ಆ್ಯಪ್ನಗರ

ಹಾಸ್ಟೆಲ್‌ ನ್ಯೂನತೆ ಸರಿಪಡಿಸಿ: ಹಿರಿಗಯ್ಯ

ವಸತಿ ನಿಲಯ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಾಮಾಜಿಕನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹಿರಿಗಯ್ಯ ಎಚ್ಚರಿಸಿದರು.

Vijaya Karnataka 15 Dec 2018, 5:00 am
ಚಿಕ್ಕಮಗಳೂರು :ವಸತಿ ನಿಲಯ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಾಮಾಜಿಕನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹಿರಿಗಯ್ಯ ಎಚ್ಚರಿಸಿದರು.
Vijaya Karnataka Web CKM-14rudrap5


ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿ, ಜಿಲ್ಲಾದ್ಯಂತ ಇರುವ ಎಲ್ಲ ವಸತಿ ನಿಲಯಗಳಿಗೆ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ತಂಡ ಭೇಟಿ ನೀಡಿ ಮಕ್ಕಳ ಸಮಸ್ಯೆ ಮತ್ತು ಆಹಾರ ಗುಣಮಟ್ಟ ಪರೀಕ್ಷಿಸಲಾಗುವುದು. ಒಂದು ವೇಳೆ ವಸತಿ ನಿಲಯದ ಮೇಲ್ವಿಚಾರಕರು ಮಕ್ಕಳಿಗೆ ಗುಣಮಟ್ಟದ ಆಹಾರ ನೀಡದೆ ಮತ್ತು ಸ್ವಚ್ಛತೆ ಕಾಪಾಡದೇ ಇದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.

ಸರಕಾರ ಜಿಲ್ಲೆಗೆ ನೀಡಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಇಲ್ಲದಿದ್ದರೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗುತ್ತದೆ. ಅಧಿಕಾರಿಗಳು ತಕ್ಷ ಣವೆ ಬಾಕಿ ಇರುವ ಕಾಮಗಾರಿಗಳನ್ನು ಜನವರಿ ತಿಂಗಳೊಳಗೆ ಪೂರ್ಣಗೊಳಿಸಬೇಕು. ಕಾನೂನಿನ ಚೌಕಟ್ಟಿನ ಜತೆಗೆ ಮಾನವೀಯತೆ ದೃಷ್ಟಿ ಇಟ್ಟು ಕೆಲಸ ಮಾಡಬೇಕು. ಪರಿಶಿಷ್ಟರ ಅಭಿವೃದ್ಧಿಗೆ ಜಾರಿಯಾಗಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು ಎಂದು ಹೇಳಿದರು.

ಸದಸ್ಯ ಸೋಮಶೇಖರ್‌ ಮಾತನಾಡಿ, ಮಾತೃಪೂರ್ಣ ಯೋಜನೆಯಲ್ಲಿ ಬಹಳಷ್ಟು ಅವ್ಯವಹಾರ ನಡೆದಿದೆ ಎಂಬ ದೂರುಗಳು ಬಂದಿವೆ. ಅಧಿಕಾರಿಗಳು ಸಂಕ್ಷಿಪ್ತ ಮಾಹಿತಿ ನೀಡಬೇಕು. ದೇವರಾಜ ಅರಸು ಹಿಂದುಳಿದ ವರ್ಗದ ಇಲಾಖೆಯಲ್ಲಿ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ಸೌಲಭ್ಯ ನೀಡುವಲ್ಲಿ ಹೆಚ್ಚು ಅಲೆದಾಡಿಸುತ್ತಿದ್ದಾರೆ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿ.ಪಂ. ಸದಸ್ಯ ಶರತ್‌ಕೃಷ್ಣಮೂರ್ತಿ ಮಾತನಾಡಿ, ಗರ್ಭಿಣಿ ಮತ್ತು ಬಾಣಂತಿಯರಿಗೆ ಗುಣಮಟ್ಟದ ಆಹಾರ ನೀಡುತ್ತಿಲ್ಲ ಎಂಬ ದೂರುಗಳು ಬಂದಿವೆ. ಕೆಲವು ಅಂಗನವಾಡಿ ಕೇಂದ್ರಗಳಿಗೆ ಸರಕಾರ ನಿಗದಿ ಮಾಡಿದ ಬಾಡಿಗೆಯನ್ನು ನೀಡುತ್ತಿಲ್ಲ. ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಜಿ.ಪಂ. ಸದಸ್ಯೆ ಅಮಿತಾ ಮುತ್ತಪ್ಪ ಮಾತನಾಡಿ, ಸರಕಾರ ಐಟಿಡಿಪಿ ಇಲಾಖೆಯಿಂದ ಗಿರಿಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಸಂಚಾರಿ ಆರೋಗ್ಯ ವಾಹನ ನೀಡಿದೆ. ಆದರೆ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಯಾವುದೇ ಮಾಹಿತಿ ನೀಡದೆ ಸರಿಯಾಗಿ ಗಿರಿಜನರ ಆರೋಗ್ಯ ತಪಾಸಣೆಯನ್ನೂ ಮಾಡದೆ ಹಣ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಪರಿಶೀಲಿಸಬೇಕು ಎಂದರು.

ಜಿ.ಪಂ.ಸದಸ್ಯೆ ಲೋಲಾಕ್ಷಿ ಬಾಯಿ, ಉಪಕಾರ್ಯದರ್ಶಿ ರಾಜ್‌ಗೋಪಾಲ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ