ಆ್ಯಪ್ನಗರ

ಮಲೆನಾಡಲ್ಲಿ ಉತ್ತಮ ಮಳೆ, ಬಯಲಿಗೆ ಕಮ್ಮಿ

ಜಿಲ್ಲೆಯ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆಯಾದರೂ ಚಿಕ್ಕಮಗಳೂರು ಮತ್ತು ಕಡೂರು ತಾಲೂಕಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ.

Vijaya Karnataka 9 Jul 2018, 5:00 am
ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆಯಾದರೂ ಚಿಕ್ಕಮಗಳೂರು ಮತ್ತು ಕಡೂರು ತಾಲೂಕಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ.
Vijaya Karnataka Web good rain in malnad
ಮಲೆನಾಡಲ್ಲಿ ಉತ್ತಮ ಮಳೆ, ಬಯಲಿಗೆ ಕಮ್ಮಿ

ಶೃಂಗೇರಿ, ನರಸಿಂಹರಾಜಪುರ, ಕೊಪ್ಪ ಹಾಗೂ ಮೂಡಿಗೆರೆ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ. ತುಂಗಾ, ಭದ್ರಾ ಹಾಗೂ ಹೇಮಾವತಿ ನದಿಗಳು ಅಪಾಯದ ಅಂಚಿನಲ್ಲಿ ತುಂಬಿ ಹರಿಯುತ್ತಿವೆ. ಆದರೆ, ಬಯಲು ಭಾಗದಲ್ಲಿ ಈ ಪ್ರಮಾಣದ ಮಳೆಯಾಗಿಲ್ಲ. ಚಿಕ್ಕಮಗಳೂರಿಗೆ ಕುಡಿಯುವ ನೀರೊದಗಿಸುವ ಯಗಚಿ ಜಲಾಶಯ ಈ ಮಳೆಯಿಂದ 10 ಅಡಿ ಮಾತ್ರ ಭರ್ತಿಯಾಗಿದೆ. ಗಿರಿಶ್ರೇಣಿಯಲ್ಲಿ ಉತ್ತಮ ಮಳೆಯಾದರೆ ಮಾತ್ರ ಯಗಚಿ ಭರ್ತಿಯಾಗಲಿದೆ. ಆದರೆ, ಗಿರಿತಪ್ಪಲಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಮಳೆಯಾದಾಗ ಕೋಡಿ ಬೀಳುತ್ತಿದ್ದ ಅಯ್ಯನಕೆರೆ, ಮದಗದ ಕೆರೆ, ಹಿರೇಕೊಳಲೆ ಕೆರೆಗಳು ಇನ್ನೂ ಕೋಡಿ ಬಿದ್ದಿಲ್ಲ. ಕಡೂರು ಹಾಗೂ ಚಿಕ್ಕಮಗಳೂರು ತಾಲೂಕಿನ ಸಣ್ಣಪುಟ್ಟ ಕೆರೆಗಳಲ್ಲಿ ಸಹ ಮೊಳಕಾಲುದ್ದ ನೀರಿದೆ. ಕಳೆದ ಎರಡು ದಿನದಿಂದ ಮಲೆನಾಡು ಭಾಗದ ಮೂರು ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದರೂ ಈ ಕಡೂರು ಮತ್ತು ಚಿಕ್ಕಮಗಳೂರು ತಾಲೂಕಾದ್ಯಂತ ಉದುರು ಮಳೆ ಮಾತ್ರ ಮುಂದುವರಿದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ