ಆ್ಯಪ್ನಗರ

ಕಾಫಿ ತೋಟದಲ್ಲಿ ಕಾಡಾನೆ ಸಾವು

ಮೂಡಿಗೆರೆ ತಾಲೂಕಿನ ಆಲ್ದೂರು ಸಮೀಪದ ಹುಲ್ಲೇಮನೆ ವ್ಯಾಪ್ತಿಯ ಕಾಫಿತೋಟದಲ್ಲಿ 8 ವರ್ಷದ ಗಂಡು ಕಾಡಾನೆಯೊಂದು ಮೃತಪಟ್ಟಿದೆ.

Vijaya Karnataka 14 Jul 2019, 5:00 am
ಆಲ್ದೂರು ( ಚಿಕ್ಕಮಗಳೂರು ) : ಮೂಡಿಗೆರೆ ತಾಲೂಕಿನ ಆಲ್ದೂರು ಸಮೀಪದ ಹುಲ್ಲೇಮನೆ ವ್ಯಾಪ್ತಿಯ ಕಾಫಿತೋಟದಲ್ಲಿ 8 ವರ್ಷದ ಗಂಡು ಕಾಡಾನೆಯೊಂದು ಮೃತಪಟ್ಟಿದೆ.
Vijaya Karnataka Web CKM-13mdg-p2


ಹುಲ್ಲೇಮನೆ - ಕುಂದೂರು ಎಸ್ಟೇಟ್‌ನ ಚಂದ್ರೇಗೌಡ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ ಆನೆ ಮೃತಪಟ್ಟಿದೆ. ಶುಕ್ರವಾರ ಅಥವಾ ಶನಿವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಆನೆಯ ಹಿಂದಿನ ಬಲಗಾಲಿಗೆ ಪೆಟ್ಟು ಬಿದ್ದಿದ್ದು,ಮರಣೋತ್ತರ ಪರೀಕ್ಷೆಯ ನಂತರವಷ್ಟೇ ನಿಖರ ಮಾಹಿತಿ ಲಭ್ಯವಾಗಲಿದೆ.

'ಕಾಡಾನೆಯ ಸಾವಿಗೆ ನಿಖರವಾದ ಕಾರಣ ಗೊತ್ತಾಗಿಲ್ಲ. ಭಾನುವಾರ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮಾಹಿತಿ ಗೊತ್ತಾಗಲಿದೆ' ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಆಲ್ದೂರು ವಲಯ ಅರಣ್ಯಾಧಿಕಾರಿ ಮೋಹನ್‌ ವಿಜಯ ಕರ್ನಾಟಕಕ್ಕೆ ಮಾಹಿತಿ ನೀಡಿದರು.

ಕಾಡಾನೆಗಳ ಹಾವಳಿ : ಹುಲ್ಲೇಮನೆ ,ಕುಂದೂರು , ಸಾರಗೋಡು ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಕಾಡಾನೆಗಳ ಹಾವಳಿ ವಿಪರೀತವಾಗಿದ್ದು ಜನ ಭಯದಿಂದಲೇ ಜೀವನ ನಡೆಸುತ್ತಿದ್ದಾರೆ. ತೋಟದ ಕೆಲಸಗಳನ್ನು ಮಾಡಲು ಸಾಧ್ಯವಾಗದೆ ಹೈರಾಣಾಗಿದ್ದಾರೆ. ಆನೆಗಳು ಬೆಳೆಗಳನ್ನು ನಾಶ ಮಾಡುತ್ತಿದ್ದು, ಬೆಳೆಗಾರರು, ರೈತರು ನಷ್ಟ ಅನುಭವಿಸುತ್ತಿದ್ದಾರೆ. ಆನೆಗಳನ್ನು ಹಿಡಿದು ಸ್ಥಳಾಂತರಿಸಬೇಕು ಎಂದು ವಾಸಿಗಳಾದ ನಯನ್‌ ತಳವಾರ ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ