ಆ್ಯಪ್ನಗರ

ಡಿ.29 ಕ್ಕೆ ಸರಕಾರಿ ನೌಕರರ ಕ್ರೀಡಾಕೂಟ :ಡಿಸಿ

ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಡಿ.29 ರಂದು ನಗರದ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದ್ದಾರೆ.

Vijaya Karnataka 15 Dec 2018, 5:00 am
ಚಿಕ್ಕಮಗಳೂರು :ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಡಿ.29 ರಂದು ನಗರದ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದ್ದಾರೆ.
Vijaya Karnataka Web government employees games d c
ಡಿ.29 ಕ್ಕೆ ಸರಕಾರಿ ನೌಕರರ ಕ್ರೀಡಾಕೂಟ :ಡಿಸಿ


ಡಿಸಿ ಕಚೇರಿ ಸಭಾಂಗಣದಲ್ಲಿ ಸರಕಾರಿ ನೌಕರರ ಕ್ರಿಡಾಕೂಟ ಆಯೋಜನೆ ಬಗ್ಗೆ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಸದೃಢವಾಗುವುದರ ಜತೆಗೆ ಮನೋಲ್ಲಾಸ ನೀಡುತ್ತದೆ. ಪ್ರತಿಯೊಬ್ಬ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದರು.

ಕ್ರೀಡಾಕೂಟದ ಯಶಸ್ವಿಗೆ ಎಲ್ಲ ರೀತಿಯ ಸಿದ್ದತೆ ಮತ್ತು ಕ್ರೀಡಾ ಪಟುಗಳಿಗೆ ಊಟ,ತಿಂಡಿ ವ್ಯವಸ್ಥೆಯ ಜತೆಗೆ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಪರಮೇಶ್ವರಪ್ಪ ಮಾತನಾಡಿ, ಪ್ರತಿನಿತ್ಯ ದೈನಂದಿನ ಕಚೇರಿ ಕೆಲಸಗಳಲ್ಲಿ ಕರ್ತವ್ಯ ನಿರ್ವಹಿಸುವ ಸರಕಾರಿ ನೌಕರರು ಒತ್ತಡದಿಂದ ಹೊರಬರಲು ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದರು.

ಸರಕಾರಿ ನೌಕರರ ಸಂಘದ ಉಪಾಧ್ಯಕ್ಷ ಮಂಜುನಾಥ್‌, ಕೋಶಾಧ್ಯಕ್ಷ ದೇವೆಂದ್ರ, ಪ್ರಾಥಮಿಕ ಶಾಲಾ ಶಿಕ್ಷ ಕರ ಸಂಘದ ಅಧ್ಯಕ್ಷ ಬಿ.ಎನ್‌.ಸುದೇಶ್‌, ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಸಹಾಯಕಿ ನಿರ್ದೇಶಕಿ ಮಂಜುಳಾ, ಕ್ಷೇತ್ರ ಶಿಕ್ಷ ಣಾಧಿಕಾರಿ ಶರತ್‌ ಚಂದ್ರ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ