ಆ್ಯಪ್ನಗರ

ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ

ಪಟ್ಟಣದ ಬಸ್‌ ನಿಲ್ದಾಣದ ಬಳಿ ಎರಡು ಗುಂಪುಗಳ ಯುವಕರು ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿಕೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ.

Vijaya Karnataka 14 May 2018, 5:00 am
ಆಲ್ದೂರು: ಪಟ್ಟಣದ ಬಸ್‌ ನಿಲ್ದಾಣದ ಬಳಿ ಎರಡು ಗುಂಪುಗಳ ಯುವಕರು ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿಕೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
Vijaya Karnataka Web fight for the trivial cause
ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ


ಚಿಕ್ಕಮಗಳೂರಿನ ನಾಲ್ಕು ಯುವಕರು ಹಾಗೂ ಆಲ್ದೂರಿನ ಕೆಲ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಜಗಳಕ್ಕೆ ತಿರುಗಿತು. ಪರಸ್ಪರ ಅವ್ಯಾಚ ಶಬ್ದಗಳಿಂದ ನಿಂದಿಸಿಕೊಂಡ ಯುವಕರು ನಡು ರಸ್ತೆಯಲ್ಲೇ ಹೊಡೆದಾಡಿಕೊಂಡರು. ಸಾರ್ವಜನಿಕರು ಅವರನ್ನು ಸಮಾಧಾನ ಪಡಿಸಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಬೀದಿ ಜಗಳದಿಂದಾಗಿ ಕೆಲಹೊತ್ತು ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಪಾದಾಚಾರಿಗಳಿಗೂ ತೊಂದರೆಯಾಯಿತು. ಸಾರ್ವಜನಿಕರಿಗೆ ಜಗಳವನ್ನು ಬಿಡಿಸಲು ಸಾಧ್ಯವಾಗದಾದಾಗ ಪೋಲೀಸರಿಗೆ ಮಾಹಿತಿ ನೀಡಲಾಯಿತು. ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಎರಡೂ ಗುಂಪಿನವರನ್ನು ಸಮಾಧಾನ ಪಡಿಸಲು ಯತ್ನಿಸಿದರು. ಆದರೂ ಗಲಾಟೆ ತಣ್ಣಗಾಗದ ಕಾರಣ ಸೂಕ್ತ ಎಚ್ಚರಿಕೆ ನೀಡಿ ಗುಂಪನ್ನು ಚದುರಿಸಿದರು. ಈ ಸಂಬಂಧ ಪಟ್ಟಣದ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ