ಆ್ಯಪ್ನಗರ

ಸರಕಾರದ ಯೋಜನೆ ಜನ ತಲುಪಲಿ

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮುತುವರ್ಜಿಯಿಂದ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷ ಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜೆಸಿಂತಾ ಅನಿಲ್‌ಕುಮಾರ್‌ ಹೇಳಿದರು.

Vijaya Karnataka 6 Mar 2019, 5:00 am
ಚಿಕ್ಕಮಗಳೂರು: ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮುತುವರ್ಜಿಯಿಂದ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷ ಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜೆಸಿಂತಾ ಅನಿಲ್‌ಕುಮಾರ್‌ ಹೇಳಿದರು.
Vijaya Karnataka Web CKM-5rudrap5


ನಗರದ ಕಾರ್ಮಿಕರ ಭವಿಷ್ಯನಿಧಿ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಪ್ರಧಾನಮಂತ್ರಿ ಶ್ರಮ್‌ಯೋಗಿ ಮಾನ್‌ಧನ್‌ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪರ ಕಾಳಜಿಯಿಂದ ಆಯುಷ್ಮಾನ್‌ ಭಾರತ್‌ ಸೇರಿದಂತೆ ಹಲವು ಯೋಜನೆ ಮತ್ತು ಕಾರ್ಯಕ್ರಮಗಳು ರೂಪುಗೊಂಡಿವೆ. ಅವು ಫಲಾನುಭವಿಗಳಿಗೆ ತಲುಪಬೇಕಾದರೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ನಗರಸಭೆ ಉಪಾಧ್ಯಕ್ಷ ಸುಧೀರ್‌ಯೋಜನೆಗೆ ಚಾಲನೆ ನೀಡಿ ಮಾತನಾಡಿ, ಕೇಂದ್ರ ಸರಕಾರದ ಯಾವುದೇ ಜನಪರ ಯೋಜನೆ ನೆನಗುದಿಗೆ ಬೀಳದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಭವಿಷ್ಯನಿಧಿ ಆಯುಕ್ತ ಸಚಿನ್‌ಶೆಟ್ಟಿ ಪ್ರಸ್ತಾವಿಸಿ, ಮಾಸಿಕ ಹದಿನೈದು ಸಾವಿರಕ್ಕಿಂತ ಕಡಿಮೆ ಆದಾಯವಿರುವ ಅಸಂಘಟಿತ ಕಾರ್ಮಿಕರಿಗಾಗಿ ಈ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ ಎಂದರು. ನೂತನ ಯೋಜನೆಗೆ ಹೆಸರು ನೋಂದಾಯಿಸಿದ ಕಾರ್ಮಿಕರಿಗೆ ಸಮಾರಂಭದಲ್ಲಿ ಗುರುತಿನ ಚೀಟಿ ವಿತರಿಸಲಾಯಿತು.ಇದೇ ವೇಳೆ ಗುಜರಾತ್‌ನ ಥಾರ್‌ನಲ್ಲಿ ನಡೆದ ಯೋಜನೆಯ ಉದ್ಘಾಟನಾ ಸಮಾರಂಭದ ನೇರಪ್ರಸಾರವನ್ನು ವೀಕ್ಷಿಸುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಭಾರತೀಯ ಜೀವ ವಿಮಾ ನಿಗಮದ ನಗರಶಾಖೆಯ ವ್ಯವಸ್ಥಾಪಕ ಪುರಂದರ, ಸಹಾಯಕ ಕಾರ್ಮಿಕ ಅಯುಕ್ತ ಜಾನ್ಸನ್‌, ಸಾಮಾಜಿಕ ಭದ್ರತಾ ಯೋಜನೆಯ ಸಹಾಯಕ ನಿರ್ದೇಶಕಿ ಬಿ.ಎನ್‌.ಶಶಿಕಲಾ, ಕೆಜಿಎಫ್‌ ಮಾಜಿ ಅಧ್ಯಕ್ಷ ಅತ್ತಿಕಟ್ಟೆ ಜಗನ್ನಾಥ್‌, ಕಮಲಾಕ್ಷಿ ,ವಿವೇಕಾನಂದ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ