ಆ್ಯಪ್ನಗರ

ಜಿಲ್ಲಾಸ್ಪತ್ರೆ ನ್ಯೂನತೆ ಸರಿ ಪಡಿಸಲು ಆಗ್ರಹ

ಜಿಲ್ಲಾ ಆಸ್ಪತ್ರೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸಿ ಬಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಬುಧವಾರ ಅಪರ ಜಿಲ್ಲಾಧಿಕಾರಿ ಡಾ.ಕುಮಾರ್‌ ಅವರಿಗೆ ಮನವಿ ನೀಡಲಾಯಿತು.

Vijaya Karnataka 4 Jul 2019, 5:00 am
ಚಿಕ್ಕಮಗಳೂರು : ಜಿಲ್ಲಾ ಆಸ್ಪತ್ರೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸಿ ಬಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಬುಧವಾರ ಅಪರ ಜಿಲ್ಲಾಧಿಕಾರಿ ಡಾ.ಕುಮಾರ್‌ ಅವರಿಗೆ ಮನವಿ ನೀಡಲಾಯಿತು.
Vijaya Karnataka Web district dispensation to remedy drawbacks
ಜಿಲ್ಲಾಸ್ಪತ್ರೆ ನ್ಯೂನತೆ ಸರಿ ಪಡಿಸಲು ಆಗ್ರಹ


ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಕೆ.ಸಿ.ವಸಂತಕುಮಾರ್‌ ಈ ಸಂದರ್ಭ ಮಾತನಾಡಿ, ಜಿಲ್ಲಾದ್ಯಂತ ಸಾಂಕ್ರಾಮಿಕ ರೋಗಗಳು ಹರಡಿವೆ. ಡೆಂಗೆ ಜ್ವರ ತಾಂಡವವಾಡುತ್ತಿದ್ದು. ಈ ಕಾಯಿಲೆಗೆ ತುತ್ತಾಗಿ ತುಂಬಾ ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದು ಜ್ವರ ಭಾದೆಯಿಂದ ಬಳಲುತ್ತಿದ್ದಾರೆ. ಮಲೇರಿಯ, ಡೆಂಗೆ, ಚಿಕುನ್‌ ಗುನ್ಯಾ ರೋಗಿಗಳನ್ನು ಒಂದೇ ಕೋಣೆಯಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ಕೊಡುತ್ತಿರುವುದು ಕಂಡುಬಂದಿದೆ. ಇದರಿಂದ ಒಬ್ಬರಿಂದ ಒಬ್ಬರಿಗೆ ಜ್ವರ ಹರಡಿ ರೋಗಿಯನ್ನು ಸಾವಿನ ಕಡೆಗೆ ದೂಡುತ್ತದೆ. ಈ ಹಿನ್ನೆಲೆಯಲ್ಲಿ ಡೆಂಗೆ ಮತ್ತು ಮಲ್ಲೇರಿಯ ಜ್ವರದ ಬಗ್ಗೆ ಪ್ರತ್ಯೇಕವಾಗಿ ರೋಗಿಗಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿದರು.

ತಾಲೂಕು ಸಂಚಾಲಕ ಚಂದ್ರಪ್ಪ ಮಾತನಾಡಿ ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಚತೆ ಇಲ.್ಲ ಶೌಚಾಲಯಗಳು ಗಬ್ಬು ನಾರುತ್ತಿವೆ, ಶುದ್ಧವಾದ ಕುಡಿಯುವ ನೀರಿಲ್ಲ. ಆಸ್ಪತ್ರೆಯಲ್ಲಿ ವೆಂಟಿಲೇಟರ್‌ ಇದ್ದರು ಉಪಯೋಗ ಆಗುತ್ತಿಲ.್ಲ ತುರ್ತು ಚಿಕಿತ್ಸೆಗೆ ಶಿವಮೊಗ್ಗ, ಹಾಸನ, ಬೆಂಗಳೂರಿಗೆ ಕಳುಹಿಸುತ್ತಾರೆ. ಇಲ್ಲಿಯೆ ಚಿಕಿತ್ಸೆ ನೀಡುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಾರ್ಕೆಟ್‌ ರಸ್ತೆಯನ್ನು ಡಾ.ಬಿ.ಆರ್‌.ಅಂಬೇಡ್ಕರ್‌ ರಸ್ತೆ ಎಂಬುದಾಗಿ ನಾಮಕರಣ ಮಾಡಿದ್ದರೂ ಕೆಲವು ವ್ಯಾಪಾರಸ್ಥರು ಮತ್ತು ಅಂಗಡಿ ಮಾಲೀಕರು ಅಂಬೇಡ್ಕರ್‌ ರಸ್ತೆ ಎಂದು ನಾಮಫಲಕ ಹಾಕದೆ ಮಾರ್ಕೆಟ್‌ ರಸ್ತೆ ಎಂದು ನಾಮಫಲಕ ಹಾಕುತ್ತಿದ್ದಾರೆ. ಹೀಗೆ ಮುಂದುವರಿದರೆ ನಾಮಫಲಕಕ್ಕೆ ಮಸಿ ಬಳಿಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.ಮುಖಂಡರಾದ ಚೌಡಪ್ಪ, ಧರ್ಮೇಶ್‌, ಯೋಗೀಶ್‌ ಮೋರ್‌ಕರ್‌,ನಿಂಗಯ್ಯ, ರಂಗಯ್ಯ, ಯಶೋಧರ, ಸುರೇಶ್‌, ಧರ್ಮರಾಜ್‌, ಸುರೇಶ, ರಂಗನಾಥ, ಮಂಜುನಾಥ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ