ಆ್ಯಪ್ನಗರ

ಗ್ರಾಮಾಭಿವೃದ್ಧಿಗೆ ಗ್ರಾಮಸಭೆ ಉಪಯುಕ್ತ

ಗ್ರಾಮಗಳ ಸರ್ವತೋಮುಖ ಬೆಳವಣಿಗೆಗೆ ಗ್ರಾಮಸಭೆಗಳು ಉಪಯುಕ್ತವಾಗಿದ್ದು ಫಲಾನುಭವಿಗಳು ಗ್ರಾಮಸಭೆಗಳಲ್ಲಿ ಭಾಗವಹಿಸುವ ಮೂಲಕ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಾಳೂರು ಗ್ರಾ.ಪಂ. ಅಧ್ಯಕ್ಷ ಕೃಷ್ಣೆಗೌಡ ಹೇಳಿದರು.

Vijaya Karnataka 23 Jul 2019, 5:00 am
ಕೊಟ್ಟಿಗೆಹಾರ : ಗ್ರಾಮಗಳ ಸರ್ವತೋಮುಖ ಬೆಳವಣಿಗೆಗೆ ಗ್ರಾಮಸಭೆಗಳು ಉಪಯುಕ್ತವಾಗಿದ್ದು ಫಲಾನುಭವಿಗಳು ಗ್ರಾಮಸಭೆಗಳಲ್ಲಿ ಭಾಗವಹಿಸುವ ಮೂಲಕ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಾಳೂರು ಗ್ರಾ.ಪಂ. ಅಧ್ಯಕ್ಷ ಕೃಷ್ಣೆಗೌಡ ಹೇಳಿದರು.
Vijaya Karnataka Web gramsabhe is useful for rural development
ಗ್ರಾಮಾಭಿವೃದ್ಧಿಗೆ ಗ್ರಾಮಸಭೆ ಉಪಯುಕ್ತ


ಬಾಳೂರು ಗ್ರಾ.ಪಂ.ಯಲ್ಲಿ ಏರ್ಪಡಿಸಿದ್ದ ಸಾಮಾಜಿಕ ಲೆಕ್ಕಪರಿಶೋಧನೆ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು.

ಫಲಾನುಭವಿಗಳು ಗ್ರಾ.ಪಂ.ಗೆ ಖುದ್ದು ಹಾಜರಾಗಿ ಕಂದಾಯ, ಕೃಷಿ, ತೋಟಗಾರಿಕೆ, ಶಿಕ್ಷ ಣ, ಆರೋಗ್ಯ, ಪಶುಸಂಗೋಪನೆ, ಸಮಾಜಕಲ್ಯಾಣ ಮುಂತಾದ ಇಲಾಖೆಗಳಿಂದ ದೊರೆಯುವ ಸವಲತ್ತುಗಳ ಮಾಹಿತಿಯ ವಿವರ ಪಡೆದು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭ ನೋಡಲ್‌ ಅಧಿಕಾರಿಗಳಾದ ಮೀನಾಕ್ಷಿ, ಮೂಡಿಗೆರೆ ತಾಲೂಕು ಸಂಯೋಜಕಿ ರೇಷ್ಮಾ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥಯ್ಯ, ಗ್ರಾಮಸ್ಥರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ