ಆ್ಯಪ್ನಗರ

ಚಿಕ್ಕಮಗಳೂರು: ಕಾಫಿನಾಡಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಚಿಕ್ಕಮಗಳೂರಿನಲ್ಲಿ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಕೊರೊನಾ ಇರುವುದರಿಂದ ಈ ಬಾರಿಯ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದರು. ಅಲ್ಲದೆ ಅಭಿಮಾನಿಗಳು ಯಾರು ಕೂಡ ಹುಟ್ಟುಹಬ್ಬವನ್ನು ಆಚರಿಸದಂತೆಯೂ ಮನವಿ ಮಾಡಿದ್ದರು.

Vijaya Karnataka Web 17 Dec 2020, 7:15 am
ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸದ್ದಿಲ್ಲದೆ ಚಿಕ್ಕಮಗಳೂರಿಗೆ ಆಗಮಿಸಿ ರೆಸಾರ್ಟ್‌ವೊಂದರಲ್ಲಿ ಬುಧವಾರ ಸರಳವಾಗಿ ಹುಟ್ಟಿದ ಹಬ್ಬ ಆಚರಿಸಿಕೊಂಡಿದ್ದಾರೆ. ಜೆಡಿಎಸ್‌ನ ಸ್ಥಳೀಯ ಮುಖಂಡರು, ಕಾರ‍್ಯಕರ್ತರಿಗೂ ಮಾಹಿತಿ ತಿಳಿಯದಂತೆ ಮಂಗಳವಾರ ಆಗಮಿಸಿದ್ದ ಕುಮಾರಸ್ವಾಮಿ, ಮುಳ್ಳಯ್ಯನಗಿರಿ ಸಮೀಪದಲ್ಲಿರುವ ರೆಸಾರ್ಟ್‌ನಲ್ಲಿ ವಾಸ್ತವ್ಯ ಮಾಡಿದ್ದರು.
Vijaya Karnataka Web HD KUMARASWAMY BIRTHDAY


ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಬೋಜೇಗೌಡ, ಶಾಸಕ ಸಾ.ರಾ.ಮಹೇಶ್‌, ಜೆಡಿಎಸ್‌ ಮುಖಂಡ ಸಿರಾಜ್‌ ಸೇರಿದಂತೆ ಕೆಲವೇ ಸ್ನೇಹಿತರೊಂದಿಗೆ ರೆಸಾರ್ಟ್‌ನಲ್ಲಿ ಬುಧವಾರ ಕೇಕ್‌ ಕತ್ತರಿಸಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್‌ ಕಾರ‍್ಯಕರ್ತರು ನಗರದಲ್ಲಿ ಬುಧವಾರ ರಕ್ತದಾನ, ವಿಶೇಷ ಪೂಜೆ ಆಯೋಜಿಸಿದ್ದರು. ಆದರೆ, ತಮ್ಮ ನಾಯಕ ಚಿಕ್ಕಮಗಳೂರಿನಲ್ಲೇ ಇರುವ ಮಾಹಿತಿ ಪಕ್ಷದ ಬಹುತೇಕ ಮುಖಂಡರು, ಕಾರ‍್ಯಕರ್ತರಿಗೆ ತಿಳಿದಿರಲಿಲ್ಲ.

ಕೊರೊನಾ ಸಂಕಷ್ಟ ಇರುವುದರಿಂದ ಈ ಬಾರಿಯ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದರು. ಅಲ್ಲದೆ ಅಭಿಮಾನಿಗಳು ಯಾರು ಕೂಡ ಹುಟ್ಟುಹಬ್ಬವನ್ನು ಆಚರಿಸದಂತೆಯೂ ಮನವಿ ಮಾಡಿದ್ದರು. ಮನೆಯತ್ತ ಬರುವುದು ಬೇಡ ಎಂದಿದ್ದರು. ಈ ಹಿಂದೆ ಕೂಡ ಮುಂಬಯಿ ಮೇಲೆ ಉಗ್ರರ ದಾಳಿ ನಡೆದಾಗಲೂ ಎಚ್‌ಡಿಕೆ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ.

ಕಸ್ತೂರಿ ರಂಗನ್‌ ವರದಿ ವಿರೋಧಿಸಿ 16 ಗ್ರಾ.ಪಂ.ಗಳಲ್ಲಿ ಚುನಾವಣೆ ಬಹಿಷ್ಕಾರ..! ಸರ್ವಪಕ್ಷದಿಂದ ಭಾರೀ ಪ್ರತಿಭಟನೆ..!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ