ಆ್ಯಪ್ನಗರ

ವಿಷ ಸೇವಿಸಿ ರೈತ ಆತ್ಮಹತ್ಯೆ

ಕಾಯಿಲೆಯಿಂದ ನರಳುತ್ತಿದ್ದ ರೈತ ಹೂವಣ್ಣ ( 50) ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka 29 Jul 2019, 5:00 am
ನರಸಿಂಹರಾಜಪುರ: ಕಾಯಿಲೆಯಿಂದ ನರಳುತ್ತಿದ್ದ ರೈತ ಹೂವಣ್ಣ ( 50) ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web farmer commits suicide by consuming poison
ವಿಷ ಸೇವಿಸಿ ರೈತ ಆತ್ಮಹತ್ಯೆ


ಇವರಿಗೆ ಪತ್ನಿ, ಮಕ್ಕಳು ಇದ್ದಾರೆ. ನಾಗಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಂಡಿನಕೊಪ್ಪ ಸಮೀಪದ ತಿರುಗುಂದದ ಹೂವಣ್ಣ ಉಬ್ಬಸ ಕಾಯಿಲೆಯಿಂದ ನರುಳುತ್ತಿದ್ದರು. ಇದರ ಜತೆಗೆ ಕೆಲ ವರ್ಷಗಳ ಹಿಂದೆ ಹೃದಯಾಘಾತವಾಗಿತ್ತು. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜು.16ರಂದು ವಿಷ ಸೇವಿಸಿದ್ದಾರೆ. ವಿಷಯ ತಿಳಿದ ಮನೆಯವರು ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಕಾರಿಯಾಗದ ಕಾರಣ ಮನೆಗೆ ಕರೆದುಕೊಂಡು ಬಂದಿದ್ದು, ಶನಿವಾರ ರಾತ್ರಿ ಮನೆಯಲ್ಲಿ ಮೃತಪಟ್ಟಿದ್ದಾರೆ.

ನರಸಿಂಹರಾಜಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ