ಕರ್ತವ್ಯದಲ್ಲಿ ಸೇವಾ ಮನೋಭಾವವಿರಲಿ: ಡಿಸಿ
ಗೃಹ ರಕ್ಷಕ ದಳದ ಸಿಬ್ಬಂದಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಬೇಕು ಎಂದು ಡಿಸಿ ಎಂ.ಕೆ.ಶ್ರೀರಂಗಯ್ಯ ಹೇಳಿದರು.
Vijaya Karnataka 28 Apr 2018, 5:00 am
ಚಿಕ್ಕಮಗಳೂರು : ಗೃಹ ರಕ್ಷಕ ದಳದ ಸಿಬ್ಬಂದಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಬೇಕು ಎಂದು ಡಿಸಿ ಎಂ.ಕೆ.ಶ್ರೀರಂಗಯ್ಯ ಹೇಳಿದರು.
ರಾಮನಹಳ್ಳಿ ಪೊಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಗೃಹ ರಕ್ಷಕರ ಮೂಲ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಗೃಹ ರಕ್ಷ ಕ ದಳದ ಸಿಬ್ಬಂದಿ ಹೆಚ್ಚು ಸಹಕಾರ ನೀಡಿ ತಮ್ಮ ಕರ್ತವ್ಯವನ್ನು ಅತ್ಯಂತ ಜವಾಬ್ದಾರಿ ಯುತವಾಗಿ ನಿರ್ವಹಿಸಬೇಕು. ದೇಶದ ಪ್ರತಿಯೊಬ್ಬ ಪ್ರಜೆಯೂ ದೇಶ ಸೇವೆಗೆ ಮುಂದಾಗಬೇಕು ಎಂದು ಹೇಳಿದರು.
ಎಸ್ಪಿ ಕೆ.ಅಣ್ಣಾಮಲೈ ಮಾತನಾಡಿ, ಗೃಹ ರಕ್ಷ ಕ ದಳದಲ್ಲಿ 250ಕ್ಕೂ ಹೆಚ್ಚು ಸಿಬ್ಬಂದಿ ಕೆಲಸಕ್ಕೆ ಸೇರ್ಪಡೆಯಾಗಿ 10 ದಿನ ವಿಶೇಷ ತರಬೇತಿ ಪಡೆಯಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಕೆಲಸಕ್ಕೆ ಸೇರಿದ್ದಾರೆ. ಮುಂದೆ ಪೊಲೀಸ್ ಇಲಾಖೆಯಿಂದ ಕೆಲಸಕ್ಕೆ ತೆಗೆದುಕೊಳ್ಳುವಾಗ ಈ ತರಬೇತಿ ಶಿಬಿರವು ಹೆಚ್ಚು ಸಹಕಾರಿಯಾಗುತ್ತದೆ ಎಂದರು.
ಚುನಾವಣೆ ಸಂದರ್ಭ ಗೃಹ ರಕ್ಷ ಕ ದಳದ ಸಿಬ್ಬಂದಿ ಇಲ್ಲದೆ ಇದ್ದರೆ ಪೊಲೀಸ್ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತದೆ. ಗೃಹರಕ್ಷ ಕ ದಳದ ಸಿಬ್ಬಂದಿ ಮಾನಸಿಕವಾಗಿ ಸದೃಢವಾಗಿ ಉತ್ತಮ ಕರ್ತವ್ಯ ನಿರ್ವಹಿಸಬೇಕು. ಪ್ರತಿಯೊಬ್ಬರೂ ನಿಮ್ಮ ರಕ್ಷ ಣೆಗಾಗಿ ವಿಮೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಜಿಲ್ಲಾ ಗೃಹ ರಕ್ಷ ಕ ದಳದ ಸಮಾದೇಷ್ಠ ಆರ್.ಅನಿಲ್ ಕುಮಾರ್ ಮಾತನಾಡಿ, ದೇಶದಲ್ಲಿ ಗಡಿ ಕಾಯುವ ಸೈನಿಕರು ಯಾವ ರೀತಿ ಕರ್ತವ್ಯ ನಿರ್ವಹಿಸುತ್ತಾರೊ ಅದೇ ರೀತಿ ದೇಶದ ಒಳಗೆ ಪೊಲೀಸ್ ಇಲಾಖೆ ಮತ್ತು ಗೃಹ ರಕ್ಷ ಕ ದಳದ ಸಿಬ್ಬಂದಿ ತಮ್ಮ ಸೇವೆ ಸಲ್ಲಿಸಬೇಕು.ಇದೇ ಪ್ರಥಮ ಬಾರಿಗೆ ಜಿಲ್ಲೆಯಲ್ಲಿ 250 ಸಿಬ್ಬಂದಿ ನೇಮಿಸಿಕೊಳ್ಳಲಾಗಿದೆ. ನಮ್ಮ ಇಲಾಖೆಯ ಸಿಬ್ಬಂದಿ ಸ್ವಯಂ ಪ್ರೇರಿತರಾಗಿ ಶಿಸ್ತಿನಿಂದ ಕರ್ತವ್ಯ ನಿರ್ವಹಿಸಬೇಕು ಎಂದರು. ಕ್ರೈಸ್ತ ದಯಾಕುಮಾರ್ ಸ್ವಾಗತಿಸಿ, ಹಾಲಮ್ಮ- ಚಂದ್ರಶೇಖರ್ ನಿರೂಪಿಸಿದರು. ಬಸವರಾಜ್ ವಂದಿಸಿದರು.
ರಾಮನಹಳ್ಳಿ ಪೊಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಗೃಹ ರಕ್ಷಕರ ಮೂಲ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಗೃಹ ರಕ್ಷ ಕ ದಳದ ಸಿಬ್ಬಂದಿ ಹೆಚ್ಚು ಸಹಕಾರ ನೀಡಿ ತಮ್ಮ ಕರ್ತವ್ಯವನ್ನು ಅತ್ಯಂತ ಜವಾಬ್ದಾರಿ ಯುತವಾಗಿ ನಿರ್ವಹಿಸಬೇಕು. ದೇಶದ ಪ್ರತಿಯೊಬ್ಬ ಪ್ರಜೆಯೂ ದೇಶ ಸೇವೆಗೆ ಮುಂದಾಗಬೇಕು ಎಂದು ಹೇಳಿದರು.
ಎಸ್ಪಿ ಕೆ.ಅಣ್ಣಾಮಲೈ ಮಾತನಾಡಿ, ಗೃಹ ರಕ್ಷ ಕ ದಳದಲ್ಲಿ 250ಕ್ಕೂ ಹೆಚ್ಚು ಸಿಬ್ಬಂದಿ ಕೆಲಸಕ್ಕೆ ಸೇರ್ಪಡೆಯಾಗಿ 10 ದಿನ ವಿಶೇಷ ತರಬೇತಿ ಪಡೆಯಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಕೆಲಸಕ್ಕೆ ಸೇರಿದ್ದಾರೆ. ಮುಂದೆ ಪೊಲೀಸ್ ಇಲಾಖೆಯಿಂದ ಕೆಲಸಕ್ಕೆ ತೆಗೆದುಕೊಳ್ಳುವಾಗ ಈ ತರಬೇತಿ ಶಿಬಿರವು ಹೆಚ್ಚು ಸಹಕಾರಿಯಾಗುತ್ತದೆ ಎಂದರು.
ಚುನಾವಣೆ ಸಂದರ್ಭ ಗೃಹ ರಕ್ಷ ಕ ದಳದ ಸಿಬ್ಬಂದಿ ಇಲ್ಲದೆ ಇದ್ದರೆ ಪೊಲೀಸ್ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತದೆ. ಗೃಹರಕ್ಷ ಕ ದಳದ ಸಿಬ್ಬಂದಿ ಮಾನಸಿಕವಾಗಿ ಸದೃಢವಾಗಿ ಉತ್ತಮ ಕರ್ತವ್ಯ ನಿರ್ವಹಿಸಬೇಕು. ಪ್ರತಿಯೊಬ್ಬರೂ ನಿಮ್ಮ ರಕ್ಷ ಣೆಗಾಗಿ ವಿಮೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಜಿಲ್ಲಾ ಗೃಹ ರಕ್ಷ ಕ ದಳದ ಸಮಾದೇಷ್ಠ ಆರ್.ಅನಿಲ್ ಕುಮಾರ್ ಮಾತನಾಡಿ, ದೇಶದಲ್ಲಿ ಗಡಿ ಕಾಯುವ ಸೈನಿಕರು ಯಾವ ರೀತಿ ಕರ್ತವ್ಯ ನಿರ್ವಹಿಸುತ್ತಾರೊ ಅದೇ ರೀತಿ ದೇಶದ ಒಳಗೆ ಪೊಲೀಸ್ ಇಲಾಖೆ ಮತ್ತು ಗೃಹ ರಕ್ಷ ಕ ದಳದ ಸಿಬ್ಬಂದಿ ತಮ್ಮ ಸೇವೆ ಸಲ್ಲಿಸಬೇಕು.ಇದೇ ಪ್ರಥಮ ಬಾರಿಗೆ ಜಿಲ್ಲೆಯಲ್ಲಿ 250 ಸಿಬ್ಬಂದಿ ನೇಮಿಸಿಕೊಳ್ಳಲಾಗಿದೆ. ನಮ್ಮ ಇಲಾಖೆಯ ಸಿಬ್ಬಂದಿ ಸ್ವಯಂ ಪ್ರೇರಿತರಾಗಿ ಶಿಸ್ತಿನಿಂದ ಕರ್ತವ್ಯ ನಿರ್ವಹಿಸಬೇಕು ಎಂದರು. ಕ್ರೈಸ್ತ ದಯಾಕುಮಾರ್ ಸ್ವಾಗತಿಸಿ, ಹಾಲಮ್ಮ- ಚಂದ್ರಶೇಖರ್ ನಿರೂಪಿಸಿದರು. ಬಸವರಾಜ್ ವಂದಿಸಿದರು.