ಆ್ಯಪ್ನಗರ

ಬ್ರಾಹ್ಮಣ ಸಮುದಾಯ ಒಗ್ಗೂಡಿದರೆ ಅಭಿವೃದ್ಧಿ

ಆಧುನೀಕರಣ ಮತ್ತು ಜಾಗತೀಕರಣದಿಂದ ಬದಲಾಗಿರುವ ಇಂದಿನ ಸನ್ನಿವೇಶದಲ್ಲಿ ಬ್ರಾಹ್ಮಣ ಸಮುದಾಯ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕಾದರೆ ಒಗ್ಗೂಡಿ ಸಂಘಟಿತರಾಗಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ವಕ್ತಾರ ಮ.ಸ.ನಂಜುಂಡಸ್ವಾಮಿ ಸಲಹೆ ಮಾಡಿದರು.

Vijaya Karnataka 17 Dec 2018, 5:00 am
ಚಿಕ್ಕಮಗಳೂರು : ಆಧುನೀಕರಣ ಮತ್ತು ಜಾಗತೀಕರಣದಿಂದ ಬದಲಾಗಿರುವ ಇಂದಿನ ಸನ್ನಿವೇಶದಲ್ಲಿ ಬ್ರಾಹ್ಮಣ ಸಮುದಾಯ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕಾದರೆ ಒಗ್ಗೂಡಿ ಸಂಘಟಿತರಾಗಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ವಕ್ತಾರ ಮ.ಸ.ನಂಜುಂಡಸ್ವಾಮಿ ಸಲಹೆ ಮಾಡಿದರು.
Vijaya Karnataka Web developed if the brahmin community is united
ಬ್ರಾಹ್ಮಣ ಸಮುದಾಯ ಒಗ್ಗೂಡಿದರೆ ಅಭಿವೃದ್ಧಿ


ನಗರದ ಎಂಇಎಸ್‌ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಜಿಲ್ಲಾ ವಿಪ್ರನೌಕರರ ಕ್ಷೇಮಾಭ್ಯುದಯ ಸಂಘದ ಸರ್ವ ಸದಸ್ಯರ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಆಧುನೀಕರಣ ಮತ್ತು ಜಾಗತೀಕರಣದಿಂದ ಇಂದು ಬ್ರಾಹ್ಮಣ ಸಮುದಾಯ ಅನೇಕ ಸವಾಲು ಎದುರಿಸುತ್ತಿದೆ. ಬದಲಾದ ಸನ್ನಿವೇಶದಲ್ಲಿ ಆ ವರ್ಗದ ಅಸ್ತಿತ್ವಕ್ಕೆ ಸಂಚಕಾರ ಬಂದಿದೆ. ವಿಪ್ರ ಜನ ಈಗಲಾದರೂ ಎಚ್ಚೆತ್ತು ತಮ್ಮಲ್ಲಿರುವ ಆಂತರಿಕ ಭಿನ್ನಾಭಿಪ್ರಾಯ ಮತ್ತು ವೈರುಧ್ಯಗಳನ್ನು ಬದಿಗೊತ್ತಿ ಒಂದಾದರೆ ಮಾತ್ರ ಅವರ ಏಳಿಗೆ ಸಾಧ್ಯ ಎಂದರು.

ರಾಜ್ಯದಲ್ಲಿ ಜಾತ್ಯಾತೀತವಾಗಿ ಪ್ರತಿಭಾ ಪುರಸ್ಕಾರ ಮಾಡುತ್ತಿರುವ ಏಕೈಕ ಸಂಸ್ಥೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಎಂದ ಅವರು ಸಂಸ್ಥೆಯ ರಾಜ್ಯ ಘಟಕ ಪ್ರತಿವರ್ಷ ಎಲ್ಲ ಜಾತಿ, ಮತ ಮತ್ತು ಧರ್ಮದ ವಿದ್ಯಾರ್ಥಿಗಳಿಗೂ ಪ್ರತಿಭಾ ಪುರಸ್ಕಾರ ಮಾಡುತ್ತಿದೆ. ಜಿಲ್ಲಾ ಘಟಕಗಳು ಇದನ್ನು ಅನುಸರಿಸಬೇಕು. ಎಲ್ಲ ವಿಪ್ರ ಸಂಘಟನೆಗಳು ಒಗ್ಗೂಡಿ ಒಂದೇ ವೇದಿಕೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಿಸಬೇಕು ಎಂದು ಸಲಹೆ ಮಾಡಿದರು.

ಸಂಘದ ಜಿಲ್ಲಾ ಗೌರವಾಧ್ಯಕ್ಷ ಎ.ವಿ.ಅನಂತರಾಮಯ್ಯ ಪ್ರಾಸ್ತಾವಿಸಿ ತಮ್ಮ ಸಂಸ್ಥೆ ಹಲವು ವರ್ಷದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ, ಸಮುದಾಯದ ಸಾಧಕರಿಗೆ ಸನ್ಮಾನದಂತಹ ಸಮಾಜಮುಖಿ ಕಾರ್ಯ ನಡೆಸುತ್ತಾ ಬಂದಿದೆ. ವಿಪ್ರರನ್ನು ಸಂಘಟಿಸಲು ದುಡಿಯುತ್ತಿದೆ ಎಂದರು.

ಕೆನರಾ ಬ್ಯಾಂಕ್‌ ಸಹಾಯಕ ಮುಖ್ಯ ಪ್ರಬಂಧಕ ಎ.ಉಲ್ಲಾಸ್‌ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಿದರು. ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು ಉನ್ನತ ವ್ಯಾಸಂಗದಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ಮಾಡಲಾಯಿತು. ವಿದ್ಯಾರ್ಥಿ ವೇತನ ವಿತರಿಸಲಾಯಿತು.

ನಿವೃತ್ತ ನೌಕರರನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸಮುದಾಯದ ಹಿರಿಯ ದಂಪತಿಗಳನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಸಂಘದಿಂದ ಹೊರತರಲಾದ ನೂತನ ವರ್ಷದ ಕ್ಯಾಲೆಂಡರ್‌ನ್ನು ಬಿಡುಗಡೆಗೊಳಿಸಲಾಯಿತು.ಜಿಲ್ಲಾ ವಿಪ್ರ ನೌಕರರ ಕ್ಷೇಮಾಭ್ಯುದಯ ಸಂಘದ ಅಧ್ಯಕ್ಷ ಎ.ಎಸ್‌.ಪ್ರಕಾಶ್‌ ಅಧ್ಯಕ್ಷ ತೆ ವಹಿಸಿದ್ದರು. ಕೊಪ್ಪ ಸಂಘದ ಗೌರವಾಧ್ಯಕ್ಷ ಎಚ್‌.ಎಸ್‌.ಗಣಪತಿ, ಬ್ರಾಹ್ಮಣ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವಿ.ಮಂಜುನಾಥ್‌, ಜಿಲ್ಲಾ ಕಾರ್ಯದರ್ಶಿ ಅಶ್ವಿನ್‌, ಅನಂತ್‌, ಉದ್ಯಮಿ ವೈ.ಟಿ.ನಾರಾಯಣ, ಪದ್ಮಾ ಶಿವಶಂಕರ್‌, ಸಂಘದ ಖಜಾಂಚಿ, ಎ.ಎಸ್‌.ಶ್ರೀಧರ್‌ ಹಾಜರಿದ್ದರು.ಕೆ.ಎಸ್‌. ನರಸಿಂಹಮೂರ್ತಿ ಸ್ವಾಗತಿಸಿ, ಸುಮಾ ಪ್ರಸಾದ್‌ ನಿರೂಪಿಸಿದರು. ಎಂ.ಸಿ.ಪ್ರಕಾಶ್‌ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ