ಆ್ಯಪ್ನಗರ

ಪಂಚಾಯಿತಿ ಚುನಾವಣೆ ಹಿನ್ನೆಲೆ, ಡಿ. 1ರಂದು ಬಾಳೆಹೊನ್ನೂರಿಗೆ ಕೆ.ಎಸ್‌.ಈಶ್ವರಪ್ಪ ಭೇಟಿ

ಬಾಳೆಹೊನ್ನೂರು ಪಟ್ಟಣದಲ್ಲಿ ಡಿ.1ರಂದು ಶೃಂಗೇರಿ ಮತ್ತು ಮೂಡಿಗೆರೆ ಕ್ಷೇತ್ರದ ಗ್ರಾಮ ಪಂಚಾಯಿತಿ ಚುನಾವಣಾ ಪೂರ್ವಭಾವಿ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ‌ ಸಚಿವ ಕೆ.ಎಸ್‌.ಈಶ್ವರಪ್ಪ ಭೇಟಿ ನೀಡಲಿದ್ದಾರೆ.

Vijaya Karnataka Web 27 Nov 2020, 1:22 pm
ಬಾಳೆಹೊನ್ನೂರು: ಬಾಳೆಹೊನ್ನೂರು ಪಟ್ಟಣದಲ್ಲಿ ಡಿ.1ರಂದು ಶೃಂಗೇರಿ ಮತ್ತು ಮೂಡಿಗೆರೆ ಕ್ಷೇತ್ರದ ಗ್ರಾಮ ಪಂಚಾಯಿತಿ ಚುನಾವಣಾ ಪೂರ್ವಭಾವಿ ಸಭೆ ನಡೆಯಲಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಪಾಲ್ಗೊಳ್ಳಲಿದ್ದಾರೆ. ಪಟ್ಟಣದ ಬಿಲ್ಲವ ಸಂಘದಲ್ಲಿ ಗುರುವಾರ ನಡೆದ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಚ್‌.ಸಿ.ಕಲ್ಮರುಡಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Vijaya Karnataka Web ks eshwarappa


ಸಚಿವರು ಮೊದಲು ಶ್ರೀರಂಭಾಪುರಿ ಜಗದ್ಗುರುಗಳ ದರ್ಶನ ಪಡೆಯಲಿದ್ದು, ಬಳಿಕ ಸಭೆಯಲ್ಲಿ ಕಾರ್ಯಕರ್ತರನ್ನದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ಮಾಜಿ ಶಾಸಕ ಡಿ.ಎನ್‌. ಜೀವರಾಜ್‌, ಬಿಜೆಪಿ ವಿಭಾಗೀಯ ಪ್ರಭಾರಿ ಗಿರೀಶ್‌ ಪಟೇಲ್‌, ವಿಭಾಗೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಗಣೇಶ್‌ ರಾವ್‌, ಜಿಲ್ಲಾಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ದೇವರಾಜ್‌ ಶೆಟ್ಟಿ, ರಾಮಕೃಷ್ಣ ಅಂಬ್ಲೂರು, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ವೆನಿಲ್ಲಾ ಭಾಸ್ಕರ್‌, ನ.ರಾ.ಪುರ ಮಂಡಲ ಅಧ್ಯಕ್ಷ ಅರುಣ್‌ ಕುಮಾರ್‌, ಮೂಡಿಗೆರೆ ಮಂಡಲ ಅಧ್ಯಕ್ಷ ಜನ್ನಾಪುರ ರಘು ಮತ್ತಿತರರು ಪಾಲ್ಗೊಂಡಿದ್ದರು.

ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ:
ಅಜ್ಜಂಪುರ (ಚಿಕ್ಕಮಗಳೂರು): ಪಟ್ಟಣ ಸಮೀಪದ ಕಾಟಿಗನೆರೆ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಶಿವಪ್ರಸಾದ್‌ ಅವರ ಸಸ್ಯ ಸಂಜೀವಿನಿ ಸಾವಯವ ಗೊಬ್ಬರ ತಯಾರಿಕಾ ಘಟಕಕ್ಕೆ ಚಿರತೆ ಬುಧವಾರ ಮಧ್ಯರಾತ್ರಿ ನುಗ್ಗಿದೆ. ದೈತ್ಯ ಚಿರತೆ ಅಲ್ಲಿದ್ದ ನಾಯಿಯನ್ನು ಕಚ್ಚಿ ಹೊತ್ತೊಯ್ದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿದಾಖಲಾಗಿದೆ. ಈ ಭಾಗದಲ್ಲಿಇದೇ ಚಿರತೆ ಆಗಾಗ್ಗೆ ಜನರಿಗೆ ಕಂಡುಬರುತ್ತಿದ್ದು, ಇದರ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಚಿರತೆ ಇರುವುದಕ್ಕೆ ಸೂಕ್ತ ದಾಖಲೆ ನೀಡಿದ್ದಲ್ಲಿ ಬೋನ್‌ ಇರಿಸಿ ಅದನ್ನು ಹಿಡಿಯುವುದಾಗಿ ತಿಳಿಸಿದ್ದರು ಎನ್ನಲಾಗಿದೆ. ಮನುಷ್ಯರು, ಪ್ರಾಣಿಗಳ ಪ್ರಾಣಹಾನಿ ಆಗುವ ಮೊದಲು ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಹಿಡಿದು ನೆಮ್ಮದಿ ಕಾಪಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ