ್ ಮಾತನಾಡಿ, ದಸರಾ ಕ್ರೀಡಾಕೂಟವನ್ನು ಪ್ರತಿ ಬಾರಿ ತಾಲೂಕು ಮಟ್ಟದಿಂದ ಆಯೋಜಿಸುತ್ತಿದ್ದು, ಅತಿವೃಷ್ಟಿಯ ಕಾರಣಕ್ಕೆ ನೇರವಾಗಿ ಜಿಲ್ಲಾಮಟ್ಟದಲ್ಲಿಆಯೋಜಿಸಿದೆ. ನಾಡ ಹಬ್ಬ ದಸರಾ ಪ್ರಯುಕ್ತ ನಡೆಯುತ್ತಿರುವ ಈ ಕ್ರೀಡಾಕೂಟ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ನೀಡುತ್ತದೆ ಎಂದರು.
ಜಿಲ್ಲಾಪಂಚಾಯಿತಿ ಸದಸ್ಯ ರವೀಂದ್ರ ಬೆಳವಾಡಿ ಮಾತನಾಡಿ, ಪುಸ್ತಕ ವಿದ್ಯೆ ಬುದ್ದಿಯನ್ನು ನೀಡಿದರೆ ಪುಸ್ತಕೇತರ ಚಟುವಟಿಕೆಗಳು ದೈಹಿಕ ಶಕ್ತಿಯನ್ನು ನೀಡುತ್ತದೆ. ಶಕ್ತಿ ಮತ್ತು ಬುದ್ದಿಯ ಸಮ್ಮಿಲನದಿಂದ ಭವಿಷ್ಯದಲ್ಲಿಉತ್ತಮ ಭಾರತದ ನಿರ್ಮಾಣ ಸಾಧ್ಯ ಎಂದರು.
ತಾಲೂಕು ಪಂಚಾಯಿತಿ ಅಧ್ಯಕ್ಷ ಜಯಣ್ಣ ನೆಟ್ಟೆಕೆರೆಹಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದೆ ಗುರು, ಮುಂದೆ ಗುರಿ ಇದ್ದಾಗ ಮಾತ್ರ ಅಸಾಧ್ಯವಾದುದ್ದನ್ನು ಸಾಧಿಸಬಹುದು ಎಂದು ಹೇಳಿದರು.
ಜಿಲ್ಲಾಪಂಚಾಯಿತಿ ಸದಸ್ಯರಾದ ಕವಿತಾಲಿಂಗರಾಜು, ಸೋಮಶೇಖರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಎಚ್.ಪಿ ಮಂಜುಳಾ, ಜಿಲ್ಲಾವಾಲಿಬಾಲ್ ತರಬೇತುದಾರರಾದ ಸಿ.ಎಸ್.ವಿನುತಾ, ಚಿಕ್ಕಮಗಳೂರು ಅಥ್ಲೆಟಿಕ್ ಸಂಸ್ಥೆ ಕಾರ್ಯದರ್ಶಿ ಮಂಜುನಾಥ್, ಗಿರೀಶ್ ಮತ್ತಿತರರು ಹಾಜರಿದ್ದರು