ಆ್ಯಪ್ನಗರ

ಮದುಮಗ ಛತ್ರದಿಂದ ಪರಾರಿ! ಮದುಮಗಳ ಕೈಹಿಡಿದ ಬಿಎಂಟಿಸಿ ಕಂಡಕ್ಟರ್!

ರಾತ್ರಿ ರಿಸೆಪ್ಷನ್‍ಗೆ ಇದ್ದ ವರ ಬೆಳಗ್ಗೆ ಮುಹೂರ್ತಕ್ಕೆ ನಾಪತ್ತೆಯಾಗಿದ್ದ. ದಿಕ್ಕು ತೋಚದೆ ನಿಂತಿದ್ದ ಮದುಮಗಳನ್ನು ಅದೇ ಛತ್ರದಲ್ಲಿ ಬೆಂಗಳೂರಿನ ಬಿಎಂಟಿಸಿ ಬಸ್ ಕಂಡಕ್ಟರ್ ಕೈ ಹಿಡಿದಿದ್ದಾರೆ. ಚಿಕ್ಕಮಗಳೂರಿನ ತರೀಕೆರೆ ತಾಲೂಕಿನಲ್ಲಿ ಇಂತಹ ಅಪರೂಪದ ಮದುವೆ ನಡೆದಿದೆ.

Vijaya Karnataka Web 4 Jan 2021, 2:36 pm
ಚಿಕ್ಕಮಗಳೂರು: ರಾತ್ರಿ ರಿಸೆಪ್ಷನ್‍ಗೆ ಇದ್ದ ವರ ಬೆಳಗ್ಗೆ ಮುಹೂರ್ತಕ್ಕೆ ನಾಪತ್ತೆಯಾಗಿದ್ದ. ದಿಕ್ಕು ತೋಚದೆ ನಿಂತಿದ್ದ ಮದುಮಗಳನ್ನು ಅದೇ ಛತ್ರದಲ್ಲಿ ಬೆಂಗಳೂರಿನ ಬಿಎಂಟಿಸಿ ಬಸ್ ಕಂಡಕ್ಟರ್ ಕೈ ಹಿಡಿದಿದ್ದಾರೆ. ಈ ಅಪರೂಪದ ಮದುವೆಗೆ ಜಿಲ್ಲೆಯ ತರೀಕೆರೆ ತಾಲೂಕು ಸಾಕ್ಷಿಯಾಗಿದೆ.
Vijaya Karnataka Web chikkamagaluru Groom


ತರೀಕೆರೆ ತಾಲೂಕಿನ ದೋರನಾಳು ಗ್ರಾಮದ ಅಶೋಕ್ ಹಾಗೂ ನವೀನ್ ಎಂಬ ಅಣ್ಣತಮ್ಮಂದಿರಿಗೆ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯಿಂದ ಹೆಣ್ಣು ತಂದಿದ್ದರು. ಅಶೋಕ್ ಮದುವೆ ದಾವಣಗೆರೆ ಮೂಲದ ಯುವತಿಯೊಂದಿಗೆ ಮುಗಿದಿದೆ. ಆದರೆ, ನವೀನ್ ಮದುವೆಯಾಗಬೇಕಿದ್ದ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸರಪನಹಳ್ಳಿಯ ಯುವತಿ ಸಿಂಧುವನ್ನ ಛತ್ರದಲ್ಲೇ ನೋಡಿ ಬೆಂಗಳೂರಿನ ಬಿ.ಎಂ.ಟಿ.ಸಿ. ಕಂಡಕ್ಟರ್ ಚಂದ್ರು ಎಂಬುವರು ಮದುವೆಯಾಗಿದ್ದಾರೆ.

ಚಿಕ್ಕಮಗಳೂರು: ಎಲೆಕ್ಷನ್‌ ದ್ವೇಷಕ್ಕೆ ದನದ ಕೊಟ್ಟಿಗೆಗೆ ಬೆಂಕಿ..! ಪಾಪಿಗಳ ಕೃತ್ಯಕ್ಕೆ ಎರಡು ರಾಸುಗಳ ಸಾವು

ಯಾಕಂದ್ರೆ, ನಿನ್ನೆ ರಾತ್ರಿ ಸಿಂಧು ಜೊತೆ ರಿಸೆಪ್ಷನ್‍ನಲ್ಲಿದ್ದ ನವೀನ್ ಇಂದು ಬೆಳಗ್ಗೆ ನಾಪತ್ತೆಯಾಗಿದ್ದ. ನವೀನ್ ಪ್ರೀತಿಸುತ್ತಿದ್ದ ಯುವತಿ ನನ್ನನ್ನ ಪ್ರೀತಿಸಿ ಬೇರೆ ಹುಡುಗಿಯನ್ನ ಮದುವೆಯಾಗಲು ಬಿಡಲ್ಲ. ನಾನು ಛತ್ರದಲ್ಲೇ ವಿಷ ಕುಡಿಯುತ್ತೇನೆ, ಮದುವೆ ನಿಲ್ಲಿಸುತ್ತೇನೆ ಎಂದು ಹೆದರಿಸಿದ್ದಕ್ಕೆ ವರ ನವೀನ್ ಮರ್ಯಾದೆಗೆ ಹೆದರಿ ಛತ್ರದಿಂದಲೇ ನಾಪತ್ತೆಯಾಗಿ ಪ್ರೀತಿಸುತ್ತಿದ್ದ ಯುವತಿಗೆ ತುಮಕೂರಿಗೆ ಬರಲು ಹೇಳಿದ್ದ.

ಆ ಹೊತ್ತಿಗೆ ಮದುವೆ ನಿಂತಿತ್ತು. ಆಗ ದೋರನಾಳು ಗ್ರಾಮದ ಪಕ್ಕದ ನಂದಿ ಗ್ರಾಮದ ಯುವಕ ಚಂದ್ರು ಮದುಮಗಳಾಗಿ ನಿಂತಿದ್ದ ಸಿಂಧು ಕೈಹಿಡಿದಿದ್ದಾನೆ. ಚಂದ್ರು ಬೆಂಗಳೂರಿನ ಬಿಎಂಟಿಸಿ ಬಸ್‍ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ. ನಾಪತ್ತೆಯಾದ ಯುವಕನನ್ನ ಪೋಷಕರು ಹುಡುಕಾಟ ನಡೆಸಿದರು ಸಿಕ್ಕಿಲ್ಲ.

ಮತಪತ್ರದ ಮೇಲೆ ಹೆಬ್ಬೆಟ್ಟು ಗುರುತು: ಚಿಕ್ಕಮಗಳೂರಿನಲ್ಲಿ ಮರು ಮತ ಎಣಿಕೆಗೆ ಆಗ್ರಹ!

ಪ್ರೀತಿಸಿದ ಯುವತಿಗೆ ನವೀನ್ ತುಮಕೂರಿಗೆ ಬಾ ಎಂದಿದ್ದರಿಂದ ಅಲ್ಲಿಗೆ ಹೋಗಿ ನೋಡಿದರೂ ಆತ ಸಿಕ್ಕಿಲ್ಲ. ಆತನ ಮೊಬೈಲ್ ಟ್ರ್ಯಾಕ್ ಬೆಂಗಳೂರು ತೋರಿಸಿದ್ದರಿಂದ ಆತ ಸಿಕ್ಕಿಲ್ಲ. ಆದರೆ, ಹಸೆಮಣೆ ಏರಬೇಕಿದ್ದ ಯುವತಿಗೆ ಮದುವೆ ನಿಲ್ಲುವ ಆತಂಕ ಎದುರಾಗಿತ್ತು. ಆದರೆ, ಮದುವೆ ನಿಲ್ಲದೆ ಛತ್ರದಲ್ಲೇ ಮತ್ತೋರ್ವ ಯುವಕ ಚಂದ್ರು ನಾನೇ ಮದುವೆಯಾಗುತ್ತೇನೆಂದು ವಿವಾಹವಾಗಿದ್ದಾನೆ. ಹೊಸ ಬದುಕಿನ ಆಸೆ ಹೊತ್ತಿದ್ದ ವಧು ಸಿಂಧು ವರ ನಾಪತ್ತೆಯಾದರೂ ಹೊಸ ಬದುಕಿಗೆ ಕಾಲಿಟ್ಟಿದ್ದಾಳೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ