ಆ್ಯಪ್ನಗರ

ಆರ್ಥಿಕ ಅಭಿವೃದ್ಧಿಗೆ ರೈತರಿಗೆ ತಿಳಿವಳಿಕೆ ಅಗತ್ಯ

ಸರಕಾರದ ಸವಲತ್ತು ಸದ್ಬಳಕೆ ಮಾಡಿಕೊಂಡು ರೈತರು ಆರ್ಥಿಕಾಭಿವೃದ್ಧಿ ಸಾಧಿಸುವ ಬಗ್ಗೆ ತಿಳಿವಳಿಕೆ ನೀಡುವುದು ಅಗತ್ಯ ಎಂದು ಜಿ.ಪಂ. ಸದಸ್ಯ ಕೆ.ಆರ್‌.ಪ್ರಭಾಕರ್‌ ಹೇಳಿದರು.

Vijaya Karnataka 21 Jul 2019, 5:00 am
ಚಿಕ್ಕಮಗಳೂರು : ಸರಕಾರದ ಸವಲತ್ತು ಸದ್ಬಳಕೆ ಮಾಡಿಕೊಂಡು ರೈತರು ಆರ್ಥಿಕಾಭಿವೃದ್ಧಿ ಸಾಧಿಸುವ ಬಗ್ಗೆ ತಿಳಿವಳಿಕೆ ನೀಡುವುದು ಅಗತ್ಯ ಎಂದು ಜಿ.ಪಂ. ಸದಸ್ಯ ಕೆ.ಆರ್‌.ಪ್ರಭಾಕರ್‌ ಹೇಳಿದರು.
Vijaya Karnataka Web CKM-18ARAGAP2


ಕಳಸ ಸಮೀಪದ ಬಾಳೆಹೊಳೆ ಚನ್ನಕೇಶವ ಸ್ವಾಮಿ ದೇವಾಲಯ ಸಭಾಂಗಣದಲ್ಲಿ ಗುರುವಾರ ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಯಿಂದ ಆಯೋಜಿಸಿದ್ದ ಸಮಗ್ರ ಕೃಷಿ ಅಭಿಯಾನದಲ್ಲಿ ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.

ಬಡ ರೈತರು, ಪರಿಶಿಷ್ಟ ಸಮುದಾಯದ ರೈತರಿಗೆ ಸರಕಾರ ಶೇ.90ರಷ್ಟು ಸಹಾಯಧನ ನೀಡುತ್ತಿದೆ. ತಾಲೂಕಿನ ಕೆಲ ಗ್ರಾಮಗಳಿಗೆ ಕೃಷಿ ಇಲಾಖೆಯ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿಲ್ಲ. ಅಭಿವೃದ್ಧಿ ಯೋಜನೆಗೆ ಅನುದಾನವೂ ಕಡಿಮೆ ಬರುತ್ತಿದೆ. ಮುಂದಿನ ದಿನಗಳಲ್ಲಿ ಈ ಭಾಗದ ರೈತರ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚು ಅನುದಾನ ನೀಡಲು ಒತ್ತಡ ಹಾಕಬೇಕು ಎಂದರು.

ತಾ.ಪಂ. ಸದಸ್ಯ ಹಿತ್ತಲಮಕ್ಕಿ ರಾಜೇಂದ್ರ ಮಾತನಾಡಿ, ಯಾವುದೇ ಬೆಳೆಯನ್ನು ವೈಜ್ಞಾನಿಕ ವಿಧಾನಗಳ ಮೂಲಕ ಬೆಳೆಯಬೇಕು. ಇದಕ್ಕೆ ಕೃಷಿ ವಿಜ್ಞಾನಿಗಳ ಸಲಹೆ ಮುಖ್ಯ. ರೈತರು ಕಡಿಮೆ ಬಂಡವಾಳ, ಕಡಿಮೆ ಜಾಗದಲ್ಲಿ ಹೆಚ್ಚು ಬೆಳೆ ಬೆಳೆದು ಆರ್ಥಿಕಾಭಿವೃದ್ಧಿ ಹೊಂದಬಹುದು ಎಂದು ಹೇಳಿದರು.

ಪ್ರಗತಿಪರ ಕೃಷಿಕ ಮೂಡಿಗೆರೆಯ ಯೋಗೇಂದ್ರ ಮಾತನಾಡಿ, ಮಲೆನಾಡು ಭಾಗದ ರೈತರು ಹೆಚ್ಚು ಲಾಭ ಪಡೆಯುವ ಬಗ್ಗೆ ಅರಿವು ಬೆಳೆಸಿಕೊಳ್ಳಬೇಕು. ಸಣ್ಣ ಸಣ್ಣ ಕೃಷಿ ಚಟುವಟಿಕೆಯಿಂದ ಅಧಿಕ ಲಾಭ ಪಡೆಯಬಹುದು. ಯುವಜನತೆ ಪಟ್ಟಣ ಸೇರುತ್ತಿರುವುದರಿಂದ ಕೃಷಿ ಕೆಲಸ ಮಾಡುವವರ ಕೊರತೆ ಎದುರಾಗಿದೆ. ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡರೆ ಯುವಜನರು ನಗರಕ್ಕೆ ವಲಸೆ ಹೋಗುವುದು ತಪ್ಪುತ್ತದೆ ಎಂದರು.

ಜೇನು ಕೃಷಿಕ ಹಳುವಳ್ಳಿಯ ಚಂದ್ರಶೇಖರ್‌, ಸಹಾಯಕ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ್‌, ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದ ಡಾ.ಗಿರೀಶ್‌, ತಾಲೂಕು ಕೃಷಿಕ ಸಮಾಜದ ಅಶೋಕ್‌ಕುಮಾರ್‌ ಮಾತನಾಡಿದರು.

ಕೃಷಿ ಅಧಿಕಾರಿ ರೇಖಾ, ಸಂಗೀತಾ, ವೆಂಕಟೇಶ್‌, ತೋಟಗಾರಿಕೆ ಇಲಾಖೆ ಅಧಿಕಾರಿ ಚಂದ್ರಪ್ಪ, ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಪೌದನ್‌ ಪವಿತ್ರ ಮತ್ತಿತರರು ಹಾಜರಿದ್ದರು. ಕಳಸ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ನೂತನ ಕೃಷಿ ತಾಂತ್ರಿಕ ಉಪಕರಣಗಳ ಪ್ರದರ್ಶನ, ಮಾರಾಟ ಮೇಳ ಆಯೋಜಿಸಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ