ಆ್ಯಪ್ನಗರ

ಕಾಳ್ಗಿಚ್ಚು ನಿಯಂತ್ರಣಕ್ಕೆ ಧಾವಿಸಿದ ಅಗ್ನಿಶಾಮಕ ದಳ

ಚಾರ್ಮಾಡಿ ಘಾಟ್‌ನ ಅರಣ್ಯ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ, ಮೂಡಿಗೆರೆ ಅಗ್ನಿ ಶಾಮಕ ದಳದವರು ಬುಧವಾರ ಸಂಜೆ ಬೆಂಕಿ ನಂದಿಸುವ ಕಾರ್ಯ ಮಾಡಿದರು.

Vijaya Karnataka 3 Jan 2019, 10:06 pm
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್‌ನ ಅರಣ್ಯ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ, ಮೂಡಿಗೆರೆ ಅಗ್ನಿ ಶಾಮಕ ದಳದವರು ಬುಧವಾರ ಸಂಜೆ ಬೆಂಕಿ ನಂದಿಸುವ ಕಾರ್ಯ ಮಾಡಿದರು.
Vijaya Karnataka Web firefighters rushed to fires
ಕಾಳ್ಗಿಚ್ಚು ನಿಯಂತ್ರಣಕ್ಕೆ ಧಾವಿಸಿದ ಅಗ್ನಿಶಾಮಕ ದಳ


ಸೋಮನಕಾಡು ಪ್ರಪಾತದ ಬಳಿ ಮಂಗಳವಾರ ಉರಿಯುತ್ತಿದ್ದ ಬೆಂಕಿಯನ್ನು ಅಗ್ನಿಶಾಮಕದಳದವರು ನೀರು ಹಾಯಿಸುವ ಮೂಲಕ ನಿಯಂತ್ರಣಕ್ಕೆ ತಂದರು. ಚಾರ್ಮಾಡಿಯ ಹಸಿರು ಗುಡ್ಡ ಬೆಂಕಿಯಿಂದ ಕಪ್ಪು ಬಣ್ಣಕ್ಕೆ ತಿರುಗಿದೆ. ಜಿಲ್ಲಾ ಅರಣ್ಯಾಧಿಕಾರಿ ಕುಮಾರ್‌ ಅವರು ಚಾರ್ಮಾಡಿ ಘಾಟ್‌ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದವರು ಬುಧವಾರ ಸಂಜೆ 7 ಗಂಟೆಗೆ ಬಂದು ಹೊಗೆ ಇರುವ ಕಡೆ ನೀರು ಹಾಯಿಸಿ ನಂದಿಸಿ ವಾಪಸ್‌ ತೆರಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ