ಆ್ಯಪ್ನಗರ

ಸರಕಾರಿ ನೌಕರರ ಸಂಘದ ಪದಾಧಿಕಾರಿ ಹುದ್ದೆಗೆ ಚುನಾವಣೆ

ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ, ಖಜಾಂಚಿ ಮತ್ತು ರಾಜ್ಯ ಪರಿಷತ್‌ ಸದಸ್ಯರ ಆಯ್ಕೆ ಪ್ರಕ್ರಿಯೆಯ ವೇಳಾಪಟ್ಟಿ ಪ್ರಕಟಿಸಲಾಗಿದೆ.

Vijaya Karnataka 30 Jun 2019, 5:00 am
ಚಿಕ್ಕಮಗಳೂರು: ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ, ಖಜಾಂಚಿ ಮತ್ತು ರಾಜ್ಯ ಪರಿಷತ್‌ ಸದಸ್ಯರ ಆಯ್ಕೆ ಪ್ರಕ್ರಿಯೆಯ ವೇಳಾಪಟ್ಟಿ ಪ್ರಕಟಿಸಲಾಗಿದೆ.
Vijaya Karnataka Web election to the government employees union
ಸರಕಾರಿ ನೌಕರರ ಸಂಘದ ಪದಾಧಿಕಾರಿ ಹುದ್ದೆಗೆ ಚುನಾವಣೆ

ಜುಲೈ 1 ರಿಂದ 4ರವರೆಗೆ ನಾಮಪತ್ರಗಳ ವಿತರಿಸಲಿದ್ದು, ನಾಮಪತ್ರ ಸಲ್ಲಿಸಲು ಜು.4 ಕೊನೆದಿನ. ಅದೇ ದಿನ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ನಾಮಪತ್ರ ವಾಪಸ್‌ ಪಡೆಯಲು ಜು.6 ಕೊನೆದಿನ. ಅದೇ ದಿನ ಕಣದಲ್ಲಿರುವ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗಲಿದೆ. ಜು.11ರಂದು ಬೆಳಗ್ಗೆ 11 ರಿಂದ ಸಂಜೆ 4ರವರೆಗೆ ಕೆ.ಎಂ.ರಸ್ತೆಯಲ್ಲಿರುವ ಸರಕಾರಿ ನೌಕರರ ಭವನದಲ್ಲಿ ಮತದಾನ ನಡೆಯಲಿದೆ. ಅದೇ ದಿನ ಮತಗಳ ಎಣಿಕೆ ಮತ್ತು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ