ಆ್ಯಪ್ನಗರ

ಜಾರ್ಜ್ ಕಾಂಗ್ರೆಸ್‌ನ ಎಟಿಎಂ: ಶೋಭಾ ಕರಂದ್ಲಾಜೆ

'ಸಚಿವ ಕೆ.ಜೆ.ಜಾರ್ಜ್ ಕಾಂಗ್ರೆಸ್‌ಗೆ ಎಟಿಎಂ ಆಗಿರುವುದರಿಂದ ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸುತ್ತಿದ್ದಾರೆ,' ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ವಿಕ ಸುದ್ದಿಲೋಕ 16 Jul 2016, 5:53 pm
ಚಿಕ್ಕಮಗಳೂರು: 'ಸಚಿವ ಕೆ.ಜೆ.ಜಾರ್ಜ್ ಕಾಂಗ್ರೆಸ್‌ಗೆ ಎಟಿಎಂ ಆಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಕ್ಷಿಸುತ್ತಿದ್ದಾರೆ,' ಎಂದು ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
Vijaya Karnataka Web george is congress atm shobha
ಜಾರ್ಜ್ ಕಾಂಗ್ರೆಸ್‌ನ ಎಟಿಎಂ: ಶೋಭಾ ಕರಂದ್ಲಾಜೆ


ಇಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, 'ಸಿದ್ದರಾಮಯ್ಯ ಅವರೇ ರಾಜ್ಯವನ್ನು ಕಾಂಗ್ರೆಸ್ ಮುಕ್ತ ಮಾಡುತ್ತಿದ್ದಾರೆ. ಅದನ್ನು ನೋಡುವುದಕ್ಕಾದರೂ ರಾಜ್ಯಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಬರಲಿ. ಜಾರ್ಜ್ ರಕ್ಷಿಸುತ್ತಿರುವ ಅವರನ್ನು ರಾಜ್ಯದ ಜನರು ದೊಣ್ಣೆಯಲ್ಲಿ ಹೊಡೆದು ಓಡಿಸುತ್ತಾರೆ,' ಎಂದರು.

'ಬಿಜೆಪಿ ಕ್ರಿಮಿನಲ್‌ಗಳಿಗೆ ರಕ್ಷಣೆ ನೀಡುವುದಿಲ್ಲ. ಗೃಹ ಸಚಿವ ಪರಮೇಶ್ವರ್‌ಗೆ ತಾಕತ್ತಿದ್ದರೆ ಆರೋಪಿಗಳನ್ನು ಬಂಧಿಸಿ ಕೂಡಲೇ ಶಿಕ್ಷಿಸಲಿ,' ಎಂದು ಸವಾಲು ಎಸೆದರು.

ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ರೇಣುಕಾಚಾರ್ಯ, ಶಾಸಕ ಸಿ.ಟಿ.ರವಿ ಮತ್ತಿತರರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ