ಆ್ಯಪ್ನಗರ

ಸಮಾಜದ ಸಮಸ್ಯೆಗೆ ಸ್ಪಂದಿಸುವೆ:ಗಾಯತ್ರಿ

ಕುಂಬಾರ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಸ್ಪಂದಿಸಲು ಸದಾ ಸಿದ್ಧವಿರುವುದಾಗಿ ವಿಧಾನ ಪರಿಷತ್‌ ಮಾಜಿ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ ಹೇಳಿದರು.

Vijaya Karnataka 6 Mar 2019, 5:00 am
ಚಿಕ್ಕಮಗಳೂರು : ಕುಂಬಾರ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಸ್ಪಂದಿಸಲು ಸದಾ ಸಿದ್ಧವಿರುವುದಾಗಿ ವಿಧಾನ ಪರಿಷತ್‌ ಮಾಜಿ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ ಹೇಳಿದರು.
Vijaya Karnataka Web CKM-5rudrap6


ನಗರದ ಶ್ರೀ ವೀರಭದ್ರೇಶ್ವರಸ್ವಾಮಿದೇವಾಲಯದಲ್ಲಿ ಮಂಗಳವಾರ ಶಿವರಾತ್ರಿ ಹಬ್ಬದ ಅಂಗವಾಗಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ವೀರಭದ್ರಸ್ವಾಮಿ ಸಮುದಾಯ ಭವನ ನಿರ್ಮಾಣದ ಮುಂದುವರಿದ ಕಾಮಗಾರಿಗೆ ಅನುದಾನವನ್ನು ಸರಕಾರದಿಂದ ಕೊಡಿಸಿಕೊಡಬೇಕು ಎಂದು ಮಾಡಿಕೊಂಡ ಮನವಿಗೆ ಸ್ಪಂದಿಸಿದ್ದ ಅಂದಿನ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರು 10 ಲಕ್ಷ ರೂ.ಗಳ ಅನುದಾನ ಮಂಜೂರು ಮಾಡಿಕೊಟ್ಟರು.ಈ ವಿಚಾರದಲ್ಲಿಇಲ್ಲಿನ ಕುಂಬಾರ ಸಮುದಾಯ ಸಂಘಟಿತವಾಗಿ ಕೆಲಸ ಮಾಡುತ್ತಿರುವುದು ಪ್ರಸಂಶನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಿಪಿಐ ಕಾರ್ಯದರ್ಶಿ ಎಚ್‌.ಎಂ.ರೇಣುಕಾರಾಧ್ಯ, ಟೌನ್‌ ಕೋ ಆಪರೇಟೀವ್‌ ಸೊಸೈಟಿಅಧ್ಯಕ್ಷ ಶ್ರೀನಿವಾಸ್‌, ನಗರಸಭೆ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ ಅವರನು ಗೌರವಿಸಲಾಯಿತು. ತಾಲೂಕು ಕುಂಬಾರರ ಸಂಘ ಅಧ್ಯಕ್ಷ ಏಕಾಂತರಾಮು, ಉಪಾಧ್ಯಕ್ಷ ಆರ್‌.ರಾಜಣ್ಣ, ಕಾರ್ಯದರ್ಶಿ ನಿರ್ವಾಣಪ್ಪ, ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ