ಆ್ಯಪ್ನಗರ

ಸಮಗ್ರ ಕೃಷಿ ಅಭಿಯಾನ 2019-20 ಕಾರ್ಯಕ್ರಮಕ್ಕೆ ಚಾಲನೆ

ಕಳೆದ ಬಾರಿ ಲಕ್ಕವಳ್ಳಿ ಹೋಬಳಿಯಲ್ಲಿ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ನಡೆದಿರಲಿಲ್ಲ. ಈ ಬಾರಿ ಅವಕಾಶ ದೊರೆತಿದೆ. ಹೋಬಳಿ ವ್ಯಾಪ್ತಿಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾ.ಪಂ. ಅಧ್ಯಕ್ಷೆ ಪದ್ಮಾವತಿ ಸಂಜೀವ್‌ಕುಮಾರ್‌ ಹೇಳಿದರು.

Vijaya Karnataka 17 Jun 2019, 5:00 am
ತರೀಕೆರೆ ಗ್ರಾಮಾಂತರ : ಕಳೆದ ಬಾರಿ ಲಕ್ಕವಳ್ಳಿ ಹೋಬಳಿಯಲ್ಲಿ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ನಡೆದಿರಲಿಲ್ಲ. ಈ ಬಾರಿ ಅವಕಾಶ ದೊರೆತಿದೆ. ಹೋಬಳಿ ವ್ಯಾಪ್ತಿಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾ.ಪಂ. ಅಧ್ಯಕ್ಷೆ ಪದ್ಮಾವತಿ ಸಂಜೀವ್‌ಕುಮಾರ್‌ ಹೇಳಿದರು.
Vijaya Karnataka Web CKM-16SID1


ಅವರು ಲಕ್ಕವಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆ, ವಿವಿಧ ಇಲಾಖೆಗಳ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ಸಮಗ್ರ ಕೃಷಿ ಅಭಿಯಾನ 2019-20 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ತಜ್ಞರಿಂದ ದೊರಕುವ ಉಪಯುಕ್ತ ಮಾಹಿತಿ ಪಡೆದು ಕೃಷಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಸಹಾಯಕ ಕೃಷಿ ನಿರ್ದೇಶಕ ಟಿ.ಎನ್‌.ಚಿತ್ರಸೇನ ಪ್ರಾಸ್ತಾವಿಕ ಮಾತನಾಡಿ, ಹೋಬಳಿಯ ಲಕ್ಕವಳ್ಳಿ, ಕೆಂಚಿಕೊಪ್ಪ, ಹಲಸೂರು, ಬರಗೇನಹಳ್ಳಿ, ಮುಡುಗೋಡು, ಬಾವಿಕೆರೆ, ಕರಕುಚ್ಚಿ, ಗೋಪಾಲ ಗ್ರಾಮಗಳಲ್ಲಿ 2 ದಿನ ವಾಹನದ ಮೂಲಕ ಪ್ರಚಾರ ಕಾರ್ಯ ನಡೆಸಲಾಗುವುದು. ಜೂ.18ರಂದು ಕೃಷಿ ವಿಜ್ಞಾನಿಗಳು, ಹಿರಿಯ ಅಧಿಕಾರಿಗಳು ರೈತರೊಂದಿಗೆ ಸಂವಾದ ಮತ್ತು ವಸ್ತು ಪ್ರದರ್ಶನ ನಡೆಸಲಿದ್ದು, ಜನಪ್ರತಿನಿಧಿಗಳು ಹಾಜರಿರುತ್ತಾರೆ ಎಂದು ತಿಳಿಸಿದರು.

ಜಿ.ಪಂ. ಸದಸ್ಯೆ ಚೈತ್ರ ಶ್ರೀ, ತಾ.ಪಂ. ಉಪಾಧ್ಯಕ್ಷೆ ಮಂಜುಳಾಬಾಯಿ, ಸದಸ್ಯರಾದ ಕೆಂಪೇಗೌಡ, ರಾಮಪ್ಪ, ಗ್ರಾ.ಪಂ. ಉಪಾಧ್ಯಕ್ಷೆ ವೀಣಾ, ಎಪಿಎಂಸಿ ನಿರ್ದೇಶಕ ಪಾಂಡುರಂಗ ಜಾದವ್‌, ಕೃಷಿ ಅಧಿಕಾರಿ ರಘು, ನಿವೃತ್ತ ಅಧಿಕಾರಿ ಪ್ರಕಾಶ್‌ಮೂರ್ತಿ ಹಾಗೂ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ