ಆ್ಯಪ್ನಗರ

ಕಳಸ ತಾಲೂಕು ಪ್ರಸ್ತಾವನೆಯೇ ಇಲ್ಲವೆಂದ ಸರಕಾರ!

ಮೂಡಿಗೆರೆ ತಾಲೂಕಿನ ಕಳಸ ಮತ್ತು ಕಡೂರು ತಾಲೂಕಿನ ಸಖರಾಯಪಟ್ಟಣ ಹೋಬಳಿಗಳನ್ನು ತಾಲೂಕು ಕೇಂದ್ರಗಳನ್ನಾಗಿ ಘೋಷಣೆ ಮಾಡುವ ಯಾವುದೇ ಪ್ರಸ್ತಾವನೆ ರಾಜ್ಯ ಸರಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದ್ದಾರೆ.

Vijaya Karnataka 14 Dec 2018, 5:00 am
ಚಿಕ್ಕಮಗಳೂರು : ಮೂಡಿಗೆರೆ ತಾಲೂಕಿನ ಕಳಸ ಮತ್ತು ಕಡೂರು ತಾಲೂಕಿನ ಸಖರಾಯಪಟ್ಟಣ ಹೋಬಳಿಗಳನ್ನು ತಾಲೂಕು ಕೇಂದ್ರಗಳನ್ನಾಗಿ ಘೋಷಣೆ ಮಾಡುವ ಯಾವುದೇ ಪ್ರಸ್ತಾವನೆ ರಾಜ್ಯ ಸರಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದ್ದಾರೆ.
Vijaya Karnataka Web government has no plans to send a kalas
ಕಳಸ ತಾಲೂಕು ಪ್ರಸ್ತಾವನೆಯೇ ಇಲ್ಲವೆಂದ ಸರಕಾರ!


ಬೆಳಗಾವಿಯ ಸುವರ್ಣಸೌಧದಲ್ಲಿ ಗುರುವಾರ ವಿಧಾನ ಪರಿಷತ್‌ ಕಲಾಪದ ಸಂದರ್ಭ ಸದಸ್ಯ ಎಸ್‌.ಎಲ್‌.ಧರ್ಮೇಗೌಡ ಅವರು ಕೇಳಿದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದು, ಕಳಸ ತಾಲೂಕು ಕೇಂದ್ರವಾಗುವ ಕನಸು ಸದ್ಯಕ್ಕೆ ನನಸಾಗುವ ಸಾಧ್ಯತೆ ಇಲ್ಲವಾಗಿದೆ.

ಕಳಸ ಮತ್ತು ಸಖರಾಯಪಟ್ಟಣ ಹೋಬಳಿ ಕೇಂದ್ರಗಳು ತಾಲೂಕು ಕೇಂದ್ರಗಳಿಂದ ದೂರ ಉಳಿದಿದ್ದು, ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿದೆ. ದೂರದ ಗ್ರಾಮೀಣ ಪ್ರದೇಶಗಳಿಂದ ಸಾರ್ವಜನಿಕರು ಮೂಡಿಗೆರೆ ತಾಲೂಕು ಕೇಂದ್ರ ಹಾಗೂ ಸಖರಾಯಪಟ್ಟಣ ಹೋಬಳಿಯ ವಿವಿಧ ಗ್ರಾಮಗಳ ಜನ ಕಡೂರು ತಾಲೂಕು ಕೇಂದ್ರಕ್ಕೆ ವಿವಿಧ ಕೆಲಸಗಳಿಗೆ ಓಡಾಡುವುದು ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎರಡೂ ಹೋಬಳಿಗಳನ್ನು ತಾಲೂಕು ಕೇಂದ್ರ ಮಾಡಬೇಕು ಎಂದು ಎಸ್‌.ಎಲ್‌.ಧರ್ಮೇಗೌಡ ಮನವಿ ಮಾಡಿದರು.

2017-18ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಭೌಗೋಳಿಕ ಮತ್ತು ಆಡಳಿತಾತ್ಮಕ ಅಗತ್ಯಗಳನ್ನು ಪರಿಗಣಿಸಿ 50 ಹೊಸ ತಾಲೂಕುಗಳನ್ನು ರಚಿಸಲಾಗಿದೆ. ಇವುಗಳಲ್ಲಿ ಕಳಸ, ಸಖರಾಯಪಟ್ಟಣ ಸೇರಿಲ್ಲ. ಯಾವುದೇ ಹೋಬಳಿಯನ್ನು ತಾಲೂಕು ಕೇಂದ್ರ ಮಾಡುವುದು ಸರಕಾರದ ನೀತಿಯ ವಿಷಯ. ಹೊಸ ತಾಲೂಕು ರಚನೆ ಮಾಡಿದರೆ ಸುಮಾರು 28.87 ಕೋಟಿ ರೂ. ಬೇಕಾಗುತ್ತದೆ. ಇದು ರಾಜ್ಯದ ಆರ್ಥಿಕ ಪರಿಸ್ಥಿತಿ ಅವಲಂಬಿಸಿದೆ ಎಂದು ಸಚಿವರು ಉತ್ತರಿಸಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಕೈಗಾರಿಕೆಗಳ ಸ್ಥಾಪನೆ, ಅಭಿವೃದ್ಧಿ ಬಗ್ಗೆ ಸರಕಾರ ಕೈಗೊಂಡಿರುವ ಕ್ರಮ ಏನು ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ.ಜೆ.ಜಾರ್ಜ್‌, ಕಡೂರು ತಾಲೂಕು ತಂಗಲಿ ಕಾವಲ್‌ನಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ 154.23 ಎಕರೆ ಸರಕಾರಿ ಹಾಗೂ 82.14 ಎಕರೆ ಹಿಡುವಳಿ ಜಮೀನು ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಭೂ ಪರಿಹಾರ ನಿಗದಿಸುವ ಪ್ರಕ್ರಿಯೆ ಜಾರಿಯಲ್ಲಿದೆ. ಭೂ ಮಾಲೀಕರಿಗೆ ಪರಿಹಾರ ಪಾವತಿಸಿದ ನಂತರ ಜಮೀನು ಅಭಿವೃದ್ಧಿಪಡಿಸಿ ಕೈಗಾರಿಕಾ ಪ್ರದೇಶ ರೂಪಿಸಲಾಗುವುದು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ