ಆ್ಯಪ್ನಗರ

ಮಕ್ಕಳ ಅಭಿರುಚಿಗೆ ತಕ್ಕಂತೆ ಶಿಕ್ಷ ಣ

ಮಕ್ಕಳ ಮನೋವಿಕಾಸಕ್ಕೆ ಶಿಕ್ಷ ಣದ ಜತೆಗೆ ಕ್ರೀಡೆ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಯಕತ್ವ ಗುಣವನ್ನೂ ಬೆಳೆಸಬೇಕು ಎಂದು ವಾಸವಿ ವಿದ್ಯಾ ಸಂಸ್ಥೆಯ ಸಹ ಕಾರ್ಯದರ್ಶಿ ಜಿ.ಎ.ದಿನೇಶ್‌ ಗುಪ್ತ ಹೇಳಿದರು.

Vijaya Karnataka 14 Jul 2019, 5:00 am
ಚಿಕ್ಕಮಗಳೂರು : ಮಕ್ಕಳ ಮನೋವಿಕಾಸಕ್ಕೆ ಶಿಕ್ಷ ಣದ ಜತೆಗೆ ಕ್ರೀಡೆ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಯಕತ್ವ ಗುಣವನ್ನೂ ಬೆಳೆಸಬೇಕು ಎಂದು ವಾಸವಿ ವಿದ್ಯಾ ಸಂಸ್ಥೆಯ ಸಹ ಕಾರ್ಯದರ್ಶಿ ಜಿ.ಎ.ದಿನೇಶ್‌ ಗುಪ್ತ ಹೇಳಿದರು.
Vijaya Karnataka Web CKM-13SHIVU-P3


ಬೈಪಾಸ್‌ ರಸ್ತೆಯಲ್ಲಿರುವ ನರ್ಚರ್‌ ಇಂಟರ್‌ ನ್ಯಾಶನಲ್‌ ಶಾಲೆಯ ವಾಸವಿ ಆನಂದ ಧಾಮದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ಶನಿವಾರ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕಲೆ, ಸಾಹಿತ್ಯ, ಸಂಗೀತ ಮತ್ತು ಕ್ರೀಡಾ ಕ್ಷೇತ್ರದಲ್ಲೂ ಸಾಧನೆ ಮಾಡಬೇಕು ಎಂದರು.

ನರ್ಚರ್‌ ಇಂಟರ್‌ ನ್ಯಾಷನಲ್‌ ಶಾಲೆಯ ಪ್ರಾಂಶುಪಾಲರಾದ ಸುಜಾತ ಮಾತನಾಡಿ, ನಮ್ಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಪೂರಕ ವಾತಾವರಣ ಕಲ್ಪಿಸಿದ್ದು ಗುಣಮಟ್ಟದ ಶಿಕ್ಷ ಣ ನೀಡಲಾಗುತ್ತಿದೆ ಎಂದರು.

ಬೇಸ್‌ಪ್ರೊ ಇಂಟೀರಿಯಲ್‌ ಫ್ಯಾಷನ್‌ ಡಿಸೈನರ್‌ ಕಾಲೇಜಿನ ಪ್ರಾಂಶುಪಾಲರಾದ ಅನುಪಮದಿನೇಶ್‌ ಗುಪ್ತ ಹಾಜರಿದ್ದರು. ವಿದ್ಯಾಶ್ರೀ ಸ್ವಾಗತಿಸಿ, ರಂಜಿತ ನಿರೂಪಿಸಿದರು. ನಂದಿನಿ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ