ಆ್ಯಪ್ನಗರ

ಅಪಾಯದಲ್ಲಿದೆ ಒಣಗಿದ ಮರ!

ಇತಿಹಾಸ ಪ್ರಸಿದ್ಧ ಹಿರೇಮಗಳೂರಿನ ಕೋದಂಡ ರಾಮಚಂದ್ರಸ್ವಾಮಿ ದೇವಾಲಯ ಸಮೀಪ ಬೃಹತ್‌ ಮರವೊಂದು ಒಣಗಿ ನಿಂತಿದ್ದು ಗಾಳಿಮಳೆಯಿಂದ ಯಾವಾಗ ಬೀಳುವುದೇ ಎಂಬ ಆತಂಕದಲ್ಲಿ ಸಾರ್ವಜನಿಕರು ಸಂಚರಿಸುವಂತಾಗಿದೆ.

Vijaya Karnataka 14 Jun 2019, 5:00 am
ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಹಿರೇಮಗಳೂರಿನ ಕೋದಂಡ ರಾಮಚಂದ್ರಸ್ವಾಮಿ ದೇವಾಲಯ ಸಮೀಪ ಬೃಹತ್‌ ಮರವೊಂದು ಒಣಗಿ ನಿಂತಿದ್ದು ಗಾಳಿಮಳೆಯಿಂದ ಯಾವಾಗ ಬೀಳುವುದೇ ಎಂಬ ಆತಂಕದಲ್ಲಿ ಸಾರ್ವಜನಿಕರು ಸಂಚರಿಸುವಂತಾಗಿದೆ.
Vijaya Karnataka Web CKM-13SHIVUP2


ಶ್ರೀ ಕೋದಂಡರಾಮಚಂದ್ರಸ್ವಾಮಿ ದೇವಾಲಯಕ್ಕೆ ನಿತ್ಯ ನೂರಾರು ಭಕ್ತರು ಭೇಟಿ ನೀಡುತ್ತಿದ್ದು ಯಾವ ಸಂದರ್ಭದಲ್ಲಿ ಮರ ಮುರಿದು ಬಿದ್ದು ಅನಾಹುತ ಸಂಭವಿಸುತ್ತದೋ ಎಂಬ ಭಯ ಭಕ್ತರನ್ನು ಕಾಡುತ್ತಿದೆ. ಮರದ ಕೆಳಭಾಗದಲ್ಲಿ ವಿದ್ಯುತ್‌ ವಯರ್‌ ಕೂಡ ಹಾದು ಹೋಗಿದೆ. ಅಕ್ಕಪಕ್ಕದಲ್ಲಿ ವಾಸದ ಮನೆಗಳಿರುವುದರಿಂದ ಮರ ಬಿದ್ದು ವಯರ್‌ ತುಂಡಾದರೆ ಅಪಾಯ ತಪ್ಪಿದ್ದಲ್ಲ. ಈ ಹಿನ್ನೆಲೆಯಲ್ಲಿ ಒಣಗಿದ ಮರ ತೆರವು ಮಾಡಬೇಕು ಎಂದು ಈಗಾಗಲೇ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ. ಅದರೆ, ಅಧಿಕಾರಿ, ಸಿಬ್ಬಂದಿ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ಈಗ ಮಾನ್ಸೂನ್‌ ಕೂಡ ಆರಂಭವಾಗುತ್ತಿದ್ದು ವೇಗದಲ್ಲಿ ಗಾಳಿ ಬೀಸುತ್ತಿದೆ. ಮಳೆ, ಗಾಳಿಯ ರಭಸಕ್ಕೆ ಮರ ಮುರಿದು ಬೀಳುವ ಮುನ್ನ ಸಂಬಂಧಿಸಿದ ಇಲಾಖೆ ಎಚ್ಚೆತ್ತುಕೊಂಡು ಸಂಭವನೀಯ ಅಪಘಾತ ತಪ್ಪಿಸಬೇಕು ಎಂಬುದು ಹಿರೇಮಗಳೂರು ಗ್ರಾಮಸ್ಥರ ಆಗ್ರಹವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ