ಆ್ಯಪ್ನಗರ

ಮಾಜಿ ಶಾಸಕ ವೈ.ಸಿ.ವಿಶ್ವನಾಥ್ ನಿಧನ

ಮಾಜಿ ಶಾಸಕ ಡಾ. ವೈ.ಸಿ.ವಿಶ್ವನಾಥ್ ಬೆಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು.

Vijaya Karnataka Web 20 May 2018, 3:11 pm
ಚಿಕ್ಕಮಗಳೂರು: ಮಾಜಿ ಶಾಸಕ ಡಾ. ವೈ.ಸಿ.ವಿಶ್ವನಾಥ್ ಬೆಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು. ಕಳೆದ ಎರಡು ದಿನದಿಂದ ತೀವ್ರ ಅನಾರೋಗ್ಯದ ಕಾರಣ ಬೆಂಗಳೂರಿನ ಅಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.
Vijaya Karnataka Web mla


ಕಡೂರು ವಿಧಾನಸಭೆ ಕ್ಷೇತ್ರದಲ್ಲಿ 2010 ರ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದು ವಿಶ್ವನಾಥ್ ಶಾಸಕರಾಗಿದ್ದರು.

ಕಡೂರಿನ ಯಲ್ಲಂಬಳಸೆಯಲ್ಲಿ ವಾಸವಾಗಿದ್ದ ವಿಶ್ವನಾಥ್ ತಾಲೂಕಿನ ವೀರಶೈವ ಮಹಾಸಭಾದ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಬಾರಿ ಚುನಾವಣೆಯಲ್ಲಿ ಬೆಳ್ಳಿ ಪ್ರಕಾಶ್ ಪರ ಗೆಲುವಿನಲ್ಲಿ ವಿಶ್ವನಾಥ್‌ ಪ್ರಮುಖ ಪಾತ್ರ ವಹಿಸಿದ್ದರು.

ಕಡೂರು ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಬಿಜೆಪಿಯ ಖಾತೆ ತೆರೆದ ಹೆಗ್ಗಳಿಕೆ ವಿಶ್ವನಾಥ್ ಅವರದ್ದು. ಕಡೂರಿನ ಶಾಸಕರಾಗಿದ್ದ ಕೆ.ಎಂ.ಕೃಷ್ಣಮೂರ್ತಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ 2010 ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ನ ವೈ.ಎಸ್.ವಿ.ದತ್ತ ವಿರುದ್ಧ ಕಣಕ್ಕಿಳಿದು ಇವರು ಗೆದ್ದಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ