ಆ್ಯಪ್ನಗರ

ಕೇಂದ್ರದಿಂದ ದ್ವೇಷದ ರಾಜಕಾರಣ

ಕೇಂದ್ರದ ಬಿಜೆಪಿ ಸರಕಾರವು ತನ್ನ ಅಧೀನದಲ್ಲಿರುವ ಸಿಬಿಐ, ಐ.ಟಿ ಹಾಗೂ ಇ.ಡಿ.ಯನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್‌ ಮುಖಂಡರ ಮೇಲೆ ದಾಳಿ ಮಾಡಿಸಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್‌ ಆರೋಪಿಸಿದರು.

Vijaya Karnataka 2 Jun 2018, 5:00 am
ನರಸಿಂಹರಾಜಪುರ :ಕೇಂದ್ರದ ಬಿಜೆಪಿ ಸರಕಾರವು ತನ್ನ ಅಧೀನದಲ್ಲಿರುವ ಸಿಬಿಐ, ಐ.ಟಿ ಹಾಗೂ ಇ.ಡಿ.ಯನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್‌ ಮುಖಂಡರ ಮೇಲೆ ದಾಳಿ ಮಾಡಿಸಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್‌ ಆರೋಪಿಸಿದರು.
Vijaya Karnataka Web hate politics from the center
ಕೇಂದ್ರದಿಂದ ದ್ವೇಷದ ರಾಜಕಾರಣ


ಅವರು ಶುಕ್ರವಾರ ಕಾಂಗ್ರೆಸ್‌ ಕಚೇರಿಯಲ್ಲಿ ಸ್ದುದಿಗೋಷ್ಠಿಯಲ್ಲಿ ಮಾತನಾಡಿದರು.ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಪೂರ್ಣ ಪ್ರಮಾಣದಲ್ಲಿ ಬಹುಮತ ಬರದಿದ್ದರೂ ಅಧಿಕಾರ ಹಿಡಿಯುವ ಕನಸು ಕಂಡಿದ್ದರು. ಸಂವಿಧಾನದ ವ್ಯಾಪ್ತಿಯಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಸಮ್ಮಿಶ್ರ ಸರಕಾರ ರಚನೆ ಮಾಡಿ ಅಧಿಕಾರ ಹಿಡಿದಿರುವುದರಿಂದ ಮುಜುಗರಕ್ಕೆ ಒಳಗಾಗಿರುವ ಬಿಜೆಪಿ ಈಗ ಸೇಡಿನ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್‌ Üುುಖಂಡರಾದ ಡಿ.ಕೆ.ಶಿವಕುಮಾರ್‌ ಹಾಗೂ ಡಿ.ಕೆ.ಸುರೇಶ್‌ ಅವರ ಮನೆ ಮೇಲೆ ಸಿಬಿಐ ದಾಳಿ ಮಾಡಿದೆ.ಗುಜರಾತ್‌ ಚುನಾವಣೆ ಸಂದರ್ಭದಲ್ಲೂ ಡಿ.ಕೆ. ಶಿವಕುಮಾರ್‌ ಮನೆ ಮೇಲೆ ಐ.ಟಿ.ದಾಳಿ ನಡೆಸಲಾಗಿತ್ತು.ಈ ರೀತಿ ದ್ವೇಷದ ರಾಜಕಾರಣವನ್ನು ಕಾಂಗ್ರೆಸ್‌ ಪಕ್ಷವು ಖಂಡಿಸುತ್ತದೆ ಎಂದರು.

ಬಿಜೆಪಿ ಜನಪ್ರಿಯತೆ ಕುಗ್ಗಿದೆ : ಪ್ರಸ್ತುತ ಬಿಜೆಪಿ ಜನಪ್ರಿಯತೆ ಕುಗ್ಗುತ್ತಿದೆ. ಉಪ ಚುನಾವಣೆಯಲ್ಲಿ 4 ಲೋಕ ಸಭಾ ಕ್ಷೇತ್ರ ಹಾಗೂ 14 ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋತಿದ್ದು, ಕಾಂಗ್ರೆಸ್‌ ಹಾಗೂ ಮಿತ್ರ ಪಕ್ಷಗಳು ಜಯಗಳಿಸಿದೆ.ಕಾಂಗ್ರೆಸ್‌ಗೆ ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕಿಂತ ಶೇಕಡವಾರು ಮತ ಹೆಚ್ಚು ಬಂದಿದೆ. ನಮಗೆ ಜನರ ಬೆಂಬಲ ಸಿಕ್ಕಿದೆ ಎಂದರು.

ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯು ಜೂ.8 ರಂದು ನಡೆಯಲಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳಾದ ಎಸ್‌.ಪಿ.ದಿನೇಶ್‌ ಹಾಗೂ ಕೆ.ಕೆ.ಮಂಜುನಾಥ್‌ ಜಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣಾ ನೀತಿ ಸಂವಿತೆ ಮುಗಿದ ನಂತರ ನೂತನ ಶಾಸಕ ಟಿ.ಡಿ.ರಾಜೇಗೌಡ ಅವರು ನರಸಿಂಹರಾಜಪುರದಲ್ಲಿ ಮತದಾರರು ಹಾಗೂ ಕಾರ್ಯಕರ್ತರಿಗೆ ಅಭಿನಂದಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಗೋಷ್ಠಿಯಲ್ಲಿ ಕಾಂಗ್ರೆಸ್‌ ಪಕ್ಷದ ಮುಖಂಡರಾದ ಅಂಜುಂ, ಕೆ.ಎ.ಅಬೂಬಕರ್‌, ಬಿಳಾಲುಮನೆ ಉಪೇಂದ್ರ,ಇ.ಸಿ. ಶೇವಿಯಾರ್‌, ಎಚ್‌.ಇ. ಮಹೇಶ್‌, ಇ.ಸಿ.ಜೋಯಿ, ರಘು, ಅಹಮ್ಮದ್‌ ಮುಂತಾದವರಿದ್ದರು.

---------

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ