ಆ್ಯಪ್ನಗರ

ರಸ್ತೆಗೆ ಅಡ್ಡಲಾಗಿ ಬಿದ್ದ ಗ್ಯಾಸ್ ಟ್ಯಾಂಕರ್‌; ರಾತ್ರಿಯಿಡೀ ಪ್ರಯಾಣಿಕರ ಪರದಾಟ

ರಸ್ತೆಗೆ ಅಡ್ಡಲಾಗಿ ಬಿದ್ದ ಗ್ಯಾಸ್ ಟ್ಯಾಂಕರ್‌ನಿಂದಾಗಿ ಮಂಗಳೂರಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ನಿನ್ನೆ ಚಾರ್ಮಾಡಿ ಹೆದ್ದಾರಿ ಬಂದ್ ಆಗಿದ್ದು, ಇವತ್ತು 169 ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿರುವುದರಿಂದ ಮಂಗಳೂರು ಕಡೆಗೆ ಹೊರಟಿದ್ದ ಪ್ರಯಾಣಿಕರು ಪರದಾಡುತ್ತಿದ್ದಾರೆ.

Vijaya Karnataka Web 29 Aug 2018, 10:43 am
ಚಿಕ್ಕಮಗಳೂರು: ರಸ್ತೆಗೆ ಅಡ್ಡಲಾಗಿ ಬಿದ್ದ ಗ್ಯಾಸ್ ಟ್ಯಾಂಕರ್‌ನಿಂದಾಗಿ ಮಂಗಳೂರಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ನಿನ್ನೆ ಚಾರ್ಮಾಡಿ ಹೆದ್ದಾರಿ ಬಂದ್ ಆಗಿದ್ದು, ಇವತ್ತು 169 ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿರುವುದರಿಂದ ಮಂಗಳೂರು ಕಡೆಗೆ ಹೊರಟಿದ್ದ ಪ್ರಯಾಣಿಕರು ಪರದಾಡುತ್ತಿದ್ದಾರೆ.
Vijaya Karnataka Web charmadi ghat 1


ರಾಷ್ಟ್ರೀಯ ಹೆದ್ದಾರಿ 169ರಲ್ಲಿ ರಸ್ತೆಗೆ ಅಡ್ಡಲಾಗಿ ಗ್ಯಾಸ್ ಟ್ಯಾಂಕರ್ ಬಿದ್ದು, ಅದೃಷ್ಟವಶಾತ್ ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇನ್ನು, ಗ್ಯಾಸ್ ಟ್ಯಾಂಕರ್ ಬಿದ್ದಿದ್ದರಿಂದ ಶೃಂಗೇರಿಯ ಎಸ್‌.ಕೆ ಬಾರ್ಡರ್ ನಿಂದ 10 ಕಿ.ಮೀ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದ್ದು, ರಾತ್ರಿಯಿಡೀ ಪ್ರಯಾಣಿಕರು ಪರದಾಡಿದ್ದಾರೆ. ಕುದುರೆಮುಖದಲ್ಲಿ ಐರಾವತ ಬಸ್ಗಳು ಸಾಲುಗಟ್ಟಿ ನಿಂತಿವೆ. ಕುದುರೆಮುಖ - ಕಾರ್ಕಳ - ಶೃಂಗೇರಿ - ಮಂಗಳೂರು ಮಾರ್ಗ ಕಲ್ಪಿಸೋ 169 ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿರುವುದರಿಂದ ವಾಹನಗಳು ತೆರಳದಂತೆ ಶೃಂಗೇರಿಯ ಎಸ್‌.ಕೆ. ಬಾರ್ಡರ್‌ನಲ್ಲಿ ತಡೆಯೊಡ್ಡಲಾಗುತ್ತಿದೆ.

ಸ್ಥಳಕ್ಕೆ ಕಾರ್ಕಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಟ್ಯಾಂಕರ್ ಲಾರಿ ತೆರವುಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ